AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಹುಟ್ಟುವ ಮುಂಚೆಯೇ ಸಾವು; ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಹುಟ್ಟುವ ಮುಂಚೆಯೇ ಸಾವನ್ನಪ್ಪಿದೆ. ಕುಟುಂಬಸ್ಥರು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಅಂತಾ ಆರೋಪಿಸಿ ಗಲಾಟೆ ಮಾಡಿದ್ದಾರೆ. ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಡೆಲಿವರಿ ಮಾಡೋದರಲ್ಲಿ ವಿಳಂಬ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಹುಟ್ಟುವ ಮುಂಚೆಯೇ ಸಾವು; ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ
ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ
Vinayak Hanamant Gurav
| Edited By: ಆಯೇಷಾ ಬಾನು|

Updated on: Dec 18, 2023 | 2:18 PM

Share

ಬೆಂಗಳೂರು, ಡಿ.18: ನಗರದ ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ (KC General Hospital) ವೈದ್ಯರ ವಿರುದ್ಧ ಡೆಲಿವರಿ ಮಾಡೋದರಲ್ಲಿ ವಿಳಂಬ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ (Doctor Negligence). ಅಲ್ಲದೆ ಮಗು ಹುಟ್ಟುವ ಮುಂಚೆಯೇ ಸಾವನ್ನಪ್ಪಿದ್ದು ಕುಟುಂಬಸ್ಥರು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ಗಲಾಟೆ ಮಾಡಿದ್ದಾರೆ. ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಚೊಕ್ಕಸಂದ್ರದ ಗರ್ಭಿಣಿ ದೇವಿಕಾ ಅವರಿಗೆ 9 ತಿಂಗಳು 12 ದಿನಗಳು ತುಂಬಿತ್ತು. ಆಸ್ಪತ್ರೆ ವೈದ್ಯರು 9 ತಿಂಗಳು ತುಂಬಿದ್ರೂ ಹೆರಿಗೆ ಮಾಡಿರಲಿಲ್ಲ. ಹೀಗಾಗಿ ಡೇಟ್ ಮೀರಿದೆ ಸಿಸೇರಿಯನ್ ಮಾಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದರು. ಆದರೆ ವೈದ್ಯರು ಸಿಸೇರಿಯನ್​ಗೆ ಒಪ್ಪದೇ ನಾರ್ಮಲ್​ಗೆ ಮುಂದಾಗಿದ್ದರು. ನಾರ್ಮಲ್ ಡೆಲಿವರಿ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಾಗ ಕೊನೆಗೆ ನಾರ್ಮಲ್ ಆಗಲ್ಲ ಸಿಸೇರಿಯನ್ ಮಾಡಬೇಕು ಎಂದು ಸಿಬ್ಬಂದಿ ಹೇಳಿದ್ದಾರೆ. ಬಳಿಕ ಮಗು ಗಲೀಜು ನೀರು ಕುಡಿದು ಸತ್ತು ಹೋಗಿದೆ ಅಂತ ವೈದ್ಯರು ಹೇಳಿದ್ದಾರೆ. ಇದ್ರಿಂದ ಕೆರಳಿದ ಸಂಬಂಧಿಕರು ಕೆ.ಸಿ.ಜನರಲ್ ಆಸ್ಪತ್ರೆಯ ಮುಂದೆ ಗಲಾಟೆ ಮಾಡಿದ್ದಾರೆ. ಆಸ್ಪತ್ರೆಯ ಆವರಣದಲ್ಲಿ ತಾಯಿ ದೇವಿಕಾ ಕಣ್ಣೀರು ಹಾಕಿ ಲಂಚ ಲಂಚ ಅಂತಾ ಸಾಯ್ತಾ ಇದ್ದಾರೆ ಎಂದು ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಅಂಚೆ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಪರದಾಟ, ತಿಂಗಳುಗಳೇ ಕಳೆದರೂ ವಿತರಣೆಯಾಗದ ದಾಖಲೆಗಳು

ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳುತ್ತೇವೆ

ಇನ್ನು ಈ ಘಟನೆ ಸಂಬಂಧ ಕೆಸಿ ಜನರಲ್ ಮೆಡಿಕಲ್ ಆಫೀಸರ್ ಡಾ ಮೋಹನ್ ಪ್ರತಿಕ್ರಿಯೆ ನೀಡಿದ್ದು, ಡಾ ವಿಜಯಲಕ್ಷ್ಮಿ ಅವರು ಈ ಕೇಸನ್ನು ನೋಡುತ್ತಿದ್ರು. ಡಿಸೆಂಬರ್ 10ಕ್ಕೆ ಡೆಲಿವರಿ ಡೇಟ್ ಇತ್ತು. ಸಿಸೇರಿಯನ್ ಅಗತ್ಯವಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ರು. ಆದರೆ ನಾರ್ಮಲ್ ಆಗದೇ ಇರೋದ್ರಿಂದ ಸಿಸೇರಿಯನ್ ಮಾಡಿದ್ದಾರೆ‌. ಹಾರ್ಟ್ ಬೀಟ್ ಕಡಿಮೆ ಇತ್ತು. ಎನ್​ಐಸಿಯುಗೆ ಶಿಫ್ಟ್ ಮಾಡಿದ್ದಾರೆ. ವೈದ್ಯೆ ನನ್ನ ಕಡೆಯಿಂದ ತಪ್ಪಾಗಿಲ್ಲ ಅಂತಾ ಹೇಳಿದ್ದಾರೆ. ಆದರೆ ವೈದ್ಯೆಯ ನಿರ್ಲಕ್ಷ್ಯ ಕಂಡುಬಂದರೆ ಖಂಡಿತಾ ಕ್ರಮ ಕೈಗೊಳ್ಳುತ್ತೇವೆ. ಆಂತರಿಕ ತನಿಖೆ ಮಾಡುತ್ತೇವೆ. ವರದಿ ತಯಾರಿ ಮಾಡಿದ ಬಳಿಕ ಕೇಸ್ ಶೀಟ್ ತಗೊಂಡು ನಿರ್ಧಾರ ಮಾಡ್ತೇವೆ ಎಂದು ತಿಳಿಸಿದ್ದಾರೆ.‌

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ