AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಜೀವಂತವಾಗಿರುವಾಗಲೂ ಅವರ ಮಕ್ಕಳು ಕುಟುಂಬದ ಅರ್ಚಕ ಸಂಪ್ರದಾಯ ಮುಂದುವರಿಸಬಹುದು: ಕರ್ನಾಟಕ ಸರ್ಕಾರ

ಇಲ್ಲಿಯವರೆಗೆ, ಅಂತಹ ಮಕ್ಕಳಿಗೆ ಅವರ ತಂದೆ-ತಾಯಿ ತೀರಿಕೊಂಡ ನಂತರವೇ ಹುದ್ದೆಗಳನ್ನು ನೀಡಲಾಗುತ್ತಿತ್ತು. ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಪುರೋಹಿತರ ಮಕ್ಕಳು ತಮ್ಮ ಕುಟುಂಬದ ಸಂಪ್ರದಾಯವನ್ನು ಮುಂದುವರಿಸಲು ಇಲಾಖೆಯು ಇದೀಗ ಅಧಿಸೂಚನೆಯನ್ನು ಹೊರಡಿಸಿದೆ.

ತಂದೆ ಜೀವಂತವಾಗಿರುವಾಗಲೂ ಅವರ ಮಕ್ಕಳು ಕುಟುಂಬದ ಅರ್ಚಕ ಸಂಪ್ರದಾಯ ಮುಂದುವರಿಸಬಹುದು: ಕರ್ನಾಟಕ ಸರ್ಕಾರ
ಕರ್ನಾಟಕದಲ್ಲಿ ಪುರೋಹಿತರ ಮಕ್ಕಳು ಕುಟುಂಬದ ಅರ್ಚಕ ಸಂಪ್ರದಾಯ ಮುಂದುವರಿಸಬಹುದು
ಸಾಧು ಶ್ರೀನಾಥ್​
|

Updated on:Dec 01, 2023 | 11:04 AM

Share

ದತ್ತಿ ಇಲಾಖೆಗೆ (endowments department) ಸೇರಿದ ದೇವಸ್ಥಾನಗಳಲ್ಲಿ (temples) ಕೆಲಸ ಮಾಡುವ ಪುರೋಹಿತರ (ಅರ್ಚಕ- Purohit, priest) ಮಕ್ಕಳಿಗೆ ಅವರ ತಂದೆ ಜೀವಂತವಾಗಿರುವಾಗಲೂ ಅರ್ಚಕರಾಗಿ ಕೆಲಸ ಮಾಡಲು ರಾಜ್ಯ ಸರ್ಕಾರ (Karnataka Government) ಮೊದಲ ಬಾರಿಗೆ ಅನುಮತಿ ನೀಡಿದೆ.

ಇಲ್ಲಿಯವರೆಗೆ, ಅಂತಹ ಮಕ್ಕಳಿಗೆ ಅವರ ತಂದೆ-ತಾಯಿ ತೀರಿಕೊಂಡ ನಂತರವೇ ಹುದ್ದೆಗಳನ್ನು ನೀಡಲಾಗುತ್ತಿತ್ತು. ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಪುರೋಹಿತರ ಮಕ್ಕಳು ತಮ್ಮ ಕುಟುಂಬದ ಸಂಪ್ರದಾಯವನ್ನು ಮುಂದುವರಿಸಲು ಇಲಾಖೆಯು ಇದೀಗ ಅಧಿಸೂಚನೆಯನ್ನು ಹೊರಡಿಸಿದೆ ಎಂದು www.newindianexpress.com ವರದಿ ಮಾಡಿದೆ.

ರಾಜ್ಯವು 34,000 ದತ್ತಿ ದೇವಾಲಯಗಳನ್ನು ಹೊಂದಿದೆ. ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿ ಕಾಯಿದೆ ( Karnataka Hindu Religious and Charitable Endowments Act) 1997, ಸೆಕ್ಷನ್ 9(1) ಪ್ರಕಾರ, ಸಿ ದರ್ಜೆಯ ದೇವಾಲಯಗಳಲ್ಲಿ ಕೆಲಸ ಮಾಡುವ ಪುರೋಹಿತರ ಪುತ್ರರು ತಮ್ಮ ತಂದೆ ಮರಣ ಹೊಂದಿದರೆ ವಂಶಪಾರಂಪರ್ಯವಾಗಿ ಅರ್ಚಕ ವೃತ್ತಿ ಮುಂದುವರಿಸಬಹುದು. ಆದರೆ, ದೇವಸ್ಥಾನದ ಪೂಜೆಗೆ ಹಾಜರಾಗಲು ಸಾಧ್ಯವಾಗದ ವಯಸ್ಸಾದ ಅರ್ಚಕರಿಗೆ ಅವರ ಮಕ್ಕಳು ಅಥವಾ ವಾರಸುದಾರರಿಗೆ ಕೆಲಸ ನೀಡಲಾಗುವುದಿಲ್ಲ ಎಂದಿತ್ತು.

ಇದನ್ನೂ ಓದಿ: ಕರ್ನಾಟಕದ ಮುಜರಾಯಿ ಇಲಾಖೆ ಅರ್ಚಕರಿಗೆ ಗುಡ್ ನ್ಯೂಸ್, ತಸ್ತಿಕ್​​ ಹಣ ರಿಲೀಸ್​

ಇದೀಗ ಸರಕಾರ ಆದೇಶ ಹೊರಡಿಸಿದ್ದು, ಪುರೋಹಿತರು ಮೃತಪಟ್ಟರೆ ಅಥವಾ ಆರೋಗ್ಯ ಮತ್ತು ವಯೋಸಹಜ ಸಮಸ್ಯೆಗಳಿಂದಾಗಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ವಂಶಪಾರಂಪರ್ಯ ಹಕ್ಕುಗಳನ್ನು ಮಕ್ಕಳಿಗೆ ನೀಡಲಾಗುವುದು ಎಂದು ಹೇಳಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:00 am, Fri, 1 December 23

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?