AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ

Madhu Bangarappa Cheque Bounce Case: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕೋರ್ಟ್ ಶಿಕ್ಷೆ ನೀಡಿದೆ. ದಂಡದ ರೂಪದಲ್ಲಿ ಶಿಕ್ಷೆಯಾಗಿದ್ದು, ಒಂದು ವೇಳೆ ದಂಡ ಕಟ್ಟದಿದ್ದರೆ ಆರು ತಿಂಗಳು ಜೈಲುವಾಸ ಅನುಭವಿಸಲು ಕೋರ್ಟ್ ಆದೇಶಿಸಿದೆ.

ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ
ಸಚಿವ ಮಧು ಬಂಗಾರಪ್ಪ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Dec 29, 2023 | 5:50 PM

ಬೆಂಗಳೂರು, (ಡಿಸೆಂಬರ್ 29): ಚೆಕ್ ಬೌನ್ಸ್ ಪ್ರಕರಣಕ್ಕೆ (Cheque Bounce Case) ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ(Madhu Bangarappa)  ಕೋರ್ಟ್ ಶಿಕ್ಷೆ ನೀಡಿದೆ. 6 ಕೋಟಿ 96 ಲಕ್ಷದ 70 ಸಾವಿರ ರೂಪಾಯಿ ದಂಡ‌ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ(special court)  ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ‌ ಅನುಭವಿಸಲು ಆದೇಶಿಸಿದೆ.

6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡದ ಹಣದಲ್ಲಿ 6,96,60,000 ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಇನ್ನುಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: Cheque Bounce Case: 6.6 ಕೋಟಿ ರೂ. ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ ಜಾಮೀನು

ಕೋರ್ಟ್​ನಲ್ಲಿ ಕೇವಲ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ 30ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದ್ರೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುಚ್ಚಳಿಕೆ ಒಪ್ಪಲು ನಿರಾಕರಿಸಿದೆ. ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ. ಹೀಗಾಗಿ ಜಡ್ಜ್ ಜೆ.ಪ್ರೀತ್ ಅವರು ಮಧು ಬಂಗಾರಪ್ಪ ಮನವಿ ತಿರಸ್ಕರಿಸಿದ್ದಾರೆ.

ಪ್ರಕರಣ ಹಿನ್ನೆಲೆ

ಆಕಾಶ್ ಆಡಿಯೋ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ ಅವರು ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆಗೆ 6.60 ಕೋಟಿ ಬಾಕಿ ಪಾವತಿಗೆ ಚೆಕ್ ನೀಡಿದ್ದರು. ಆದ್ರೆ, 2011ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆ ಮಧು ಬಂಗಾರಪ್ಪ ವಿರುದ್ಧ 6.60ಕೋಟಿ ಚೆಕ್​ಬೌನ್ಸ್ ಕೇಸ್ ದಾಖಲಿಸಿತ್ತು. ಆದ್ರೆ, ಮಧು ಬಂಗಾರಪ್ಪ ಅವರು ಜಾಮೀನು ಪಡೆದುಕೊಂಡಿದ್ದರು.

Published On - 5:41 pm, Fri, 29 December 23

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ