ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಮೈಕೆಲ್ ಕುನ್ಹಾ ವರದಿ ರದ್ದು ಕೋರಿ ಹೈಕೋರ್ಟ್​ಗೆ ಡಿಎನ್​ಎ ರಿಟ್ ಅರ್ಜಿ

ಬೆಂಗಳೂರು ಕಾಲ್ತುಳಿತ ಘಟನೆ ಸಂಬಂಧ ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ಕರ್ನಾಟಕ ಸಚಿವ ಸಂಪುಟ ಅಂಗೀಕರಿಸಿ ಆರ್ಸಿಬಿ, ಡಿಎನ್​ಎ ಎಂಟರ್​​ಟೇನ್​ಮೆಂಟ್ ಹಾಗೂ ಕೆಎಸ್​ಸಿಎ ವಿರುದ್ಧ ಕ್ರಿಮಿನಲ್ ಕೇಸ್​​ಗೆ ನಿರ್ಧಾರ ಕೈಗೊಂಡ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ. ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ರದ್ದುಗೊಳಿಸುವಂತೆ ಕೋರಿ ಡಿಎನ್​ಎ ಎಂಟರ್​​ಟೇನ್​ಮೆಂಟ್ ಕಂಪನಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಮೈಕೆಲ್ ಕುನ್ಹಾ ವರದಿ ರದ್ದು ಕೋರಿ ಹೈಕೋರ್ಟ್​ಗೆ ಡಿಎನ್​ಎ ರಿಟ್ ಅರ್ಜಿ
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಮೈಕೆಲ್ ಕುನ್ಹಾ ವರದಿ ರದ್ದು ಕೋರಿ ಹೈಕೋರ್ಟ್​ಗೆ ಡಿಎನ್​ಎ ರಿಟ್ ಅರ್ಜಿ
Updated By: Ganapathi Sharma

Updated on: Jul 25, 2025 | 12:59 PM

ಬೆಂಗಳೂರು, ಜುಲೈ 25: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆ ಸಂಬಂಧ ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ರದ್ದುಗೊಳಿಸಬೇಕು ಎಂದು ತುರ್ತು ವಿಚಾರಣೆ ಕೋರಿ ಡಿಎನ್​ಎ ಎಂಟರ್​ಟೇನ್​ಮೆಂಟ್​​ ನೆಟ್​ವರ್ಕ್ ಕರ್ನಾಟಕ ಹೈಕೋರ್ಟ್​ಗೆ ಮನವಿ ಮಾಡಿದೆ. ನ್ಯಾ.ಜಯಂತ್ ಬ್ಯಾನರ್ಜಿ, ನ್ಯಾ.ಎಸ್.ಜಿ.ಪಂಡಿತ್ ಅವರಿದ್ದ ಪೀಠಕ್ಕೆ ಮನವಿ ಸಲ್ಲಿಕೆಯಾಗಿದೆ. ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ಕರ್ನಾಟಕ ಸಚಿವ (Karnataka Cabinet) ಸಂಪುಟ ಅಂಗೀಕರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಸದ್ಯ, ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 28ಕ್ಕೆ ನಿಗದಿಪಡಿಸಿದೆ.

ಸರ್ಕಾರ ತನ್ನ ಮುಖ ಉಳಿಸಿಕೊಳ್ಳಲು ಆಯೋಗ ರಚಿಸಿದಂತಿದೆ. ನ್ಯಾ.ಕುನ್ಹಾ ಆಯೋಗದ ವರದಿ ಏಕಪಕ್ಷೀಯವಾಗಿದೆ. ಸಾಕ್ಷಿಗಳ ಪಾಟೀಸವಾಲಿಗೆ ಅವಕಾಶ ನೀಡಲಾಗಿಲ್ಲ. ಅರ್ಜಿದಾರರ ವರ್ಚಸ್ಸಿಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಪೂರ್ವಯೋಜಿತವಾಗಿಯೇ ವರದಿ ಲೀಕ್ ಮಾಡಲಾಗಿದೆ. ಹೀಗಾಗಿ ವರದಿಯನ್ನೇ ರದ್ದುಪಡಿಸಬೇಕು ಎಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಘಟನೆ ಸಂಬಂಧ ಕರ್ನಾಟಕ ಸಚಿವ ಸಂಪುಟ ಗುರುವಾರ ಮಹತ್ವದ ತೀರ್ಮಾನ ಕೈಗೊಂಡಿತ್ತು. ಪ್ರಕರಣ ಸಂಬಂಧ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಮತ್ತು ಆರ್​ಸಿಬಿ, ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿ ಡಿಎನ್​ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಸಂಪುಟ ತೀರ್ಮಾನಿಸಿತ್ತು. ಇದರಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಎ.ಶಂಕರ್, ಮಾಜಿ ಖಜಾಂಚಿ ಜಯರಾಂ, ಆರ್​​ಸಿಬಿ ತಂಡದ ರಾಜೇಶ್ ಮೆನನ್, ಡಿಎನ್​ಎ ನೆಟ್​ವರ್ಕ್​ ಲಿಮಿಟೆಡ್​​ ಎಂಡಿ ವೆಂಕಟ್ ವರ್ಧನ್ , ಡಿಎನ್​ಎ ನೆಟ್​ವರ್ಕ್​ ಲಿಮಿಟೆಡ್ ಉಪಾಧ್ಯಕ್ಷ ಸುನೀಲ್ ಮಾಥೂರ್ ಇವರಿಗೆ ಸಂಕಷ್ಟ ಎದುರಾಗಿದೆ. ಇದರ ಬೆನ್ನಲ್ಲೇ ಹೈಕೋರ್ಟ್​ಗೆ ಡಿಎನ್​​ಎ ಅರ್ಜಿ ಸಲ್ಲಿಸಿದೆ.

ಇದನ್ನೂ ಓದಿ
ಕಾಲ್ತುಳಿತ: ಆರ್​ಸಿಬಿ ವಿರುದ್ಧ ಕ್ರಿಮಿನಲ್ ಕೇಸ್​ಗೆ ಸಂಪುಟ ತೀರ್ಮಾನ
ಸಿಎಂ ಕೊಹ್ಲಿ ಅಭಿಮಾನಿಗಳ ಕ್ಷಮೆ ಕೇಳಬೇಕೆಂದ ಮಾಜಿ ಡಿವೈಎಸ್​​ಪಿ: ಕಾರಣ ಏನು?
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ಆರ್​ಸಿಬಿ ವಿರುದ್ಧ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ

ಸದ್ಯ ಡಿಎನ್​ಎ ಎಂಟರ್​ಟೇನ್​ಮೆಂಟ್​​ ನೆಟ್​ವರ್ಕ್ ರಿಟ್ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ಹೈಕೋರ್ಟ್, ಜುಲೈ 28ಕ್ಕೆ ವಿಚಾರಣೆ ನಡೆಸಲಿದೆ. ಹೈಕೋರ್ಟ್ ತೀರ್ಪು ಯಾರ ಪರ ಬರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ