AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಸಂಸ್ಕಾರದ ಸಾಕಾರ ಪುನೀತ್​ ರಾಜ್​ಕುಮಾರ್: ಸಿಎಂ ಬಸವರಾಜ ಬೊಮ್ಮಾಯಿ ಭಾವುಕ ಮಾತು

ಎದೆನೋವಿನಿಂದ ಪುನೀತ್ ಆಸ್ಪತ್ರೆಗೆ ಸೇರಿದರು. ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದಿಸಿದರು.

ತಂದೆಯ ಸಂಸ್ಕಾರದ ಸಾಕಾರ ಪುನೀತ್​ ರಾಜ್​ಕುಮಾರ್: ಸಿಎಂ ಬಸವರಾಜ ಬೊಮ್ಮಾಯಿ ಭಾವುಕ ಮಾತು
ಪುನೀತ್ ರಾಜ್​ಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Oct 29, 2021 | 4:27 PM

Share

ಬೆಂಗಳೂರು: ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ್ದ ನಟ ಪುನೀತ್ ರಾಜ್​ಕುಮಾರ್ ನಿಧನ ನಾಡಿಗೆ ತುಂಬಲಾರದ ನಷ್ಟ. ಈ ಸುದ್ದಿ ನಮಗೆ ಆಘಾತ ತಂದಿದೆ. ಎದೆನೋವಿನಿಂದ ಪುನೀತ್ ಆಸ್ಪತ್ರೆಗೆ ಸೇರಿದರು. ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದಿಸಿದರು.

ನಟ ಪುನೀತ್ ರಾಜ್​ಕುಮಾರ್ ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದರು. ನಿನ್ನೆಯಷ್ಟೇ ಕರೆ ಮಾಡಿ ಮಾತನಾಡಿದ್ದರು. ಇಂದು ನನ್ನ ಭೇಟಿಗೆ ಸಮಯ ಸಹ ನಿಗದಿ ಮಾಡಲಾಗಿತ್ತು. ಕನ್ನಡ ರಾಜ್ಯೋತ್ಸವದ ಕುರಿತು ಖಾಸಗಿ ವೆಬ್​ಸೈಟ್​​ ಆರಂಭಿಸುವ ಕುರಿತು ನನ್ನನ್ನು ಭೇಟಿಯಾಗಲು ಉದ್ದೇಶಿಸಿದ್ದರು. ಆದರೆ ವಿಧಿಯಟ ಆಟ ಬೇರೆಯೇ ಆಗಿತ್ತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ತಮ್ಮ ತಂದೆ ಮೇರು ನಟ ಡಾ.ರಾಜ್​ಕುಮಾರ್ ಅವರ ಗುಣಗಳನ್ನೇ ಪುನೀತ್ ರಾಜ್​ಕುಮಾರ್ ಅಳವಡಿಸಿಕೊಂಡಿದ್ದರು. ಅವರ ಗೌರವಕ್ಕೆ ಧಕ್ಕೆಯಾಗದಂತೆ ಅಭಿಮಾನಿಗಳು ನಡೆದುಕೊಳ್ಳಬೇಕು. ಶಾಂತಿ ಕಾಪಾಡಬೇಕು. ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು.

ಪುನೀತ್​ ರಾಜ್​ಕುಮಾರ್​ ನಿಧನ; ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ: ದೊಡ್ಡವರಿಗಷ್ಟೇ ಅಲ್ಲ ಮಕ್ಕಳಿಗೂ ಅಪ್ಪು ಅಚ್ಚುಮೆಚ್ಚು: ಪುನೀತ್ ರಾಜ್​ಕುಮಾರ್ ಬಾಲ ನಟನಾಗಿ ಅಭಿನಯಿಸಿದ್ದ 10 ಚಿತ್ರಗಳಿವು ಇದನ್ನೂ ಓದಿ: Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು

Follow Us
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ