AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಮುಂಗಾರು ವಿಕೋಪ ತಡೆಯಲು ಪೂರ್ವಸಿದ್ಧತೆ ಪರಿಶೀಲನೆ; ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಸಿಎಂ ಸೂಚನೆ

BS Yediyurappa: ಬೆಂಗಳೂರು ಮೇಘ ಸಂದೇಶ ಆಪ್ ನಲ್ಲಿ ಮಳೆಯ ಪ್ರಮಾಣದ ಮಾಹಿತಿ ಲಭ್ಯ. ನೀರು ಸಂಗ್ರಹವಾಗಿರುವ ಸ್ಥಳಗಳು, ಜನರಿಗೆ ಸುರಕ್ಷಿತ ಮಾರ್ಗ ಬಳಕೆಯ ಕುರಿತು ಮಾಹಿತಿ ನೀಡುತ್ತದೆ. 209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳ ಗುರುತಿಸಲಾಗಿದೆ. (58 ಅತಿ ಸೂಕ್ಷ್ಮ, 151 ಸೂಕ್ಷ್ಮ ಪ್ರದೇಶ) ಈ ಪ್ರದೇಶಗಳಲ್ಲಿ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ರೂಪಿಸುವಂತೆ ಸೂಚಿಸಿದರು.

ರಾಜಧಾನಿಯಲ್ಲಿ ಮುಂಗಾರು ವಿಕೋಪ ತಡೆಯಲು ಪೂರ್ವಸಿದ್ಧತೆ ಪರಿಶೀಲನೆ; ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಸಿಎಂ ಸೂಚನೆ
ರಾಜಧಾನಿಯಲ್ಲಿ ಮುಂಗಾರು ವಿಕೋಪ ತಡೆಯಲು ಪೂರ್ವಸಿದ್ಧತೆ ಪರಿಶೀಲನೆ; ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ನಿರ್ದೇಶನ
TV9 Web
| Edited By: ಸಾಧು ಶ್ರೀನಾಥ್​|

Updated on:Jun 03, 2021 | 2:51 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.ಬಿಬಿಎಂಪಿಯ 8 ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, 63 ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಈ ನಿಯಂತ್ರಣ ಕೊಠಡಿಗಳು ಕಾರ್ಯನಿರ್ವಹಿಸಲಿದ್ದು, ಅನ್-ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು, ಮತ್ತು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳನ್ನು ಸಂಗ್ರಹಿಸಲು ಕ್ರಮ ವಹಿಸಲಾಗುತ್ತಿದೆ.

ರಸ್ತೆ ಬದಿ ಮಳೆ ನೀರು ಚರಂಡಿಗಳ ಹೂಳು ತೆರವುಗೊಳಿಸುವುದು, ಅಡ್ಡ ಮೋರಿಗಳ ಹೂಳು ತೆಗೆಯುವುದು, ರಾಜ ಕಾಲುವೆಗೆ ಸಂಪರ್ಕಿಸುವ ಚರಂಡಿಗಳನ್ನು ಗುರುತಿಸಿ ಸುಸ್ಥಿತಿಯಲ್ಲಿಡಲು ಕ್ರಮ ವಹಿಸಲಾಗಿದೆ. ದೊಡ್ಡ ಕಾಲುವೆಗಳಲ್ಲಿ 26 ವಾಟರ್ ಲೆವೆಲ್ ಸೆನ್ಸರ್ ಗಳನ್ನು ಅಳವಡಿಸಲಾಗಿದೆ.

ಮೇಘ ಸಂದೇಶ ಆಪ್ ನಲ್ಲಿ ಮಳೆ ಮಾಹಿತಿ

 chief minister bs yediyurappa attends meeting to control monsoon effect in bbmp zones in bengaluru

ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಪೂರ್ವ ಸಿದ್ಧತೆ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು ಮೇಘ ಸಂದೇಶ ಆಪ್ ನಲ್ಲಿ ಮಳೆಯ ಪ್ರಮಾಣದ ಮಾಹಿತಿ ಲಭ್ಯ. ನೀರು ಸಂಗ್ರಹವಾಗಿರುವ ಸ್ಥಳಗಳು, ಜನರಿಗೆ ಸುರಕ್ಷಿತ ಮಾರ್ಗ ಬಳಕೆಯ ಕುರಿತು ಮಾಹಿತಿ ನೀಡುತ್ತದೆ. 209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳ ಗುರುತಿಸಲಾಗಿದೆ. (58 ಅತಿ ಸೂಕ್ಷ್ಮ, 151 ಸೂಕ್ಷ್ಮ ಪ್ರದೇಶ) ಈ ಪ್ರದೇಶಗಳಲ್ಲಿ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ರೂಪಿಸುವಂತೆ ಸೂಚಿಸಿದರು.

ಬೆಂಗಳೂರು ನಗರದಲ್ಲಿ ತಡೆಗೋಡೆ ಇರುವ 440 ಕಿ.ಮೀ. ಉದ್ದದ ರಾಜಕಾಲುವೆ ಪ್ರದೇಶಗಳ ವಾರ್ಷಿಕ ನಿರ್ವಹಣೆಗೆ ಕ್ರಮ ವಹಿಸಲಾಗಿದೆ. ನಗರದ ಕೆರೆಗಳನ್ನು ದೈನಂದಿನ ಆಧಾರದಲ್ಲಿ ನಿರ್ವಹಿಸಲಾಗುತ್ತಿದ್ದು, ಮಳೆನೀರು ರಾಜಕಾಲುವೆಗಳ ಮೂಲಕ ಕೆರೆಗಳಿಗೆ ಹರಿಯುವಂತೆ ಮಾಡುವುದರಿಂದ ಪ್ರವಾಹ ತಪ್ಪಿಸಬಹುದು ಎಂದು ಸಲಹೆ ನೀಡಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಅರಣ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಅಬಕಾರಿ ಸಚಿವ ಗೋಪಾಲಯ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Published On - 2:48 pm, Thu, 3 June 21

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ