ಮಾವಿನ ಹಣ್ಣಿನಲ್ಲೂ ರಾಸಾಯನಿಕ ಭೀತಿ: ಖರೀದಿ ವೇಳೆ ಎಚ್ಚರ ವಹಿಸುವಂತೆ ತಜ್ಞರ ಸಲಹೆ

ಹಣ್ಣುಗಳ ರಾಜ ಮಾವಿಗೆ ಈಗ ಬೇಡಿಕೆ ಹೆಚ್ಚಿದ್ದು, ಎಲ್ಲರೂ ಮಾವು ಖರೀದಿಸಲು ಮುಗಿ ಬೀಳುತ್ತಿದ್ದಾರೆ. ಬೆಂಗಳೂರಿನ ಹಲವು ಕಡೆಗಳಲ್ಲಿ ನಾನಾ ತಳಿಯ ಮಾವು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು ಮಾವು ಪ್ರಿಯರ ಕೈ ಬೀಸಿ ಕರೆಯುತ್ತಿವೆ. ಆದರೆ ನೋಡಲು ಚೆನ್ನಾಗಿದೆ, ಹಣ್ಣಾಗಿದೆ, ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಯಮಾರಿದರೆ ಆರೋಗ್ಯ ಹದಗೆಡುವುದು ಪಕ್ಕಾ. ಕಾರಣವೇನು? ತಜ್ಞರು ಹೇಳುವುದೇನು ಎಂಬ ಮಾಹಿತಿ ಇಲ್ಲಿದೆ.

ಮಾವಿನ ಹಣ್ಣಿನಲ್ಲೂ ರಾಸಾಯನಿಕ ಭೀತಿ: ಖರೀದಿ ವೇಳೆ ಎಚ್ಚರ ವಹಿಸುವಂತೆ ತಜ್ಞರ ಸಲಹೆ
ಸಾಂದರ್ಭಿಕ ಚಿತ್ರ

Updated on: Apr 24, 2025 | 9:34 AM

ಬೆಂಗಳೂರು, ಏಪ್ರಿಲ್ 24: ಮಾವಿನ ಹಣ್ಣಿನ ಸೀಸನ್ (Mango Season) ಶುರುವಾದ ಬೆನ್ನಲ್ಲೇ ಗ್ರಾಹಕರಿಂದ ಬೇಡಿಕೆ (Mango Demand) ಹೆಚ್ಚಳವಾಗಿದೆ. ವಿವಿಧ ಮಾವಿನ ತಳಿಗಳಾದ ಬಾದಾಮಿ, ಸಿಂಧೂರ, ರಸಪುರ, ಬೈಗಂಪಲ್ಲಿ, ಕೇಸರ್, ಮಲ್ಲಿಕಾ, ಇಮಾಮ್ ಪಸಂದ್, ಮಲಗೋ ಶುಗರ್ ಬೇಬಿ, ಕಲ ಇಷಾದ್ ಈಗಾಗಲೇ ಮಾರುಕಟ್ಟೆಗೆ (Market) ಲಗ್ಗೆ ಇಟ್ಟಿವೆ. ಮಾವಿನ ದರ ಕಳೆದ ಬಾರಿಗಿಂತ ಸ್ವಲ್ಪ ದುಬಾರಿ ಆದರೂ ವರ್ಷಕ್ಕೊಮ್ಮೆ ಸಿಗುವ ಮಾವಿನ ಸವಿಯಿಂದ ತಪ್ಪಿಸಿಕೊಳ್ಳಲು ಇಚ್ಛಿಸದ ಗ್ರಾಹಕರು ಖರೀದಿಯಲ್ಲಿ ತೊಡಗಿದ್ದಾರೆ.

ಆದರೆ ನೋಡಲು ಚೆನ್ನಾಗಿದೆ, ಹಣ್ಣಾಗಿದೆ, ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಯಮಾರಿದರೆ ಆರೋಗ್ಯ ಹದಗೆಡುವುದು ಪಕ್ಕಾ. ಏಕೆಂದರೆ, ರಾಸಾಯನಿಕಗಳನ್ನು ಬಳಸಿ ಮಾವನ್ನು ಹಣ್ಣಗಿಸುವ ಬಗ್ಗೆ ಆತಂಕ ವ್ಯಕ್ತವಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಈ ಬಗ್ಗೆ ಗ್ರಾಹಕರಿಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕು ಮತ್ತು ರಾಸಾಯನಿಕ ಬಳಕೆ ಬಗ್ಗೆ ಪರಿಶೀಲನೆ ನಡೆಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ಮಾವು ಖರೀದಿ ಬಗ್ಗೆ ಆರೋಗ್ಯ ತಜ್ಞರು ನೀಡಿದ ಸಲಹೆ ಏನು?

ಮಾವು ಖರೀದಿಸುವ ವಿಚಾರದಲ್ಲಿ ಆರೋಗ್ಯ ತಜ್ಞರು ಕೂಡ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಮಾವಿನ ಹಣ್ಣುಗಳನ್ನು ಖರೀದಿಸುವಾಗ ಅದು ಪರಿಶುದ್ಧವಾಗಿದೆಯೇ ಎಂದು ಪರಿಶೀಲಿಸಿಕೊಳ್ಳುವಂತೆ  ಆಹಾರ ತಜ್ಞ ಡಾ. ಕೀರ್ತಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ
ಪನ್ನೀರ್ ಪ್ರಿಯರಿಗೆ ಶಾಕಿಂಗ್ ಸುದ್ದಿ:ವರದಿಯಲ್ಲಿ ಬ್ಯಾಕ್ಟೀರಿಯಾ ಅಂಶ ಪತ್ತೆ
ಅಂಗಡಿಯಿಂದ ಪನೀರ್​ ಖರೀದಿಸುವಾಗ ಗಮನಿಸಬೇಕಾದ ಅಂಶಗಳಿವು
ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೂ ಬರಬಹುದು ಕ್ಯಾನ್ಸರ್‌!

ಪರಿಶೀಲಿಸುವುದು ಹೇಗೆಂಬ ಮಾಹಿತಿ ಈ ಕೆಳಗಿನ ಲಿಂಕ್​​ನಲ್ಲಿದೆ.

ಇದನ್ನೂ ಓದಿ: ಮಾವನ್ನು ರಾಸಾಯನಿಕ ಬೆರೆಸಿ ಹಾಕಿ ಹಣ್ಣು ಮಾಡಿದ್ದಾರೆಯೇ ಎಂದು ತಿಳಿಯುವುದು ಹೇಗೆ?

ಹಣ್ಣನ್ನು ಮಾಗಿಸಲು ಅನೇಕ ರಾಸಾಯನಿಕಗಳನ್ನು ಬಳಸಲಾಗುತ್ತಿದೆ ಎಂಬ ಆರೋಪಗಳಿದ್ದು, ಅದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ರಾಸಾಯನಿಕಗಳಿಂದ ಹಣ್ಣಾದ ಮಾವು ಸೇವನೆಯಿಂದ ಗಂಟಲು ಕೆರೆತ, ತುರಿಕೆ, ಚರ್ಮದ ಸಮಸ್ಯೆ, ಅಲರ್ಜಿಯಿಂದ ಹಿಡಿದು ದೀರ್ಘಕಾಲಿಕ ಸಮಸ್ಯೆಗಳು ಕಾಡಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದು, ಆಹಾರ ಸುರಕ್ಷತೆ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ. ಅದೇ ರೀತಿ ಸಾರ್ವಜನಿಕರು ಕೂಡ ಈ ಬಗ್ಗೆ ಮುಂಜಾಗ್ರತೆ ವಹಿಸುವುದು ಉತ್ತಮ.

ವರದಿ: ಲಕ್ಷ್ಮಿ ನರಸಿಂಹ, ‘ಟಿವಿ9’

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 am, Thu, 24 April 25

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us