AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಅವ್ಯವಸ್ಥೆ; ತನಿಖೆ ನಡೆಸುವಂತೆ ಸಿಎಂ ಸೂಚನೆ

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಅವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ, ಹಣಕಾಸು ಅವ್ಯವಹಾರ ಹಾಗೂ ಅಕ್ರಮ ಬಡ್ತಿ ಬಗ್ಗೆಯೂ ತನಿಖೆ ನಡೆಸಲು ಸಿಎಸ್‌ಗೆ ಹೇಳಿದ್ದು, 15 ದಿನಗಳಲ್ಲಿ ವರದಿ ಸಲ್ಲಿಸುವಂತೆಯೂ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಅವ್ಯವಸ್ಥೆ; ತನಿಖೆ ನಡೆಸುವಂತೆ ಸಿಎಂ ಸೂಚನೆ
ನೆಫ್ರೋ ಯುರಾಲಜಿ ಸಂಸ್ಥೆ, ಸಿದ್ದರಾಮಯ್ಯ
Pramod Shastri G
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 12, 2023 | 8:14 PM

Share

ಬೆಂಗಳೂರು, ಸೆ.12: ನಗರದ ವಿಕ್ಟೋರಿಯಾ ಆಸ್ಪತ್ರೆ (Victoria Hospital) ಆವರಣದಲ್ಲಿರುವ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ 5 ರೋಗಿಗಳು ಕೋಮಾಗೆ ಹೋಗಿದ್ದರು. ಈ ಮಾಹಿತಿಯನ್ನು ನೆಫ್ರೋ ಯುರಾಲಜಿ ಸಂಸ್ಥೆಯ ಪ್ರಭಾರಿ ನಿರ್ದೇಶಕ ಡಾ.ಕೇಶವ ಮೂರ್ತಿ ಮುಚ್ಚಿಟ್ಟಿದ್ದರು. ಈ ಬಗ್ಗೆ ಡಾ.ಶಂಕರ್ ಗುಹಾ ಹಾಗೂ ಮಾಜಿ ಎಂಎಲ್‌ಸಿ ಪಿ.ಆರ್ ರಮೇಶ್‌ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ಇದೀಗ ಡಾ.ಕೇಶವ ಮೂರ್ತಿ ವಿರುದ್ಧ ತನಿಖೆ ನಡೆಸುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಅವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ, ಹಣಕಾಸು ಅವ್ಯವಹಾರ ಹಾಗೂ ಅಕ್ರಮ ಬಡ್ತಿ ಬಗ್ಗೆಯೂ ತನಿಖೆ ನಡೆಸಲು ಸಿಎಸ್‌ಗೆ ಹೇಳಿದ್ದು, 15 ದಿನಗಳಲ್ಲಿ ವರದಿ ಸಲ್ಲಿಸುವಂತೆಯೂ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇದರ ಜೊತೆಗೆ ಕೂಡಲೇ ನೆಫ್ರೋ ಯುರಾಲಜಿ ಸಂಸ್ಥೆಗೆ ಮುಖ್ಯ ಆಡಳಿತಾಧಿಕಾರಿ ನೇಮಿಸುವಂತೆಯೂ ಸಿಎಂ ಆದೇಶಿಸಿದ್ದಾರೆ.

ಇದನ್ನೂ ಓದಿ:ಚಲಿಸುತ್ತಿದ್ದ ನಿಜಾಮುದ್ದೀನ್ ಎಕ್ಸ್​ಪ್ರೆಸ್ ರೈಲಿನಲ್ಲಿ ಪ್ರಜ್ಞೆ ತಪ್ಪಿದ ಪ್ರಯಾಣಿಕರು, ನಾಲ್ವರಿಗೆ ಬಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

ಸಂಸ್ಥೆಯಲ್ಲಿ ಆಪರೇಷನ್ ಮಾಡಿಸಿಕೊಂಡಿದ್ದ ರೋಗಿಗಳ ಪೈಕಿ ನಾಲ್ವರ ಸಾವು, ಐದು ಜನರ ಸ್ಥಿತಿ ಗಂಭೀರ

ಇನ್ನು ಈ ಸಂಸ್ಥೆಯಲ್ಲಿ ಆಪರೇಷನ್ ಮಾಡಿಸಿಕೊಂಡಿದ್ದ ರೋಗಿಗಳ ಪೈಕಿ ನಾಲ್ವರು ಈಗಾಗಲೇ ಸಾವನ್ನಪ್ಪಿದ್ದು, ಐವರು ರೋಗಿಗಳು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಮತ್ತು ಕಳೆದ 11 ತಿಂಗಳಿಂದ ರಾಮನಗರ ಮೂಲದ ರಂಜಿತ್‌ರಾಜ್ ಎಂಬುವವರು ಕೋಮಾದಲ್ಲಿದ್ದಾರೆ. ಈ ಬಗ್ಗೆ ಹಿರಿಯ ವೈದ್ಯಾಧಿಕಾರಿಗಳಿಗೆ, ಆರೋಗ್ಯ ಇಲಾಖೆಗೆ ಮಾಹಿತಿ ನೀಡಿರಲಿಲ್ಲ. ವೈದ್ಯರ ನಿರ್ಲಕ್ಷ್ಯದ ಬಗ್ಗೆ ಡಾ.ಕೇಶವಮೂರ್ತಿ.ಆರ್‌ ಮಾಹಿತಿ ಮುಚ್ಚಿಟ್ಟ ಆರೋಪ ಇದೀಗ ಅವರ ಹುದ್ದೆಯನ್ನು ಕಳದುಕೊಳ್ಳುವ ಸ್ಥಿತಿಗೆ ಬಂದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್