AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಮುಂಗಾರು ವಿಕೋಪ ತಡೆಯಲು ಪೂರ್ವಸಿದ್ಧತೆ ಪರಿಶೀಲನೆ; ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಸಿಎಂ ಸೂಚನೆ

BS Yediyurappa: ಬೆಂಗಳೂರು ಮೇಘ ಸಂದೇಶ ಆಪ್ ನಲ್ಲಿ ಮಳೆಯ ಪ್ರಮಾಣದ ಮಾಹಿತಿ ಲಭ್ಯ. ನೀರು ಸಂಗ್ರಹವಾಗಿರುವ ಸ್ಥಳಗಳು, ಜನರಿಗೆ ಸುರಕ್ಷಿತ ಮಾರ್ಗ ಬಳಕೆಯ ಕುರಿತು ಮಾಹಿತಿ ನೀಡುತ್ತದೆ. 209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳ ಗುರುತಿಸಲಾಗಿದೆ. (58 ಅತಿ ಸೂಕ್ಷ್ಮ, 151 ಸೂಕ್ಷ್ಮ ಪ್ರದೇಶ) ಈ ಪ್ರದೇಶಗಳಲ್ಲಿ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ರೂಪಿಸುವಂತೆ ಸೂಚಿಸಿದರು.

ರಾಜಧಾನಿಯಲ್ಲಿ ಮುಂಗಾರು ವಿಕೋಪ ತಡೆಯಲು ಪೂರ್ವಸಿದ್ಧತೆ ಪರಿಶೀಲನೆ; ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಸಿಎಂ ಸೂಚನೆ
ರಾಜಧಾನಿಯಲ್ಲಿ ಮುಂಗಾರು ವಿಕೋಪ ತಡೆಯಲು ಪೂರ್ವಸಿದ್ಧತೆ ಪರಿಶೀಲನೆ; ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ನಿರ್ದೇಶನ
TV9 Web
| Edited By: |

Updated on:Jun 03, 2021 | 2:51 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.ಬಿಬಿಎಂಪಿಯ 8 ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, 63 ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಈ ನಿಯಂತ್ರಣ ಕೊಠಡಿಗಳು ಕಾರ್ಯನಿರ್ವಹಿಸಲಿದ್ದು, ಅನ್-ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು, ಮತ್ತು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳನ್ನು ಸಂಗ್ರಹಿಸಲು ಕ್ರಮ ವಹಿಸಲಾಗುತ್ತಿದೆ.

ರಸ್ತೆ ಬದಿ ಮಳೆ ನೀರು ಚರಂಡಿಗಳ ಹೂಳು ತೆರವುಗೊಳಿಸುವುದು, ಅಡ್ಡ ಮೋರಿಗಳ ಹೂಳು ತೆಗೆಯುವುದು, ರಾಜ ಕಾಲುವೆಗೆ ಸಂಪರ್ಕಿಸುವ ಚರಂಡಿಗಳನ್ನು ಗುರುತಿಸಿ ಸುಸ್ಥಿತಿಯಲ್ಲಿಡಲು ಕ್ರಮ ವಹಿಸಲಾಗಿದೆ. ದೊಡ್ಡ ಕಾಲುವೆಗಳಲ್ಲಿ 26 ವಾಟರ್ ಲೆವೆಲ್ ಸೆನ್ಸರ್ ಗಳನ್ನು ಅಳವಡಿಸಲಾಗಿದೆ.

ಮೇಘ ಸಂದೇಶ ಆಪ್ ನಲ್ಲಿ ಮಳೆ ಮಾಹಿತಿ

 chief minister bs yediyurappa attends meeting to control monsoon effect in bbmp zones in bengaluru

ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಪೂರ್ವ ಸಿದ್ಧತೆ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು ಮೇಘ ಸಂದೇಶ ಆಪ್ ನಲ್ಲಿ ಮಳೆಯ ಪ್ರಮಾಣದ ಮಾಹಿತಿ ಲಭ್ಯ. ನೀರು ಸಂಗ್ರಹವಾಗಿರುವ ಸ್ಥಳಗಳು, ಜನರಿಗೆ ಸುರಕ್ಷಿತ ಮಾರ್ಗ ಬಳಕೆಯ ಕುರಿತು ಮಾಹಿತಿ ನೀಡುತ್ತದೆ. 209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳ ಗುರುತಿಸಲಾಗಿದೆ. (58 ಅತಿ ಸೂಕ್ಷ್ಮ, 151 ಸೂಕ್ಷ್ಮ ಪ್ರದೇಶ) ಈ ಪ್ರದೇಶಗಳಲ್ಲಿ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ರೂಪಿಸುವಂತೆ ಸೂಚಿಸಿದರು.

ಬೆಂಗಳೂರು ನಗರದಲ್ಲಿ ತಡೆಗೋಡೆ ಇರುವ 440 ಕಿ.ಮೀ. ಉದ್ದದ ರಾಜಕಾಲುವೆ ಪ್ರದೇಶಗಳ ವಾರ್ಷಿಕ ನಿರ್ವಹಣೆಗೆ ಕ್ರಮ ವಹಿಸಲಾಗಿದೆ. ನಗರದ ಕೆರೆಗಳನ್ನು ದೈನಂದಿನ ಆಧಾರದಲ್ಲಿ ನಿರ್ವಹಿಸಲಾಗುತ್ತಿದ್ದು, ಮಳೆನೀರು ರಾಜಕಾಲುವೆಗಳ ಮೂಲಕ ಕೆರೆಗಳಿಗೆ ಹರಿಯುವಂತೆ ಮಾಡುವುದರಿಂದ ಪ್ರವಾಹ ತಪ್ಪಿಸಬಹುದು ಎಂದು ಸಲಹೆ ನೀಡಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಅರಣ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಅಬಕಾರಿ ಸಚಿವ ಗೋಪಾಲಯ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Published On - 2:48 pm, Thu, 3 June 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ