AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ

Madhu Bangarappa Cheque Bounce Case: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕೋರ್ಟ್ ಶಿಕ್ಷೆ ನೀಡಿದೆ. ದಂಡದ ರೂಪದಲ್ಲಿ ಶಿಕ್ಷೆಯಾಗಿದ್ದು, ಒಂದು ವೇಳೆ ದಂಡ ಕಟ್ಟದಿದ್ದರೆ ಆರು ತಿಂಗಳು ಜೈಲುವಾಸ ಅನುಭವಿಸಲು ಕೋರ್ಟ್ ಆದೇಶಿಸಿದೆ.

ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ
ಸಚಿವ ಮಧು ಬಂಗಾರಪ್ಪ
Ramesha M
| Edited By: |

Updated on:Dec 29, 2023 | 5:50 PM

Share

ಬೆಂಗಳೂರು, (ಡಿಸೆಂಬರ್ 29): ಚೆಕ್ ಬೌನ್ಸ್ ಪ್ರಕರಣಕ್ಕೆ (Cheque Bounce Case) ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ(Madhu Bangarappa)  ಕೋರ್ಟ್ ಶಿಕ್ಷೆ ನೀಡಿದೆ. 6 ಕೋಟಿ 96 ಲಕ್ಷದ 70 ಸಾವಿರ ರೂಪಾಯಿ ದಂಡ‌ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ(special court)  ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ‌ ಅನುಭವಿಸಲು ಆದೇಶಿಸಿದೆ.

6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡದ ಹಣದಲ್ಲಿ 6,96,60,000 ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಇನ್ನುಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: Cheque Bounce Case: 6.6 ಕೋಟಿ ರೂ. ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ ಜಾಮೀನು

ಕೋರ್ಟ್​ನಲ್ಲಿ ಕೇವಲ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ 30ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದ್ರೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುಚ್ಚಳಿಕೆ ಒಪ್ಪಲು ನಿರಾಕರಿಸಿದೆ. ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ. ಹೀಗಾಗಿ ಜಡ್ಜ್ ಜೆ.ಪ್ರೀತ್ ಅವರು ಮಧು ಬಂಗಾರಪ್ಪ ಮನವಿ ತಿರಸ್ಕರಿಸಿದ್ದಾರೆ.

ಪ್ರಕರಣ ಹಿನ್ನೆಲೆ

ಆಕಾಶ್ ಆಡಿಯೋ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ ಅವರು ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆಗೆ 6.60 ಕೋಟಿ ಬಾಕಿ ಪಾವತಿಗೆ ಚೆಕ್ ನೀಡಿದ್ದರು. ಆದ್ರೆ, 2011ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆ ಮಧು ಬಂಗಾರಪ್ಪ ವಿರುದ್ಧ 6.60ಕೋಟಿ ಚೆಕ್​ಬೌನ್ಸ್ ಕೇಸ್ ದಾಖಲಿಸಿತ್ತು. ಆದ್ರೆ, ಮಧು ಬಂಗಾರಪ್ಪ ಅವರು ಜಾಮೀನು ಪಡೆದುಕೊಂಡಿದ್ದರು.

Published On - 5:41 pm, Fri, 29 December 23

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?