AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ

Madhu Bangarappa Cheque Bounce Case: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕೋರ್ಟ್ ಶಿಕ್ಷೆ ನೀಡಿದೆ. ದಂಡದ ರೂಪದಲ್ಲಿ ಶಿಕ್ಷೆಯಾಗಿದ್ದು, ಒಂದು ವೇಳೆ ದಂಡ ಕಟ್ಟದಿದ್ದರೆ ಆರು ತಿಂಗಳು ಜೈಲುವಾಸ ಅನುಭವಿಸಲು ಕೋರ್ಟ್ ಆದೇಶಿಸಿದೆ.

ಚೆಕ್ ಬೌನ್ಸ್ ಕೇಸ್: ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿದ ಕೋರ್ಟ್, ಕಟ್ಟದಿದ್ದರೆ ಜೈಲು ಶಿಕ್ಷೆ
ಸಚಿವ ಮಧು ಬಂಗಾರಪ್ಪ
Ramesha M
| Edited By: |

Updated on:Dec 29, 2023 | 5:50 PM

Share

ಬೆಂಗಳೂರು, (ಡಿಸೆಂಬರ್ 29): ಚೆಕ್ ಬೌನ್ಸ್ ಪ್ರಕರಣಕ್ಕೆ (Cheque Bounce Case) ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ(Madhu Bangarappa)  ಕೋರ್ಟ್ ಶಿಕ್ಷೆ ನೀಡಿದೆ. 6 ಕೋಟಿ 96 ಲಕ್ಷದ 70 ಸಾವಿರ ರೂಪಾಯಿ ದಂಡ‌ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ(special court)  ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ‌ ಅನುಭವಿಸಲು ಆದೇಶಿಸಿದೆ.

6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡದ ಹಣದಲ್ಲಿ 6,96,60,000 ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಇನ್ನುಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: Cheque Bounce Case: 6.6 ಕೋಟಿ ರೂ. ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ ಜಾಮೀನು

ಕೋರ್ಟ್​ನಲ್ಲಿ ಕೇವಲ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ 30ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದ್ರೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುಚ್ಚಳಿಕೆ ಒಪ್ಪಲು ನಿರಾಕರಿಸಿದೆ. ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ. ಹೀಗಾಗಿ ಜಡ್ಜ್ ಜೆ.ಪ್ರೀತ್ ಅವರು ಮಧು ಬಂಗಾರಪ್ಪ ಮನವಿ ತಿರಸ್ಕರಿಸಿದ್ದಾರೆ.

ಪ್ರಕರಣ ಹಿನ್ನೆಲೆ

ಆಕಾಶ್ ಆಡಿಯೋ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ ಅವರು ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆಗೆ 6.60 ಕೋಟಿ ಬಾಕಿ ಪಾವತಿಗೆ ಚೆಕ್ ನೀಡಿದ್ದರು. ಆದ್ರೆ, 2011ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜೇಶ್ ಎಕ್ಸ್​ಪೋರ್ಟ್ ಸಂಸ್ಥೆ ಮಧು ಬಂಗಾರಪ್ಪ ವಿರುದ್ಧ 6.60ಕೋಟಿ ಚೆಕ್​ಬೌನ್ಸ್ ಕೇಸ್ ದಾಖಲಿಸಿತ್ತು. ಆದ್ರೆ, ಮಧು ಬಂಗಾರಪ್ಪ ಅವರು ಜಾಮೀನು ಪಡೆದುಕೊಂಡಿದ್ದರು.

Published On - 5:41 pm, Fri, 29 December 23

Follow Us
Ramesha M
Ramesha M
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!