AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಚಿಕೂನ್ ಗುನ್ಯಾ, ಡೆಂಗ್ಯೂ: ಒಂದೇ ವಾರದಲ್ಲಿ 100ಕ್ಕೂ ಹೆಚ್ಚು ಪ್ರಕರಣ

ಬೆಂಗಳೂರಿನಲ್ಲಿ ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ. ಕಳೆದ ಮೂರು ತಿಂಗಳಲ್ಲಿ 910 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಮತ್ತು 260 ಕ್ಕೂ ಹೆಚ್ಚು ಚಿಕುನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ. ಬೇಸಿಗೆ ಮಳೆಯಿಂದಾಗಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗುತ್ತಿದ್ದು, ರೋಗ ಹರಡುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಚಿಕೂನ್ ಗುನ್ಯಾ, ಡೆಂಗ್ಯೂ: ಒಂದೇ ವಾರದಲ್ಲಿ 100ಕ್ಕೂ ಹೆಚ್ಚು ಪ್ರಕರಣ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: Ganapathi Sharma

Updated on:Apr 07, 2025 | 6:47 AM

ಬೆಂಗಳೂರು, ಏಪ್ರಿಲ್ 7: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಈಗ ಮತ್ತೆ ಡೆಂಗ್ಯೂ (Dengue) ಹಾಗೂ ಚಿಕುನ್ ಗುನ್ಯಾ (Chikungunya) ಭೀತಿ ಶುರುವಾಗಿದೆ‌‌. ಬೇಸಿಗೆಯ ಮಳೆಗೂ ಡೆಂಘಿ ಹರಡುವ ಸಾಧ್ಯತೆ ಇದೆ. ಎರಡು ದಿನಗಳ ಹಿಂದಷ್ಟೆ ನಗರದಲ್ಲಿ ಸುರಿದ ಭಾರಿ ಮಳೆಯಿಂದ ಡೆಂಘಿ ಹರಡುವ ಸಾಧ್ಯತೆ ಹೆಚ್ಚಿದೆ. ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ 910ಕ್ಕೂ ಹೆಚ್ಚು ಡೆಂಘಿ ಪ್ರಕರಣಗಳು ದಾಖಲಾದರೆ, ಮಳೆ ಬಂದ ಬೆನ್ನಲ್ಲೇ ಒಂದೇ ವಾರದಲ್ಲಿ 75ಕ್ಕೂ ಹೆಚ್ಚು ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಡೆಂಘಿ ಜೊತೆ ಚಿಕುನ್ ಗುನ್ಯಾ ಕೂಡಾ ಪತ್ತೆಯಾಗುತ್ತಿದ್ದು, ಕಳೆದ ಒಂದೇ ವಾರದಲ್ಲಿ 24 ಪ್ರಕರಣಗಳು ಪತ್ತೆಯಾಗಿವೆ. ಜನವರಿಯಂದ ಇಲ್ಲಿಯವರೆಗೆ 260 ಚಿಕುನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಯೋಜನಾ ವಿಭಾಗದ ನಿರ್ದೇಶಕ ಅನ್ಸರ್ ಅಹಮ್ಮದ್ ತಿಳಿಸಿದ್ದಾರೆ.

ಈಗಾಗಲೇ ಜ್ವರ, ವೈರಲ್ ಫಿವರ್ ಎಂದು ಆಸ್ಪತ್ರೆಯತ್ತ ಮುಖ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ತಪಾಸಣೆ ನಡೆಸಿದಾಗ ಜನರಲ್ಲಿ ಡೆಂಘಿ ಹಾಗೂ ಚಿಕುನ್ ಗುನ್ಯಾ ಲಕ್ಷಣಗಳು ಕಾಂಣಿಸುತ್ತಿವೆ. ಚಿಕುನ್ ಗುನ್ಯಾ ಹಾಗೂ ವೈರಲ್ ಜ್ವರ ಕೂಡಾ ಹೆಚ್ಚಾಗುತ್ತಿರುವ ಕಾರಣ ಜನರು ಎಚ್ಚರವಹಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಮನೆ ಸುತ್ತಮುತ್ತ ನೀರು ಸಂಗ್ರಹವಾಗದಂತೆ, ಸೊಳ್ಳೆ ಉತ್ಪತ್ತಿಯಾಗದಂತೆ ಜನ ಎಚ್ಚರವಹಿಸಬೇಕು. ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಕೆ ಸಿ ಜನರಲ್ ಆಸ್ಪತ್ರೆಯ ಜನರಲ್ ಮೆಡಿಸಿನ್ ವಿಭಾಗದ ವೈದ್ಯ ಡಾ ಸುರೇಶ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ
Image
ಮೆಟ್ರೋ ಕಂಬಗಳು, ಐತಿಹಾಸಿಕ ಕಟ್ಟಡಗಳಿಗೂ ದೀಪಾಲಂಕಾರ: ಡಿಕೆ ಶಿವಕುಮಾರ್
Image
ವಿಧಾನಸೌಧದ ಶಾಶ್ವತ ವರ್ಣರಂಜಿತ ದೀಪಾಲಂಕಾರ ನೋಡಿ
Image
ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ, ಕೃತ್ಯದ ವಿಡಿಯೋ ವೈರಲ್​
Image
ಸಂಸದ ಸಾಗರ್ ಖಂಡ್ರೆ ಮನೆ ವಿದ್ಯುತ್ ಸಂಪರ್ಕ ಕಡಿತ ಮಾಡಿದ ವ್ಯಕ್ತಿ ಮೇಲೆ FIR

ಸೊಳ್ಳೆಯಿಂದಲೇ ಹರಡುತ್ತವೆ ಡೆಂಘಿ, ಚಿಕುನ್ ಗುನ್ಯಾ

ಈಡಿಸ್ ಈಜಿಪ್ಟಿ ಜಾತಿಯ ಸೊಳ್ಳೆಯಿಂದಲೇ ಡೆಂಘಿ ಹಾಗೂ ಚಿಕುನ್ ಗುನ್ಯಾ ಹರಡುತ್ತದೆ. ಸೊಳ್ಳೆ ಕಚ್ಚಿದ 7 ದಿನಗಳಲ್ಲಿ ರೋಗಲಕ್ಷಣಗಳು ಕಾಣಿಸುತ್ತವೆ. ಈ ಸೊಳ್ಳೆಗಳ ಕಾಟ ಬೆಳಗಿನ ಹೊತ್ತು ಹೆಚ್ಚಾಗಿರುತ್ತದೆ. ಹೀಗಾಗಿ ಆ ಸಮಯದಲ್ಲಿ ಸೊಳ್ಳೆ ಕಚ್ಚುವಿಕೆಯಿಂದ ಪಾರಾಗಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮೆಟ್ರೋ ಕಂಬಗಳು, ಐತಿಹಾಸಿಕ ಕಟ್ಟಡಗಳಿಗೂ ದೀಪಾಲಂಕಾರ: ಡಿಕೆ ಶಿವಕುಮಾರ್

ಡೆಂಗ್ಯೂ, ಚಿಕುನ್ ಗುನ್ಯಾ ಲಕ್ಷಣಗಳೇನು?

ತೀವ್ರ ಜ್ವರ, ತೀವ್ರ ತಲೆನೋವು, ಸ್ನಾಯು ಮತ್ತು ಕೀಲು ನೋವು, ವಾಕರಿಕೆ ಮತ್ತು ವಾಂತಿ, ಗ್ರಂಥಿಗಳ ಉರಿಯೂತ, ದದ್ದು, ಆಯಾಸ, ಆಲಸ್ಯ ಡೆಂಗ್ಯೂ ಮುಖ್ಯ ಲಕ್ಷಣಗಳಾಗಿವೆ. ಹಠಾತ್ ಆಗಿ ತೀವ್ರ ಜ್ವರ ಬರುವುದು, ತೀವ್ರ ಕೀಲು ನೋವು, ಕೀಲು ಊತ, ಸ್ನಾಯು ನೋವು, ತಲೆನೋವು, ದದ್ದು, ಆಯಾಸ, ವಾಕರಿಕೆ ಇತ್ಯಾದಿ ಚಿಕುನ್ ಗುನ್ಯಾ ಲಕ್ಷಣಗಳಾಗಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 am, Mon, 7 April 25

ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ