AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರು ಬಳಸಿ ವಂಚನೆ; ಇಬ್ಬರ ವಿರುದ್ಧ ದೂರು ದಾಖಲು

ಇನ್ಫೋಸಿಸ್ ಮುಖ್ಯಸ್ಥೆ ಡಾ ಸುಧಾಮೂರ್ತಿಯವರ ಹೆಸರು ಬಳಸಿಕೊಂಡು ವಂಚನೆ ಮಾಡಲಾಗುತ್ತಿದ್ದು ಸುಧಾಮೂರ್ತಿಯವರ PA ಮಮತ ಸಂಜಯ್ ಎಂಬುವವರು ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶೃತಿ ಹಾಗೂ ಲಾವಣ್ಯ ಎಂಬುವರ ವಿರುದ್ದ ದೂರು ದಾಖಲಾಗಿದೆ.

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರು ಬಳಸಿ ವಂಚನೆ; ಇಬ್ಬರ ವಿರುದ್ಧ ದೂರು ದಾಖಲು
ಡಾ ಸುಧಾಮೂರ್ತಿ
Shivaprasad B
| Edited By: |

Updated on:Sep 24, 2023 | 7:45 AM

Share

ಬೆಂಗಳೂರು, ಸೆ.24: ಬಹು ಕೋಟಿ ಒಡತಿ, ಸರಳ, ಸಜ್ಜನ, ಪರೋಪಕಾರಿ ಗುಣವನ್ನು ಹೊಂದಿರುವ ಇನ್ಫೋಸಿಸ್ ಮುಖ್ಯಸ್ಥೆ ಡಾ ಸುಧಾಮೂರ್ತಿಯವರ (Infosys Sudha Murty) ಹೆಸರು ಬಳಸಿಕೊಂಡು ವಂಚನೆ ಮಾಡಲಾಗುತ್ತಿದ್ದು ಸುಧಾಮೂರ್ತಿಯವರ PA ಮಮತ ಸಂಜಯ್ ಎಂಬುವವರು ಈ ಬಗ್ಗೆ ಜಯನಗರ ಪೊಲೀಸ್ (Jayanagar Police Station) ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶೃತಿ ಹಾಗೂ ಲಾವಣ್ಯ ಎಂಬುವರ ವಿರುದ್ದ ದೂರು ದಾಖಲಾಗಿದೆ. ಆರೋಪಿಗಳು ಸುಧಾಮೂರ್ತಿಯವರ ಪೋಟೋಗಳನ್ನ ಬಳಸಿ ಜಾಹಿರಾತು ನೀಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಟಿಕೆಟ್ ಮಾರಾಟ ಮಾಡಿ ವಂಚಿಸುತ್ತಿದ್ದರು. ಸದ್ಯ ವಂಚನೆ ಬೆಳಕಿಗೆ ಬಂದಿದ್ದು ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

KKNC (Kannada koota of Northen California) ದಿಂದ 50 ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿಯವರಿಗೆ ಆಹ್ವಾನಿಸಲಾಗಿತ್ತು. ಆದ್ರೆ ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲವೆಂದು ಇಮೇಲ್ ಮೂಲಕ Dr.ಸುಧಾಮೂರ್ತಿ ಅವರು ಸಂದೇಶ‌ ಕಳಿಸಿದ್ದರು. ಈ ಮಧ್ಯೆ ಕಿಡಿಗೇಡಿಗಳು ಸಮಯ ಬಳಿಸಿಕೊಂಡು ಸುಧಾಮೂರ್ತಿಯವರ ಪೋಟೋಗಳನ್ನ ಬಳಸಿ KKNC ಕಾರ್ಯಕ್ರಮಕ್ಕೆ ಬರುತ್ತಾರೆಂದು ಸಾಮಾಜಿಕ ಜಾಲತಾಣದಲ್ಲಿ ಜಾಹಿರಾತು ನೀಡಿ ಕಾರ್ಯಕ್ರಮಕ್ಕೆ ಟಿಕೆಟ್ ಮಾರಾಟ ಮಾಡಿದ್ದಾರೆ. ಮೂರ್ತಿ ಟ್ರಸ್ಟ್​ನ ಕಚೇರಿ ಎಂದು ಹೆಸರು ಸೃಷ್ಠಿಸಿ ಸುಧಾಮೂರ್ತಿಯವರ ಅಸಿಸ್ಟೆಂಟ್ ಎಂದು ವಂಚಿಸಿದ್ದಾರೆ. ಲಾವಣ್ಯ ಎಂಬುವರು ಕಾರ್ಯಕ್ರಮಕ್ಕೆ ಸುಧಾಮೂರ್ತಿ ಮೇಡಂ ಬರೋದಾಗಿ ಹೇಳಿ ವಂಚನೆ‌‌ ಮಾಡಿದ್ದಾರೆ. ಈ ಬಗ್ಗೆ KKNC ಕಾರ್ಯಕ್ರಮ ಆಯೋಜನೆ ಮಾಡುವವರಿಗೆ ಕರೆ ಮಾಡಿ ವಿಚಾರಿಸಿದಾಗ ಸುಧಾಮೂರ್ತಿಯವರ ಅಸಿಸ್ಟೆಂಟ್ ಕರೆ ಮಾಡಿ ಸುಧಾಮೂರ್ತಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿಸಿದ್ದಾರೆ ಎಂದು ಆಯೋಜಕರು ಹೇಳಿದ್ದಾರೆ.

ಇದನ್ನೂ ಓದಿ: ಮಂತ್ರಾಲಯ ರಾಯರ ದರ್ಶನ ಪಡೆದ ರಿಷಿ ಸುನಕ್ ಪೋಷಕರು, ಬೀಗರಿಗೆ ಸುಧಾಮೂರ್ತಿ ಸಾಥ್

ಇಷ್ಟೇ ಅಲ್ಲದೆ ಹೀಗೆ ಅಮೆರಿಕಾದಲ್ಲಿ meet and greet with ಡಾ.ಸುಧಾಮೂರ್ತಿ ಕಾರ್ಯಕ್ರಮ ಆಯೋಜಿಸಿರುವುದಾಗಿ ಟಿಕೆಟ್ ಮಾರಾಟ ಮಾಡಿದ್ದಾರೆ. ಅಮೆರಿಕಾದ sewa milpitas ಎಂಬಲ್ಲಿ ಕಾರ್ಯಕ್ರಮ ಆಯೋಜಿಸಿರುವುದಾಗಿ ಟಿಕೆಟ್ ಮಾರಾಟ ಮಾಡಿದ್ದಾರೆ. ಪ್ರತಿ ಟಿಕೆಟ್​ಗೆ 40 ಡಾಲರ್ ಪಡೆದಿರುವ ಆರೋಪ ಕೇಳಿ ಬಂದಿದೆ. ಈ ರೀತಿ ಸುಧಾಮೂರ್ತಿಯವರಿಗೆ ತಿಳಿಯದೆಯೇ ವಿದೇಶಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವ ಬಗ್ಗೆ ಅನುಮಾನ ಬಂದು ಕಂಪನಿಯಲ್ಲಿ ಪ್ರಶ್ನಿಸಿದಾಗ ವಂಚನೆ ಬೆಳಕಿಗೆ ಬಂದಿದೆ. ಸದ್ಯ ಜಯನಗರ ಠಾಣೆಯಲ್ಲಿ ಐಟಿ ಆಕ್ಟ್ 66c, 66d ಹಾಗೂ ಐಪಿಸಿ 419, 420 ಕಾಯ್ದೆಯಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:37 am, Sun, 24 September 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?