Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸುಗೂಸು ಮಾರಾಟ ಪ್ರಕರಣ: ವಿಚಾರಣೆ ವೇಳೆ ಹೊರಬಿತ್ತು 250ಕ್ಕೂ ಹೆಚ್ಚು ಮಕ್ಕಳ ಮಾರಾಟ

ಕುಡುಕ‌ನೊಬ್ಬ ನೀಡಿದ ಸುಳಿವಿನ ಮೇರೆಗೆ ಕಾರ್ಯಾಚರಣೆಗೆ ಇಳಿದಿದ್ದ ಸಿಸಿಬಿ ಪೊಲೀಸರು, ಹಸುಗೂಸು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ರೆಡ್​ಹ್ಯಾಂಡ್ ಆಗಿ ಹಿಡಿದಿದ್ದರು. ಈ ಪ್ರಕರಣದಲ್ಲಿ ವೈದ್ಯರು, ಸರ್ಕಾರಿ ಅಧಿಕಾರಿಗಳವರೆಗೂ ಲಿಂಕ್ ಇರುವುದು ಪತ್ತೆಯಾಗಿದೆ. ಇದೀಗ, ಆರೋಪಿಗಳು 250ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿದ ವಿಚಾರ ಬೆಳಕಿಗೆ ಬಂದಿದೆ.

ಹಸುಗೂಸು ಮಾರಾಟ ಪ್ರಕರಣ: ವಿಚಾರಣೆ ವೇಳೆ ಹೊರಬಿತ್ತು 250ಕ್ಕೂ ಹೆಚ್ಚು ಮಕ್ಕಳ ಮಾರಾಟ
ಆರು ವರ್ಷಗಳಲ್ಲಿ 250ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವ ವಿಚಾರವನ್ನು ಸಿಸಿಬಿ ಮುಂದೆ ಆರೋಪಿಗಳು ಬಾಯಿಬಿಟ್ಟಿದ್ದಾರೆ (ಸಾಂದರ್ಭಿಕ ಚಿತ್ರ)
Follow us
Prajwal Kumar NY
| Updated By: Rakesh Nayak Manchi

Updated on: Nov 30, 2023 | 9:54 AM

ಬೆಂಗಳೂರು, ನ.30: ಹಸುಗೂಸು ಮಾರಾಟದ ಪ್ರಕರಣ (Child Sale Case) ಸಂಬಂಧ ಆರೋಪಿಗಳು ಇದುವರೆಗೆ 250ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವ ವಿಚಾರ ಸಿಸಿಬಿ ಪೊಲೀಸರ (CCB Police) ತನಿಖೆಯಿಂದ ಹೊರಬಿದ್ದಿದೆ. ಮಾರಾಟ ಮಾಡಿದ ಮಕ್ಕಳ ಪೈಕಿ 50-60 ಮಕ್ಕಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಿದರೆ, ಉಳಿದ ಮಕ್ಕಳನ್ನು ತಮಿಳುನಾಡಿಗೆ ಮಾರಾಟ ಮಾಡಿರುವುದು ತಿಳಿದುಬಂದಿದೆ.

ಹಸುಗೂಸು ಮಾರಾಟ ಪ್ರಕರಣ ಸಂಬಂಧ ಬಂಧಿತ ಎಂಟು ಆರೋಪಿಗಳನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅದರಂತೆ, ಆರೋಪಿಗಳು ಕಳೆದ 6 ವರ್ಷಗಳಲ್ಲಿ 250 ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿದ ವಿಚಾರವನ್ನು ಬಾಯಿಬಿಟ್ಟಿದ್ದಾರೆ. ಈ ಪೈಕಿ ಕೇವಲ 50-60 ಮಕ್ಕಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಿದರೆ, ಉಳಿದ ಮಕ್ಕಳನ್ನು ತಮಿಳುನಾಡಿನಲ್ಲಿ ಮಾರಾಟ‌ ಮಾಡಿದ್ದಾರೆ.

ಇದನ್ನೂ ಓದಿ: ಹಸುಗೂಸು ಮಾರಾಟ ದಂಧೆ; ಮಹಿಳಾ ಏಜೆಂಟ್, ನಕಲಿ ವೈದ್ಯ ಸೇರಿ ಮತ್ತಿಬ್ಬರ ಬಂಧನ

ಆರೋಪಿಗಳು ಈ ವಿಚಾರವನ್ನು ಬಾಯಿಬಿಡುತ್ತಿದ್ದಂತೆ ಮತ್ತಷ್ಟು ಕಾರ್ಯಪ್ರವೃತ್ತರಾದ ಸಿಸಿಬಿ ಪೊಲೀಸರು ಕರ್ನಾಟಕದಲ್ಲಿ ಮಾರಾಟ ಆಗಿರುವ ಮಕ್ಕಳ ಬಗ್ಗೆ ಆರೋಪಿಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಸದ್ಯ 10 ಮಕ್ಕಳ ಸುಳಿವು ಸಿಕ್ಕಿದ್ದು, ಉಳಿದ ಮಕ್ಕಳನ್ನು ಎಲ್ಲಿ, ಯಾರಿಗೆ ಮಾರಾಟ ಮಾಡಲಾಗಿದೆ ಎಂದು ವಿಚಾರಣೆ ನಡೆಸುತ್ತಿದ್ದಾರೆ.

ಗ್ಯಾಂಗ್ ಲೀಡರ್ ಮಹಾಲಕ್ಷ್ಮೀ ಕಥೆಯೇ ರೋಚಕ

ಕರ್ನಾಟಕದ ಗ್ಯಾಂಗ್ ಲೀಡರ್ ಮಹಾಲಕ್ಷ್ಮೀ ಕಥೆಯೇ ಒಂದು ರೀತಿ ರೋಚಕವಾಗಿದೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡು ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡಿಕೊಂಡಿದ್ದಾಕೆ‌ ಇವತ್ತು ಕೋಟ್ಯಾಧಿಪತಿಯಾಗಿದ್ದಾಳೆ. 2017 ರಿಂದಲೂ ಈ ದಂಧೆಯನ್ನು ಮಾಡುತ್ತಾ ಇರುವ ಮಹಾಲಕ್ಷ್ಮೀ, ಇಂದು ಸ್ವಂತ ಮನೆ, ಕಾರು ಜೊತೆಗೆ ಮೈತುಂಬಾ ಚಿನ್ನಾಭರಣ ಹೊಂದಿದ್ದಾಳೆ.

ಇದನ್ನೂ ಓದಿ: ಹಸುಗೂಸು ಮಾರಾಟ ದಂಧೆ: ಡಾಕ್ಟರ್​ಗಳೇ ದಂಧೆಕೋರರ ಇನ್ಫಾರ್ಮರ್ಸ್​, ಈ ಗ್ಯಾಂಗ್ ಕೆಲಸ ಮಾಡ್ತಿದ್ದದ್ದು ಹೇಗೆ ಗೊತ್ತಾ?

2015 ರಿಂದ 2017 ರವರೆಗೂ ಗಾರ್ಮೆಟ್ಸ್​​ನಲ್ಲಿ ಕೇವಲ 8 ಸಾವಿರ ಸಂಬಳಕ್ಕೆ ಕೆಲಸ ಮಾಡ್ತಾ ಮಾಡುತ್ತಿದ್ದಳು. ಈ ವೇಳೆ ಆಕೆಯ ಪರಿಚಯ ಆದ ಮಹಿಳೆ ಅಂಡಾಣು ಕೊಟ್ಟರೇ ಹಣ ಕೊಡುವುದಾಗಿ ಕೇಳಿದ್ದಳು. ಆಗ ಅಂಡಾಣು ನೀಡಿದ್ದ ಮಹಾಲಕ್ಷ್ಮೀಗೆ ಸುಮಾರು 20 ಸಾವಿರ ನೀಡಿದ್ದಳು. ನಂತರ ದಿನಗಳಲ್ಲಿ ಅಂಡಾಣು ಕೊಡುವರನ್ನು ಪತ್ತೆ ಮಾಡಿ ಅದರಿಂದ ಕಮೀಷನ್ ಪಡೆಯುವ ಕೆಲಸ ಮಾಡಿಕೊಂಡಿದ್ದಳು ಎಂಬ ವಿಚಾರವೂ ತನಿಖೆಯಿಂದ ತಿಳಿದುಬಂದಿದೆ.

ಆರೋಪಿಗಳನ್ನು ಸೆರೆ ಹಿಡಿದದ್ದೇ ರೋಚಕ

ಪ್ರಕರಣ ಭೇದಿಸಲು ಸಿಸಿಬಿ ಅಧಿಕಾರಿಗಳು ಮಕ್ಕಳು ಕೊಳ್ಳುವ ಪೋಷಕರ ಸೋಗಿನಲ್ಲಿ ಥೇಟ್ ಫೀಲ್ಮ್ ಸ್ಟೈಲ್​ನಲ್ಲಿ ಎಂಟ್ರಿ ಕೊಟ್ಟು ಆರೋಪಿಗಳನ್ನು ಸೆರೆ ಹಿಡಿದಿದ್ದರು. ಕುಡುಕ‌ನೋರ್ವ ನೀಡಿದ್ದ ಮಹತ್ವದ ಸುಳಿವು ಆಧರಿಸಿ ಬೇಟೆಗಿಳಿದಿದ್ದ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದರು. ಈ ವೇಳೆ ವೈದ್ಯರಿಂದ ಹಿಡಿದು ಸರ್ಕಾರಿ ಅಧಿಕಾರಿಗಳವರೆಗೂ ಪ್ರಕರಣದಲ್ಲಿ ಲಿಂಕ್ ಇರುವುದು ಪತ್ತೆಯಾಗಿದೆ. ಅವ್ಯಾಹತವಾಗಿ ಪಸರಿಸಿಕೊಂಡಿರುವ ಬೃಹತ್ ಜಾಲದಲ್ಲಿ ವೈದ್ಯರೇ ಕಿಂಗ್ ಪಿನ್​ಗಳಾಗಿದ್ದಾರೆ.

ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಕ್ಕಳ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಸರ್ಕಾರಿ ಅಧಿಕಾರಿ ಕೂಡ ಶಾಮೀಲಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮಾರಾಟವಾಗುವ ಮಕ್ಕಳ ನಕಲಿ ದಾಖಲೆ ಸೃಷ್ಟಿಸಿ ಕರಾಳ ದಂಧೆ ನಡೆಯುತ್ತಿರುವ ಬಗ್ಗೆ ಒಂದೊಂದೇ ಮುಖ ಅನಾವರಣಗೊಳ್ಳುತ್ತಿದೆ. ಸದ್ಯ ಹಲವು ಆಯಾಮಗಳಲ್ಲಿ ಸಿಸಿಬಿ ತನಿಖೆ ಚುರುಕುಗೊಳಿಸಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ