AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವಿನ ಹಣ್ಣಿನಲ್ಲೂ ರಾಸಾಯನಿಕ ಭೀತಿ: ಖರೀದಿ ವೇಳೆ ಎಚ್ಚರ ವಹಿಸುವಂತೆ ತಜ್ಞರ ಸಲಹೆ

ಹಣ್ಣುಗಳ ರಾಜ ಮಾವಿಗೆ ಈಗ ಬೇಡಿಕೆ ಹೆಚ್ಚಿದ್ದು, ಎಲ್ಲರೂ ಮಾವು ಖರೀದಿಸಲು ಮುಗಿ ಬೀಳುತ್ತಿದ್ದಾರೆ. ಬೆಂಗಳೂರಿನ ಹಲವು ಕಡೆಗಳಲ್ಲಿ ನಾನಾ ತಳಿಯ ಮಾವು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು ಮಾವು ಪ್ರಿಯರ ಕೈ ಬೀಸಿ ಕರೆಯುತ್ತಿವೆ. ಆದರೆ ನೋಡಲು ಚೆನ್ನಾಗಿದೆ, ಹಣ್ಣಾಗಿದೆ, ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಯಮಾರಿದರೆ ಆರೋಗ್ಯ ಹದಗೆಡುವುದು ಪಕ್ಕಾ. ಕಾರಣವೇನು? ತಜ್ಞರು ಹೇಳುವುದೇನು ಎಂಬ ಮಾಹಿತಿ ಇಲ್ಲಿದೆ.

ಮಾವಿನ ಹಣ್ಣಿನಲ್ಲೂ ರಾಸಾಯನಿಕ ಭೀತಿ: ಖರೀದಿ ವೇಳೆ ಎಚ್ಚರ ವಹಿಸುವಂತೆ ತಜ್ಞರ ಸಲಹೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Apr 24, 2025 | 9:34 AM

ಬೆಂಗಳೂರು, ಏಪ್ರಿಲ್ 24: ಮಾವಿನ ಹಣ್ಣಿನ ಸೀಸನ್ (Mango Season) ಶುರುವಾದ ಬೆನ್ನಲ್ಲೇ ಗ್ರಾಹಕರಿಂದ ಬೇಡಿಕೆ (Mango Demand) ಹೆಚ್ಚಳವಾಗಿದೆ. ವಿವಿಧ ಮಾವಿನ ತಳಿಗಳಾದ ಬಾದಾಮಿ, ಸಿಂಧೂರ, ರಸಪುರ, ಬೈಗಂಪಲ್ಲಿ, ಕೇಸರ್, ಮಲ್ಲಿಕಾ, ಇಮಾಮ್ ಪಸಂದ್, ಮಲಗೋ ಶುಗರ್ ಬೇಬಿ, ಕಲ ಇಷಾದ್ ಈಗಾಗಲೇ ಮಾರುಕಟ್ಟೆಗೆ (Market) ಲಗ್ಗೆ ಇಟ್ಟಿವೆ. ಮಾವಿನ ದರ ಕಳೆದ ಬಾರಿಗಿಂತ ಸ್ವಲ್ಪ ದುಬಾರಿ ಆದರೂ ವರ್ಷಕ್ಕೊಮ್ಮೆ ಸಿಗುವ ಮಾವಿನ ಸವಿಯಿಂದ ತಪ್ಪಿಸಿಕೊಳ್ಳಲು ಇಚ್ಛಿಸದ ಗ್ರಾಹಕರು ಖರೀದಿಯಲ್ಲಿ ತೊಡಗಿದ್ದಾರೆ.

ಆದರೆ ನೋಡಲು ಚೆನ್ನಾಗಿದೆ, ಹಣ್ಣಾಗಿದೆ, ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಯಮಾರಿದರೆ ಆರೋಗ್ಯ ಹದಗೆಡುವುದು ಪಕ್ಕಾ. ಏಕೆಂದರೆ, ರಾಸಾಯನಿಕಗಳನ್ನು ಬಳಸಿ ಮಾವನ್ನು ಹಣ್ಣಗಿಸುವ ಬಗ್ಗೆ ಆತಂಕ ವ್ಯಕ್ತವಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಈ ಬಗ್ಗೆ ಗ್ರಾಹಕರಿಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕು ಮತ್ತು ರಾಸಾಯನಿಕ ಬಳಕೆ ಬಗ್ಗೆ ಪರಿಶೀಲನೆ ನಡೆಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ಮಾವು ಖರೀದಿ ಬಗ್ಗೆ ಆರೋಗ್ಯ ತಜ್ಞರು ನೀಡಿದ ಸಲಹೆ ಏನು?

ಮಾವು ಖರೀದಿಸುವ ವಿಚಾರದಲ್ಲಿ ಆರೋಗ್ಯ ತಜ್ಞರು ಕೂಡ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಮಾವಿನ ಹಣ್ಣುಗಳನ್ನು ಖರೀದಿಸುವಾಗ ಅದು ಪರಿಶುದ್ಧವಾಗಿದೆಯೇ ಎಂದು ಪರಿಶೀಲಿಸಿಕೊಳ್ಳುವಂತೆ  ಆಹಾರ ತಜ್ಞ ಡಾ. ಕೀರ್ತಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ
Image
ಪನ್ನೀರ್ ಪ್ರಿಯರಿಗೆ ಶಾಕಿಂಗ್ ಸುದ್ದಿ:ವರದಿಯಲ್ಲಿ ಬ್ಯಾಕ್ಟೀರಿಯಾ ಅಂಶ ಪತ್ತೆ
Image
ಅಂಗಡಿಯಿಂದ ಪನೀರ್​ ಖರೀದಿಸುವಾಗ ಗಮನಿಸಬೇಕಾದ ಅಂಶಗಳಿವು
Image
ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
Image
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೂ ಬರಬಹುದು ಕ್ಯಾನ್ಸರ್‌!

ಪರಿಶೀಲಿಸುವುದು ಹೇಗೆಂಬ ಮಾಹಿತಿ ಈ ಕೆಳಗಿನ ಲಿಂಕ್​​ನಲ್ಲಿದೆ.

ಇದನ್ನೂ ಓದಿ: ಮಾವನ್ನು ರಾಸಾಯನಿಕ ಬೆರೆಸಿ ಹಾಕಿ ಹಣ್ಣು ಮಾಡಿದ್ದಾರೆಯೇ ಎಂದು ತಿಳಿಯುವುದು ಹೇಗೆ?

ಹಣ್ಣನ್ನು ಮಾಗಿಸಲು ಅನೇಕ ರಾಸಾಯನಿಕಗಳನ್ನು ಬಳಸಲಾಗುತ್ತಿದೆ ಎಂಬ ಆರೋಪಗಳಿದ್ದು, ಅದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ರಾಸಾಯನಿಕಗಳಿಂದ ಹಣ್ಣಾದ ಮಾವು ಸೇವನೆಯಿಂದ ಗಂಟಲು ಕೆರೆತ, ತುರಿಕೆ, ಚರ್ಮದ ಸಮಸ್ಯೆ, ಅಲರ್ಜಿಯಿಂದ ಹಿಡಿದು ದೀರ್ಘಕಾಲಿಕ ಸಮಸ್ಯೆಗಳು ಕಾಡಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದು, ಆಹಾರ ಸುರಕ್ಷತೆ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ. ಅದೇ ರೀತಿ ಸಾರ್ವಜನಿಕರು ಕೂಡ ಈ ಬಗ್ಗೆ ಮುಂಜಾಗ್ರತೆ ವಹಿಸುವುದು ಉತ್ತಮ.

ವರದಿ: ಲಕ್ಷ್ಮಿ ನರಸಿಂಹ, ‘ಟಿವಿ9’

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 am, Thu, 24 April 25

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ