ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ: ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​

ಬೆಂಗಳೂರಿನಲ್ಲಿ ರಾಮನಗರ ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡ ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತನಾಗಿದ್ದಾನೆ. ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬೆದರಿಸಿ ಹಣ ವಸೂಲಿ ಮಾಡಿದ್ದಲ್ಲದೆ, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವ ಬಗ್ಗೆ ಸಂತ್ರಸ್ತೆಯೋರ್ವರು ದೂರು ದಾಖಲಿಸಿದ್ದರು. ಆರೋಪಿ ಮೊಬೈಲ್​​​​ ಪರಿಶೀಲನೆ ವೇಳೆ 20ಕ್ಕೂ ಹೆಚ್ಚು ಮಹಿಳೆಯರ ಫೋಟೋ, ವಿಡಿಯೋ ಪತ್ತೆಯಾಗಿದೆ ಎನ್ನಲಾಗಿದೆ.

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ: ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​
ಮಹಿಳೆಯರ ಜೊತೆ ಆರೋಪಿ ಚಂದ್ರೇಗೌಡ
Image Credit source: Tv9 Kannada

Updated on: May 01, 2026 | 12:17 PM

ಬೆಂಗಳೂರು, ಮೇ 1: ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನನ್ನು ಬೆಂಗಳೂರಿನ ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಚಂದ್ರೇಗೌಡ ಬಂಧಿತನಾಗಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಅವುಗಳನ್ನು ಈತ ವಿಡಿಯೋಮಾಡಿಟ್ಟುಕೊಳ್ಳುತ್ತಿದ್ದ. ಫೋಟೋ, ವಿಡಿಯೋ ಇಟ್ಟುಕೊಂಡು ಪೀಡಿಸುತ್ತಿದ್ದ. ಪೊಲೀಸ್ ಅಧಿಕಾರಿ, ವಕೀಲ, ಮಾಧ್ಯಮ ಪ್ರತಿನಿಧಿ ಎಂದು ಬಿಂಬಿಸಿ, ನಕಲಿ ಐಡಿ ಮಾಡಿಕೊಂಡು ಹಲವರಿಗೆ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ.

20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ, ಫೋಟೋ ಪತ್ತೆ

ಇನ್ನು ಆರೋಪಿ ಮೊಬೈಲ್​​ ಪರಿಶೀಲಿಸಿದಾಗ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ, ಫೋಟೋ ಪತ್ತೆಯಾಗಿವೆ. ಗಂಡನಿಂದ ದೂರವಾಗಿದ್ದ ಮಹಿಳೆ ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಗೆ ನಾನು ಲೆಕ್ಚರ್ ಎಂದು ಪರಿಚಯ ಮಾಡಿಕೊಂಡಿದ್ದ. ನನಗೆ ಡಿವೋರ್ಸ್ ಆಗಿದ್ದು, ನಿನ್ನನ್ನು ಮದುವೆ ಆಗುತ್ತೇನೆಂದು ನಂಬಿಸಿ ಆಕೆಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದ. ಖಾಸಗಿ ಕ್ಷಣವನ್ನು ವಿಡಿಯೋ ಮಾಡಿಕೊಂಡಿದ್ದ ಚಂದ್ರೇಗೌಡ ಅದನ್ನು ಇಟ್ಟುಕೊಂಡು ಮಹಿಳೆಗೆ ಹೆದರಿಸಿ ಆಕೆಯಿಂದ 5 ಲಕ್ಷ ಹಣ ಪಡೆದಿದ್ದ ಎಂದು ದೂರಲಾಗಿದೆ. ಸಂತ್ರಸ್ತ ಮಹಿಳೆ ಒಮ್ಮೆ ಚಂದ್ರೇಗೌಡನ ಮೊಬೈಲ್ ಪರಿಶೀಲಿಸಿದ್ದ ವೇಳೇ ಆಕೆಗೆ ಶಾಕ್​​ ಆಗಿದ್ದು, ಮೊಬೈಲ್​​ನಲ್ಲಿ ಹಲವು ಮಹಿಳೆಯರ ವಿಡಿಯೋ, ಚಾಟಿಂಗ್ ಪತ್ತೆಯಾಗಿತ್ತು. ಹೀಗಾಗಿ ಆರೋಪಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಪೂಜಾ ದತ್ತಾ ಬೆತ್ತಲೆ ಶವ ಪತ್ತೆ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಸಿಕ್ತು ಹಲವು ಆಘಾತಕಾರಿ ಮಾಹಿತಿ!

ಮದುವೆ ಡ್ರಾಮಾ

ಇನ್ನು ದೂರುದಾರ ಮಹಿಳೆಯನ್ನು ಮದುವೆಯಾಗಿ ನಂಬಿಸಿದ್ದ ಆರೋಪಿ ವಿವಾಹವಾಗಿದ್ದೇನೆ ಎಂದು ನಂಬಿಸಲು ಆಕೆಯ ಕೊರಳಿಗೆ ಅರಿಶಿನದ ಕೊಂಬನ್ನೂ ಕಟ್ಟಿದ್ದ. ಸಂತ್ರಸ್ತೆಯ ಆಧಾರ್​​ ಕಾರ್ಡ್​​ ಕೂಡ ಪಡೆದಿದ್ದ ಈತ ತಾನು ಆಕೆಯ ಗಂಡನೆಂದು ಬಿಂಬಿಸಿ ಮಾಡಿಗೆ ಮನೆಯೊಂದಕ್ಕೆ ಕರಾರು ಪತ್ರವನ್ನೂ ಮಾಡಿಸಿದ್ದ. ತನ್ನ ತಾಯಿಯನ್ನೂ ಸಂತ್ರಸ್ತೆಯ ಮನೆಯಲ್ಲೇ ಆತ ಬಿಟ್ಟಿದ್ದು, ವರ್ಷಾನುಗಟ್ಟಲೆ ಆಕೆಯ ಆರೈಕೆಯನ್ನು ದೂರುದಾರ ಮಹಿಳೆ ಮಾಡಿದ್ದಾಳೆ ಎನ್ನಲಾಗಿದೆ. ಸಾಲದ್ದಕ್ಕೆ ಸಂತ್ರಸ್ತೆಯ ಮಗಳ ವ್ಯಾಸಂಗ ಸಂಬಂಧಿತ ದಾಖಲಾತಿಗಳನ್ನೂ ಬದಲಾಯಿಸಿ, ತಾನೇ ಮಹಿಳೆಯ ಗಂಡ ಎಂದು ಬಿಂಬಿಸಲು ಹೊರಟಿದ್ದ ಎಂದು ಆರೋಪಿಸಲಾಗಿದೆ.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow Us