AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್​​ ಈಶ್ವರ್​​ ಕಣ್ಣೀರು

Pradeep Eshwar: ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ್ದಾರೆ. ಈ ವೇಳೆ ಮಾಜಿ ಸಿಎಂ ಧೈರ್ಯ ಹೇಲಿದ್ದು, ಘಟನೆ ಸಂಬಂಧ ಗೃಹ ಸಚಿವರ ಜೊತೆಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ಪ್ರದೀಪ್​​ ಬೆಂಬಲಿಸಿ ಸಿಎಂ ಡಿಕೆಶಿ ಕೂಡ ಪೋಸ್ಟ್​​ ಮಾಡಿದ್ದು, ವಿಪಕ್ಷಗಳ ವಿರುದ್ಧ ತೀವ್ರ ಆಕ್ರೋಶವನ್ನವರು ವ್ಯಕ್ತಪಡಿಸಿದ್ದಾರೆ.

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್​​ ಈಶ್ವರ್​​ ಕಣ್ಣೀರು
ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಪ್ರದೀಪ್​​ ಈಶ್ವರ್​​Image Credit source: Siddaramaiah X Account
ಪ್ರಸನ್ನ ಗಾಂವ್ಕರ್​
| Edited By: |

Updated on:Jun 30, 2026 | 3:58 PM

Share

ಮುಖ್ಯಾಂಶಗಳು

  • ಚಪ್ಪಲಿ ಎಸೆತ ಪ್ರಕರಣ ಸಂಬಂಧ ಪ್ರದೀಪ್​​ ಈಶ್ವರ್​​ ಭಾವುಕ
  • ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಚಿಕ್ಕಬಳ್ಳಾಪುರ MLA
  • 'ಕೈ' ಶಾಸಕನ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ, ಮಾಜಿ ಸಿಎಂ

ಬೆಂಗಳೂರು, ಜೂನ್​​ 30: ತಮ್ಮ ಮೇಲೆ ಚಪ್ಪಲಿ ಎಸೆತ ಪ್ರಕರಣ ಸಂಬಂಧ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್ ಈಶ್ವರ್ ಕಣ್ಣೀರು ಹಾಕಿದ ಪ್ರಸಂಗ ನಡೆದಿದೆ. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂಬವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಈಶ್ವರ್‌ ಭಾವುಕರಾಗಿದ್ದಾರೆ. ಈ ವೇಳೆ ಪ್ರದೀಪ್ ಈಶ್ವರ್‌ಗೆ ಸಿದ್ದರಾಮಯ್ಯ ಧೈರ್ಯ ತುಂಬಿದ್ದು, ರಾಜಕಾರಣದಲ್ಲಿ ಇಂಥ ಘಟನೆ ಸಾಮಾನ್ಯ. ಇಂಥವನ್ನು ಎದುರಿಸಬೇಕು, ಇದರಿಂದ ಧೃತಿಗೆಡಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ತಿಳಿಸಿದ್ದಾರೆ.

ಗೃಹ ಸಚಿವರ ಜೊತೆ ಸಿದ್ದರಾಮಯ್ಯ ಚರ್ಚೆ

ಬಳಿಕ ಘಟನೆ ಸಂಬಂಧ ಗೃಹ ಸಚಿವರ ಜೊತೆಗೂ ದೂರವಾಣಿ ಮೂಲಕ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪ್ರಿಯಾಂಕ್‌ ಖರ್ಗೆಗೆ ಮಾಜಿ ಸಿಎಂ ತಿಳಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಅದರಲ್ಲೂ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ಆಗಿರುವುದರ ಬಗ್ಗೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ; ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರ ಬಂಧನ

ಪ್ರದೀಪ್​​​​ ಬೆಂಬಲಿಸಿ ಸಿಎಂ ಡಿಕೆಶಿ ಪೋಸ್ಟ್​​

ಮತ್ತೊಂದೆಡೆ ಎಕ್ಸ್​ ಮೂಲಕ ಶಾಸಕ ಪ್ರದೀಪ್ ಈಶ್ವರ್ ಪರ ಸಿಎಂ ಡಿಕೆ ಶಿವಕುಮಾರ್​​ ಕೂಡ ಪೋಸ್ಟ್​ ಮಾಡಿದ್ದು, ಸಾರ್ವಜನಿಕವಾಗಿ ಸೋತಾಗ ಸಭ್ಯತೆಯೂ ಸತ್ತುಹೋಗುತ್ತದೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಮೇಲೆ ಚಪ್ಪಲಿ‌ ಎಸೆದ ನೀಚ ಕೃತ್ಯವು ವಿರೋಧ ಪಕ್ಷದವರ ಹತಾಶೆಯ ಪರಮಾವಧಿ. ಒಬ್ಬ ಯುವ ನಾಯಕನ ಜನಪ್ರಿಯತೆ, ಮಾತುಗಳನ್ನ ಜೀರ್ಣಿಸಿಕೊಳ್ಳಲಾಗದೆ ತರ್ಕದ ವೇದಿಕೆಯಿಂದ ತರಗೆಲೆ ರಾಜಕಾರಣಕ್ಕೆ ಇಳಿದಿರುವುದು ನಿಮ್ಮ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಪ್ರಜಾಪ್ರಭುತ್ವದ ಆಶಯಗಳನ್ನು ಬೀದಿಗೆ ತಂದು ಹರಾಜಿಗಿಟ್ಟಿರುವ ನೀವು ನಿಮ್ಮ ಕಾರ್ಯಕರ್ತರಿಗೆ ಕಲಿಸುತ್ತಿರುವ ಸಂಸ್ಕಾರವಾದರೂ ಇಂತಹುದೇನಾ? ನೆನಪಿರಲಿ, ಇಂತಹ ಹಿಂಸಾತ್ಮಕ ದಾಳಿಗಳು ನಮ್ಮ ನಾಯಕರ ಹೋರಾಟದ ಹಾದಿಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆಯೇ ಹೊರತು ಎಂದಿಗೂ ಧೃತಿಗೆಡಿಸುವುದಿಲ್ಲ. ಇದು ಬಸವಣ್ಣನವರ, ಕುವೆಂಪು ಅವರ ಶಾಂತಿಪ್ರಿಯ ಕರ್ನಾಟಕ. ಇಲ್ಲಿ ಇಂತಹ ವಿಕೃತ, ಹಿಂಸಾತ್ಮಕ ಪುಂಡಾಟಿಕೆಗಳಿಗೆ ಜಾಗವಿಲ್ಲ. ಸಾರ್ವಜನಿಕ ಸಭ್ಯತೆಯ ಗಡಿ ದಾಟಿದ ಪ್ರತಿಯೊಬ್ಬರ ವಿರುದ್ಧವೂ ನಾವು ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:57 pm, Tue, 30 June 26

Follow Us
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು