AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್: ಬಾಕಿ ಹಣ ನೀಡದೆ ಅಮಾಯಕರ ಮೇಲೆ ಸುಳ್ಳು ಕೇಸ್ ಹಾಕಿದ ಆರೋಪ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಸಿಸಿಟಿವಿ ವೈರ್ ಕಟ್ ಪ್ರಕರಣಕ್ಕೆ ಭಾರಿ ಟ್ವಿಸ್ಟ್ ಸಿಕ್ಕಿದ್ದು, ಕಂಪನಿಗಳು ಬಾಕಿ ಹಣ ನೀಡದೆ ವಂಚಿಸಲು ಅಮಾಯಕರ ಮೇಲೆ ಸುಳ್ಳು ಕೇಸ್ ದಾಖಲಿಸಿವೆ ಎಂಬ ಆರೋಪ ಕೇಳಿಬಂದಿದೆ. ಕೋರ್ಟ್ ನೀಡಿದ್ದ ಎಸ್‌ಒಪಿ ನಿಯಮ ಉಲ್ಲಂಘಿಸಿ ಎಐ ಹೆಸರಿನಲ್ಲಿ ಸಾಮಾನ್ಯ ಕ್ಯಾಮೆರಾ ಅಳವಡಿಸಿ ಕಣ್ಣಿಗೆ ಮಣ್ಣೆರಚಲಾಗಿದ್ದು, ತಾಂತ್ರಿಕ ದೋಷದಿಂದ ಸಿಸಿಟಿವಿ ಆಫ್ ಆಗಿದ್ದನ್ನೇ ದುಷ್ಕೃತ್ಯ ಎಂದು ಬಿಂಬಿಸಲಾಗಿದೆ ಎಂದು ಐವಿಎಸ್ ಸಿಬ್ಬಂದಿ ದೂರಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್: ಬಾಕಿ ಹಣ ನೀಡದೆ ಅಮಾಯಕರ ಮೇಲೆ ಸುಳ್ಳು ಕೇಸ್ ಹಾಕಿದ ಆರೋಪ
ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್
ಪ್ರದೀಪ್​ ಚಿಕ್ಕಾಟಿ
| Edited By: |

Updated on: Jun 07, 2026 | 1:11 PM

Share

ಬೆಂಗಳೂರು, ಜೂನ್ 07: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ವೇಳೆ ಸಿಸಿಟಿವಿ ವೈರ್ ಕಟ್ (CCTV wire cut) ಮಾಡಲಾಗಿತ್ತು ಎಂಬ ಆರೋಪದ ಬೆನ್ನಲ್ಲೇ ಈಗ ಪ್ರಕರಣಕ್ಕೆ ಭಾರಿ ಟ್ವಿಸ್ಟ್ ಸಿಕ್ಕಿದೆ. ಪಂದ್ಯದ ವೇಳೆ ಯಾವುದೇ ದುಷ್ಕೃತ್ಯ ಅಥವಾ ಭದ್ರತಾ ಲೋಪ ಆಗಿರಲಿಲ್ಲ, ಬದಲಿಗೆ ಬಾಕಿ ಹಣ ನೀಡದೇ ವಂಚಿಸಲು ಸಿಸಿಟಿವಿ ತಂತ್ರಜ್ಞಾನ ಸಂಸ್ಥೆಗಳು ಅಮಾಯಕರ ಮೇಲೆ ಸುಳ್ಳು ಕೇಸ್ ದಾಖಲಿಸಿ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮುಖ್ಯಾಂಶಗಳು

  • ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ.
  • ಬಾಕಿ ನಲವತ್ತು ಲಕ್ಷ ರೂಪಾಯಿ ನೀಡದೆ ವಂಚಿಸಿರುವ ಆರೋಪ ಕೇಳಿಬಂದಿದೆ.
  • ತಪ್ಪು ಮುಚ್ಚಿಕೊಳ್ಳಲು ಅಮಾಯಕ ಯುವಕರ ಮೇಲೆ ಸುಳ್ಳು ಕೇಸ್ ಹಾಕಲಾಗಿದೆ.

ಕೊಡಬೇಕಿದ್ದ ಹಣ ಕೊಡದೇ ವಂಚನೆ

ಆರ್‌ಸಿಬಿ ಮತ್ತು ಕೆಎಸ್‌ಸಿಎ ಮುಖಾಂತರ ಸ್ಟೇಡಿಯಂನ ಭದ್ರತಾ ನಿಯಮಾವಳಿ (SOP) ಸಂಬಂಧಿಸಿದಂತೆ ಒಟ್ಟು 7 ಕೋಟಿ ರೂಪಾಯಿಗಳ ಯೋಜನೆ ಸಿದ್ಧವಾಗಿತ್ತು. ಇದರಲ್ಲಿ ಹರಿಯಾಣ ಮೂಲದ ಸ್ಟಾಕು (Staqu) ಸಂಸ್ಥೆಗೆ 4.5 ಕೋಟಿಗೆ ಟೆಂಡರ್ ನೀಡಲಾಗಿತ್ತು. ಆ ಬಳಿಕ ಎರಡನೇ ವೆಂಡರ್ ಆಗಿ ಗುಜರಾತ್ ಮೂಲದ ಟೆಕ್‌ಸ್ಟಿಚ್ (Techstitch) ಸಂಸ್ಥೆ ಹಾಗೂ ಅಂತಿಮವಾಗಿ ಪುಣೆ ಮೂಲದ ಐವಿಎಸ್ ಟೆಕ್ ಸೆಕ್ಯೂರ್ ಪ್ರೈವೇಟ್ ಲಿಮಿಟೆಡ್ (IVS Tech Secure Pvt Ltd) ಕಂಪನಿಗೆ ಸಿಸಿಟಿವಿ ಅಳವಡಿಕೆಯ ಹೊಣೆ ಸಿಕ್ಕಿತ್ತು. ಐವಿಎಸ್ ಸಂಸ್ಥೆಯು ಬೆಂಗಳೂರಿನ ಸಿಬ್ಬಂದಿ ಮೂಲಕ 1.2 ಕೋಟಿ ರೂಪಾಯಿಯ ಕೊಟೇಷನ್ ನೀಡಿ ಕೆಲಸ ಮುಗಿಸಿತ್ತು. ಆದರೆ ಮೂರು ಪಂದ್ಯಗಳು ಮುಗಿದ ಬಳಿಕ 1 ಕೋಟಿ ರೂಪಾಯಿ ನೀಡಿ, ಇನ್ನುಳಿದ 40 ಲಕ್ಷ ರೂಪಾಯಿ ಬಾಕಿ ಹಣ ನೀಡದೇ ಕಂಪನಿಗಳು ಸತಾಯಿಸಿದ್ದವು.

ತಪ್ಪು ಮುಚ್ಚಿಹಾಕಲು ಸುಳ್ಳು ಕೇಸ್?

ಕೊನೆಯ ಪಂದ್ಯಕ್ಕೂ ಮುನ್ನ ಕ್ರೀಡಾಂಗಣದಲ್ಲಿ ಪವರ್ ಸಮಸ್ಯೆಯಿಂದಾಗಿ ಸಿಸಿಟಿವಿ ಆಫ್ ಆಗಿತ್ತು. ಈ ವೇಳೆ ಐವಿಎಸ್ ಸಂಸ್ಥೆಯು ಬಾಕಿ ಹಣ ನೀಡುವಂತೆ ಕೇಳಿತ್ತಾದರೂ, ಪಂದ್ಯಕ್ಕೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅಬ್ದುಲ್ ಕಲಾಂ ಮತ್ತು ಮಂಜುನಾಥ್ ಎಂಬ ಇಬ್ಬರು ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿತ್ತು. ಆದರೆ ತಾಂತ್ರಿಕ ಸಮಸ್ಯೆ ಬಗೆಹರಿಸಲಾಗದೆ ಅವರು ಟೆಕ್ನಿಕಲ್ ಟೀಮ್ ಕರೆಯಲು ವಾಪಸ್ ಬಂದಿದ್ದರು. ಇದೇ ಸಿಸಿಟಿವಿ ದೃಶ್ಯಾವಳಿಗಳನ್ನು ಇಟ್ಟುಕೊಂಡು ಸ್ಟಾಕು ಕಂಪನಿಯ ಆದಿತ್ಯ ಭಟ್ ಎಂಬುವವರು ವೈರ್ ಕಟ್ ಮಾಡಿದ್ದಾರೆ ಎಂದು ಅಮಾಯಕರ ಮೇಲೆ ಸುಳ್ಳು ದೂರು ನೀಡಿದ್ದರು.

ಕೋರ್ಟ್ ನಿಯಮಾವಳಿಗೆ ಕಣ್ಣುಕಟ್ಟಿದ ತಂತ್ರಜ್ಞಾನ

ಕಾಲ್ತುಳಿತ ದುರಂತದ ಬಳಿಕ ಎಸ್‌ಒಪಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರ್ಟ್ ಸೂಚಿಸಿತ್ತು. ಎಐ (AI) ಕ್ಯಾಮೆರಾಗಳನ್ನು ಅಳವಡಿಸುವುದಾಗಿ ಹೇಳಿ, ಕೇವಲ ಹೆಡ್ ಕೌಂಟ್ ಮಾತ್ರ ಸಾಧ್ಯವಿರುವ ಸಾಮಾನ್ಯ ಕ್ಯಾಮೆರಾಗಳನ್ನು ಅಳವಡಿಸಿ ವಂಚಿಸಲಾಗಿದೆ ಎಂದು ಐವಿಎಸ್ ಪ್ರಾಜೆಕ್ಟ್ ಮ್ಯಾನೇಜರ್ ವರುಣ್ ಹಾಗೂ ಸಿಬ್ಬಂದಿ ಅಚ್ಚುತ್ ಆರೋಪಿಸಿದ್ದಾರೆ. 1.5 ಕೋಟಿ ಬಜೆಟ್‌ನಲ್ಲಿ ಎಐ ಕ್ಯಾಮೆರಾ ಅಳವಡಿಸಲು ಸಾಧ್ಯವೇ ಇಲ್ಲದಿದ್ದರೂ ತಪ್ಪು ಮುಚ್ಚಿಹಾಕಲು ಈ ಹೂಡಿಕೆ ನಾಟಕವಾಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ವೈರ್ ಕಟ್ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಚ್ಚರಿಯ ಕಾರಣ ಬಹಿರಂಗ

ಲಂಚದ ಆರೋಪ

ಕ್ರೀಡಾಂಗಣದಲ್ಲಿ ಕೆಲಸ ಮಾಡಲು ಕೆಎಸ್‌ಸಿಎ ಐಟಿ ಹೆಡ್ ಎನ್ನಲಾದ ರವಿ ಎಂಬಾತ ಆನ್‌ಲೈನ್ ಮೂಲಕ 40 ಸಾವಿರ ಹಾಗೂ ನಗದು ರೂಪದಲ್ಲಿ 2 ಲಕ್ಷಕ್ಕೂ ಅಧಿಕ ಹಣವನ್ನು ಲಂಚವಾಗಿ ಪಡೆದಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಈಗ ಬಾಕಿ ಹಣ ಕೇಳಿದರೆ ಕೆಎಸ್‌ಸಿಎ ಹಾಗೂ ಟೆಕ್‌ಸ್ಟಿಚ್ ಕಂಪನಿಗಳು ಒಬ್ಬರ ಮೇಲೊಬ್ಬರು ಕೈ ತೋರಿಸುತ್ತಾ ಜಾರಿಕೊಳ್ಳುತ್ತಿವೆ.

ಪೊಲೀಸ್ ತನಿಖೆಯಲ್ಲೂ ಇದು ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಎಂಬುದು ಪತ್ತೆಯಾಗಿದ್ದು, ಇಬ್ಬರು ಯುವಕರಿಗೆ ಸ್ಟೇಷನ್ ಬೇಲ್ ನೀಡಲಾಗಿದೆ. ಆದರೆ ಸುಳ್ಳು ಆರೋಪದಿಂದಾಗಿ ಯುವಕರು ಮುಜುಗರಕ್ಕೊಳಗಾಗಿದ್ದಾರೆ. ಈ ಭದ್ರತಾ ಗೊಂದಲ ಹಾಗೂ 10 ಸಾವಿರ ಐಪಿಎಲ್ ಟಿಕೆಟ್‌ಗಳ ಬೇಡಿಕೆಯೇ ಐಪಿಎಲ್‌ನ ಅಂತಿಮ ಪಂದ್ಯಗಳನ್ನು ಗುಜರಾತ್‌ಗೆ ಸ್ಥಳಾಂತರಿಸಲು ಪ್ರಮುಖ ಕಾರಣವಾಗಿತ್ತು ಎಂಬ ಆಘಾತಕಾರಿ ಅಂಶವೂ ಬೆಳಕಿಗೆ ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ