AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಅವ್ಯವಸ್ಥೆ; ತನಿಖೆ ನಡೆಸುವಂತೆ ಸಿಎಂ ಸೂಚನೆ

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಅವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ, ಹಣಕಾಸು ಅವ್ಯವಹಾರ ಹಾಗೂ ಅಕ್ರಮ ಬಡ್ತಿ ಬಗ್ಗೆಯೂ ತನಿಖೆ ನಡೆಸಲು ಸಿಎಸ್‌ಗೆ ಹೇಳಿದ್ದು, 15 ದಿನಗಳಲ್ಲಿ ವರದಿ ಸಲ್ಲಿಸುವಂತೆಯೂ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಅವ್ಯವಸ್ಥೆ; ತನಿಖೆ ನಡೆಸುವಂತೆ ಸಿಎಂ ಸೂಚನೆ
ನೆಫ್ರೋ ಯುರಾಲಜಿ ಸಂಸ್ಥೆ, ಸಿದ್ದರಾಮಯ್ಯ
Pramod Shastri G
| Edited By: |

Updated on: Sep 12, 2023 | 8:14 PM

Share

ಬೆಂಗಳೂರು, ಸೆ.12: ನಗರದ ವಿಕ್ಟೋರಿಯಾ ಆಸ್ಪತ್ರೆ (Victoria Hospital) ಆವರಣದಲ್ಲಿರುವ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ 5 ರೋಗಿಗಳು ಕೋಮಾಗೆ ಹೋಗಿದ್ದರು. ಈ ಮಾಹಿತಿಯನ್ನು ನೆಫ್ರೋ ಯುರಾಲಜಿ ಸಂಸ್ಥೆಯ ಪ್ರಭಾರಿ ನಿರ್ದೇಶಕ ಡಾ.ಕೇಶವ ಮೂರ್ತಿ ಮುಚ್ಚಿಟ್ಟಿದ್ದರು. ಈ ಬಗ್ಗೆ ಡಾ.ಶಂಕರ್ ಗುಹಾ ಹಾಗೂ ಮಾಜಿ ಎಂಎಲ್‌ಸಿ ಪಿ.ಆರ್ ರಮೇಶ್‌ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ಇದೀಗ ಡಾ.ಕೇಶವ ಮೂರ್ತಿ ವಿರುದ್ಧ ತನಿಖೆ ನಡೆಸುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಅವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ, ಹಣಕಾಸು ಅವ್ಯವಹಾರ ಹಾಗೂ ಅಕ್ರಮ ಬಡ್ತಿ ಬಗ್ಗೆಯೂ ತನಿಖೆ ನಡೆಸಲು ಸಿಎಸ್‌ಗೆ ಹೇಳಿದ್ದು, 15 ದಿನಗಳಲ್ಲಿ ವರದಿ ಸಲ್ಲಿಸುವಂತೆಯೂ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇದರ ಜೊತೆಗೆ ಕೂಡಲೇ ನೆಫ್ರೋ ಯುರಾಲಜಿ ಸಂಸ್ಥೆಗೆ ಮುಖ್ಯ ಆಡಳಿತಾಧಿಕಾರಿ ನೇಮಿಸುವಂತೆಯೂ ಸಿಎಂ ಆದೇಶಿಸಿದ್ದಾರೆ.

ಇದನ್ನೂ ಓದಿ:ಚಲಿಸುತ್ತಿದ್ದ ನಿಜಾಮುದ್ದೀನ್ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಜ್ಞೆ ತಪ್ಪಿದ ಪ್ರಯಾಣಿಕರು, ನಾಲ್ವರಿಗೆ ಬಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

ಸಂಸ್ಥೆಯಲ್ಲಿ ಆಪರೇಷನ್ ಮಾಡಿಸಿಕೊಂಡಿದ್ದ ರೋಗಿಗಳ ಪೈಕಿ ನಾಲ್ವರ ಸಾವು, ಐದು ಜನರ ಸ್ಥಿತಿ ಗಂಭೀರ

ಇನ್ನು ಈ ಸಂಸ್ಥೆಯಲ್ಲಿ ಆಪರೇಷನ್ ಮಾಡಿಸಿಕೊಂಡಿದ್ದ ರೋಗಿಗಳ ಪೈಕಿ ನಾಲ್ವರು ಈಗಾಗಲೇ ಸಾವನ್ನಪ್ಪಿದ್ದು, ಐವರು ರೋಗಿಗಳು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಮತ್ತು ಕಳೆದ 11 ತಿಂಗಳಿಂದ ರಾಮನಗರ ಮೂಲದ ರಂಜಿತ್‌ರಾಜ್ ಎಂಬುವವರು ಕೋಮಾದಲ್ಲಿದ್ದಾರೆ. ಈ ಬಗ್ಗೆ ಹಿರಿಯ ವೈದ್ಯಾಧಿಕಾರಿಗಳಿಗೆ, ಆರೋಗ್ಯ ಇಲಾಖೆಗೆ ಮಾಹಿತಿ ನೀಡಿರಲಿಲ್ಲ. ವೈದ್ಯರ ನಿರ್ಲಕ್ಷ್ಯದ ಬಗ್ಗೆ ಡಾ.ಕೇಶವಮೂರ್ತಿ.ಆರ್‌ ಮಾಹಿತಿ ಮುಚ್ಚಿಟ್ಟ ಆರೋಪ ಇದೀಗ ಅವರ ಹುದ್ದೆಯನ್ನು ಕಳದುಕೊಳ್ಳುವ ಸ್ಥಿತಿಗೆ ಬಂದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!