AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು; ತಂದೆ-ತಾಯಿ ಸ್ಥಿತಿ ಗಂಭೀರ

ನಗರದ ಕೆ.ಪಿ ಅಗ್ರಹಾರದ ಭುವನೇಶ್ವರಿನಗರದಲ್ಲಿ ಫುಡ್​ ಪಾಯ್ಸನ್​(food poison)ನಿಂದ 5 ವರ್ಷದ ಮಗು ಸಾವನ್ನಪ್ಪಿದ್ದು, ತಂದೆ-ತಾಯಿ ಸ್ಥಿತಿ ಗಂಭೀರವಾಗಿದೆ. ಇಬ್ಬರಿಗೂ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. . ಸದ್ಯ ಪ್ರಾಥಮಿಕ ವರದಿಯಲ್ಲಿ ಪುಡ್ ಪಾಯ್ಸಿನ್ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು; ತಂದೆ-ತಾಯಿ ಸ್ಥಿತಿ ಗಂಭೀರ
ಮೃತ ಮಗು ಧೀರಜ್
ರಾಚಪ್ಪಾಜಿ ನಾಯ್ಕ್
| Edited By: |

Updated on: Oct 07, 2024 | 5:46 PM

Share

ಬೆಂಗಳೂರು, ಅ.07: ಬೆಂಗಳೂರಿನ ಕೆ.ಪಿ ಅಗ್ರಹಾರದ ಭುವನೇಶ್ವರಿನಗರದಲ್ಲಿ ಫುಡ್​ ಪಾಯ್ಸನ್​(food poison)ನಿಂದ 5 ವರ್ಷದ ಧೀರಜ್ ಸಾವನ್ನಪ್ಪಿದ್ದು, ತಂದೆ ಬಾಲರಾಜ್ ಹಾಗೂ ತಾಯಿ ನಾಗಲಕ್ಷ್ಮೀ ಸ್ಥಿತಿ ಗಂಭೀರವಾಗಿದೆ. ಸ್ವಿಗ್ಗಿ ಡೆಲಿವರಿ ಬಾಯ್​ ಆಗಿ ಕೆಲಸ ಮಾಡುತ್ತಿದ್ದ ಅಸ್ವಸ್ಥ ಬಾಲರಾಜ್​ಗೆ ನಿನ್ನೆ(ಅ.06) ಸಂಜೆ ಕೇಕ್​ ಆರ್ಡರ್ ಬಂದಿತ್ತು. ಬೇಕರಿಯಿಂದ ಕೇಕ್ ತೆಗೆದುಕೊಂಡು ಹೋಗುವಷ್ಟರಲ್ಲಿ ಆರ್ಡರ್ ಕ್ಯಾನ್ಸಲ್ ಆಗಿದೆ. ಈ ಹಿನ್ನಲೆ ಬಾಲರಾಜ್​ ಮನೆಗೆ ಕೇಕ್ ತೆಗೆದುಕೊಂಡು ಹೋಗಿದ್ದಾನೆ. ಅದರಂತೆ ಇಡೀ ಕುಟುಂಬ ಅದನ್ನು ಸೇವಿಸಿದ್ದರು.

ಕೇಕ್ ತಿಂದ ಬಳಿಕ ಮಗು, ಪೋಷಕರು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನೆ ಬಗ್ಗೆ ವಿವರ ನೀಡಬೇಕಾದ ತಂದೆ-ತಾಯಿ ಕೂಡ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ಪೊಲೀಸರಿಗೆ ದೂರು ಕೊಡಲು ಅಥವಾ ಘಟನೆ ಹೇಗೆ ನಡೆದಿದೆ ಎಂಬ ಬಗ್ಗೆ ಹೇಳಲು ಯಾರು ಇಲ್ಲ. ಇಬ್ಬರಿಗೂ ಪ್ರಜ್ಞೆ ಬಂದ ಬಳಿಕ ಘಟನೆ ಬೆಳಕಿಗೆ ಬರುವ ಸಾಧ್ಯತೆಯಿದೆ.

ಇದನ್ನೂ ಓದಿ:ಉಡುಪಿಯಲ್ಲಿ ಕಲುಷಿತ ನೀರು ಕುಡಿದು 500ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮ ಪಂಚಾಯತ್ ನಿರ್ಲಕ್ಷ್ಯ ಆರೋಪ

ಈ ಘಟನೆ ಕುರಿತು ಸ್ಪಷ್ಟನೆ ನೀಡಿದ ಕಿಮ್ಸ್​ ಆಸ್ಪತ್ರೆಯ ನಿರ್ದೇಶಕ ಡಾ.ಆಂಜಿನಪ್ಪ, ‘ಇದು ಫುಡ್​ ಪಾಯ್ಸನ್​ನಿಂದ ಆಗಿದ್ದು,  ಆಸ್ಪತ್ರೆಗೆ ಬರುವ ಮೊದಲೇ, ಅಂದರೆ ಆಹಾರ ಸೇವಿಸಿದ ಬಳಿಕ ಸಡನ್ ಆಗಿ 5 ವರ್ಷದ ಮಗು ಮೃತಪಟ್ಟಿದೆ. ಈ ಕುರಿತು ಅಲ್ಟ್ರಾ ಸೌಂಡ್ ಸ್ಕ್ಯಾನ್ ಮಾಡಲಾಗಿದೆ. ಮಗುವಿನ ಸಾವಿಗೆ ನಿಖರ ಕಾರಣ ವರದಿಯಲ್ಲಿ ತಿಳಿಯಬೇಕಿದೆ. ಯಾವ ಕಾರಣ ಎಂದು ರಿಪೋರ್ಟ್ ನೋಡಿದ ಬಳಿಕ ಹೇಳುತ್ತೇವೆ. ಸದ್ಯ ಇದು ಪುಡ್ ಪಾಯ್ಸಿನ್ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದಿದೆ. ಇನ್ನು ಮೃತ ಮಗುವಿನ ತಂದೆ-ತಾಯಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಇನ್ನು ಬಾಲರಾಜ್ ಮತ್ತು ನಾಗಲಕ್ಷ್ಮೀ ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಇಬ್ಬರು ಮಕ್ಕಳಿದ್ದಾರೆ. ಮನೆಯಲ್ಲಿ ಒಟ್ಟು ನಾಲ್ಕು ಜನ ವಾಸವಿದ್ದರು. ಅಜ್ಜಿ ಮನೆಗೆ ಹೆಣ್ಣು ಮಗುವನ್ನ ಕಳುಹಿಸಲಾಗಿತ್ತು. ನಿನ್ನೆ ರಾತ್ರಿ ಮೂವರು ಕೂಡ ಊಟ ಮಾಡಿ, ಬಾಲರಾಜ್​ ತಂದಿದ್ದ ಕೇಕ್ ಸೇವಿಸಿದ್ದರು. ಬೆಳಗಾಗುವಷ್ಟರಲ್ಲಿ ಈ ದುರ್ಘಟನೆ ನಡೆದಿದೆ.​ ಸದ್ಯ ಮೆಡಿಕಲ್ ರಿಪೋರ್ಟ್​ಗಾಗಿ ಪೊಲೀಸರು ಕಾಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ