ಬೆಂಗಳೂರಿನಲ್ಲಿ ಬಾಲ್ಯ ವಿವಾಹ ಇನ್ನೂ ಜೀವಂತ; 16 ವರ್ಷದ ಬಾಲಕಿಗೆ ಒತ್ತಾಯವಾಗಿ ಮದುವೆ ಮಾಡಿಸಿರುವ ತಾಯಿ

ರಾಜ್ಯದಲ್ಲಿ ಬಾಲ್ಯ ವಿವಾಹ(Child marriage) ದ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಕೆಲ ಹಳ್ಳಿಗಳಲ್ಲಿ ಅಲ್ಲೊಂದು, ಇಲ್ಲೊಂದು ಕೇಸ್​ಗಳು ಕೇಳಿ ಬರುತ್ತಿತ್ತು. ಇದೀಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ(Bengaluru) ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ. 

ಬೆಂಗಳೂರಿನಲ್ಲಿ ಬಾಲ್ಯ ವಿವಾಹ ಇನ್ನೂ ಜೀವಂತ; 16 ವರ್ಷದ ಬಾಲಕಿಗೆ ಒತ್ತಾಯವಾಗಿ ಮದುವೆ ಮಾಡಿಸಿರುವ ತಾಯಿ
ಬಾಲ್ಯ ವಿವಾಹ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 04, 2024 | 9:02 PM

ಬೆಂಗಳೂರು, ಜ.04: ರಾಜ್ಯದಲ್ಲಿ ಬಾಲ್ಯ ವಿವಾಹ(Child marriage) ದ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಕೆಲ ಹಳ್ಳಿಗಳಲ್ಲಿ ಅಲ್ಲೊಂದು, ಇಲ್ಲೊಂದು ಕೇಸ್​ಗಳು ಕೇಳಿ ಬರುತ್ತಿತ್ತು. ಇದೀಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ(Bengaluru) ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ.  ಆರ್.ಆರ್.ನಗರದ ದೇಗುಲದಲ್ಲಿ 16 ವರ್ಷದ ಬಾಲಕಿಗೆ 27 ವರ್ಷದ ಯುವಕನ ಜೊತೆ ಆಕೆಯ ತಾಯಿಯೇ ಒತ್ತಾಯ ಪೂರ್ವಕವಾಗಿ ಮದುವೆ ಮಾಡಿಸಿದ ಘಟನೆ ನಡೆದಿದೆ.

ಮದುವೆ ಬಳಿಕ ಅಪ್ರಾಪ್ತ ಬಾಲಕಿ ಜೊತೆ ಬಲವಂತವಾಗಿ ದೈಹಿಕ‌ ಸಂಪರ್ಕ

ಮಗಳಿಗೆ ಮದುವೆ ಇಷ್ಟವಿಲ್ಲದಿದ್ದರೂ ತಾಯಿಯೇ ಬಲವಂತವಾಗಿ ವಿವಾಹ ಮಾಡಿಸಿದ್ದು, ಬಳಿಕ ಬಲವಂತವಾಗಿ ದೈಹಿಕ‌ ಸಂಪರ್ಕವಾಗಿದೆ ಎಂದು ಅಪ್ರಾಪ್ತ ಬಾಲಕಿ ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡಿದ್ದಾರೆ. ಇನ್ನು ಈ ಘಟನೆ ಸಂಬಂಧ ಆರ್.ಆರ್. ನಗರ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದ್ದು, ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ:ಅತಂಕಕಾರಿ ಸಂಗತಿ: ಮಹಿಳಾ-ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ಅತೀ ಹೆಚ್ಚು ಬಾಲ್ಯ ವಿವಾಹ

ಬಾಗಲಕೋಟೆ ‌ಜಿಲ್ಲೆಯಲ್ಲಿ 2023 ರಲ್ಲೇ 79 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ

ಬಾಗಲಕೋಟೆ ಜಿಲ್ಲೆಯು ಒಂದು ಕಾಲದಲ್ಲಿ ಹೆಚ್​​ಐವಿ ಯಲ್ಲಿ ರಾಜ್ಯದಲ್ಲೇ ನಂಬರ್ ಒನ್ ಸ್ಥಾನದಲ್ಲಿತ್ತು. ಇದೀಗ ಕಾಲ ಕ್ರಮೇಣ ಆ ನಂಬರ್​ನಿಂದ ಮುಕ್ತವಾಗಿದೆ. ಆದರೆ, ಸದ್ಯ ಜಿಲ್ಲೆಯಲ್ಲಿ ಸದ್ದಿಲ್ಲದೆ ‌ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಾ ಸಾಗುತ್ತಿವೆ. ಬಡ ಮಧ್ಯಮ ವರ್ಗ, ಹಿಂದುಳಿ ವರ್ಗ ಹಾಗೂ ಎಸ್ ಸಿ ಸಮುದಾಯದಲ್ಲೇ ಅತಿ ಹೆಚ್ಚು ಬಾಲ್ಯ ವಿವಾಹಗಳು ಕಂಡು ಬರುತ್ತಿವೆ. ಮಹಿಳಾ‌ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಇದನ್ನು ತಡೆಯುವುದಕ್ಕೆ‌ ಜಾಗೃತಿ ಜೊತೆಗೆ ಕಠಿಣ ಕಾನೂನು ಇದ್ದರೂ ಕೂಡ ಈ ಪಿಡುಗು ನಿಲ್ಲುತ್ತಿಲ್ಲ. ಬಾಗಲಕೋಟೆ ‌ಜಿಲ್ಲೆಯಲ್ಲಿ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿ ಪ್ರಕಾರ 2023 ರಲ್ಲೇ 79 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Thu, 4 January 24

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ