Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಹುಟ್ಟುವ ಮುಂಚೆಯೇ ಸಾವು; ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಹುಟ್ಟುವ ಮುಂಚೆಯೇ ಸಾವನ್ನಪ್ಪಿದೆ. ಕುಟುಂಬಸ್ಥರು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಅಂತಾ ಆರೋಪಿಸಿ ಗಲಾಟೆ ಮಾಡಿದ್ದಾರೆ. ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಡೆಲಿವರಿ ಮಾಡೋದರಲ್ಲಿ ವಿಳಂಬ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಹುಟ್ಟುವ ಮುಂಚೆಯೇ ಸಾವು; ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ
ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ
Follow us
Vinayak Hanamant Gurav
| Updated By: ಆಯೇಷಾ ಬಾನು

Updated on: Dec 18, 2023 | 2:18 PM

ಬೆಂಗಳೂರು, ಡಿ.18: ನಗರದ ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ (KC General Hospital) ವೈದ್ಯರ ವಿರುದ್ಧ ಡೆಲಿವರಿ ಮಾಡೋದರಲ್ಲಿ ವಿಳಂಬ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ (Doctor Negligence). ಅಲ್ಲದೆ ಮಗು ಹುಟ್ಟುವ ಮುಂಚೆಯೇ ಸಾವನ್ನಪ್ಪಿದ್ದು ಕುಟುಂಬಸ್ಥರು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ಗಲಾಟೆ ಮಾಡಿದ್ದಾರೆ. ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಚೊಕ್ಕಸಂದ್ರದ ಗರ್ಭಿಣಿ ದೇವಿಕಾ ಅವರಿಗೆ 9 ತಿಂಗಳು 12 ದಿನಗಳು ತುಂಬಿತ್ತು. ಆಸ್ಪತ್ರೆ ವೈದ್ಯರು 9 ತಿಂಗಳು ತುಂಬಿದ್ರೂ ಹೆರಿಗೆ ಮಾಡಿರಲಿಲ್ಲ. ಹೀಗಾಗಿ ಡೇಟ್ ಮೀರಿದೆ ಸಿಸೇರಿಯನ್ ಮಾಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದರು. ಆದರೆ ವೈದ್ಯರು ಸಿಸೇರಿಯನ್​ಗೆ ಒಪ್ಪದೇ ನಾರ್ಮಲ್​ಗೆ ಮುಂದಾಗಿದ್ದರು. ನಾರ್ಮಲ್ ಡೆಲಿವರಿ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಾಗ ಕೊನೆಗೆ ನಾರ್ಮಲ್ ಆಗಲ್ಲ ಸಿಸೇರಿಯನ್ ಮಾಡಬೇಕು ಎಂದು ಸಿಬ್ಬಂದಿ ಹೇಳಿದ್ದಾರೆ. ಬಳಿಕ ಮಗು ಗಲೀಜು ನೀರು ಕುಡಿದು ಸತ್ತು ಹೋಗಿದೆ ಅಂತ ವೈದ್ಯರು ಹೇಳಿದ್ದಾರೆ. ಇದ್ರಿಂದ ಕೆರಳಿದ ಸಂಬಂಧಿಕರು ಕೆ.ಸಿ.ಜನರಲ್ ಆಸ್ಪತ್ರೆಯ ಮುಂದೆ ಗಲಾಟೆ ಮಾಡಿದ್ದಾರೆ. ಆಸ್ಪತ್ರೆಯ ಆವರಣದಲ್ಲಿ ತಾಯಿ ದೇವಿಕಾ ಕಣ್ಣೀರು ಹಾಕಿ ಲಂಚ ಲಂಚ ಅಂತಾ ಸಾಯ್ತಾ ಇದ್ದಾರೆ ಎಂದು ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಅಂಚೆ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಪರದಾಟ, ತಿಂಗಳುಗಳೇ ಕಳೆದರೂ ವಿತರಣೆಯಾಗದ ದಾಖಲೆಗಳು

ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳುತ್ತೇವೆ

ಇನ್ನು ಈ ಘಟನೆ ಸಂಬಂಧ ಕೆಸಿ ಜನರಲ್ ಮೆಡಿಕಲ್ ಆಫೀಸರ್ ಡಾ ಮೋಹನ್ ಪ್ರತಿಕ್ರಿಯೆ ನೀಡಿದ್ದು, ಡಾ ವಿಜಯಲಕ್ಷ್ಮಿ ಅವರು ಈ ಕೇಸನ್ನು ನೋಡುತ್ತಿದ್ರು. ಡಿಸೆಂಬರ್ 10ಕ್ಕೆ ಡೆಲಿವರಿ ಡೇಟ್ ಇತ್ತು. ಸಿಸೇರಿಯನ್ ಅಗತ್ಯವಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ರು. ಆದರೆ ನಾರ್ಮಲ್ ಆಗದೇ ಇರೋದ್ರಿಂದ ಸಿಸೇರಿಯನ್ ಮಾಡಿದ್ದಾರೆ‌. ಹಾರ್ಟ್ ಬೀಟ್ ಕಡಿಮೆ ಇತ್ತು. ಎನ್​ಐಸಿಯುಗೆ ಶಿಫ್ಟ್ ಮಾಡಿದ್ದಾರೆ. ವೈದ್ಯೆ ನನ್ನ ಕಡೆಯಿಂದ ತಪ್ಪಾಗಿಲ್ಲ ಅಂತಾ ಹೇಳಿದ್ದಾರೆ. ಆದರೆ ವೈದ್ಯೆಯ ನಿರ್ಲಕ್ಷ್ಯ ಕಂಡುಬಂದರೆ ಖಂಡಿತಾ ಕ್ರಮ ಕೈಗೊಳ್ಳುತ್ತೇವೆ. ಆಂತರಿಕ ತನಿಖೆ ಮಾಡುತ್ತೇವೆ. ವರದಿ ತಯಾರಿ ಮಾಡಿದ ಬಳಿಕ ಕೇಸ್ ಶೀಟ್ ತಗೊಂಡು ನಿರ್ಧಾರ ಮಾಡ್ತೇವೆ ಎಂದು ತಿಳಿಸಿದ್ದಾರೆ.‌

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ