AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜ 5ರಂದು 22ನೇ ಚಿತ್ರಸಂತೆ: ಈ ಬಾರಿ ಹೆಣ್ಣು ಮಗುವಿಗೆ ಸಮರ್ಪಣೆ

ಜನವರಿ 5 ರಂದು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ 22ನೇ ವಾರ್ಷಿಕ ಚಿತ್ರಸಂತೆಯನ್ನು ಕರ್ನಾಟಕ ಚಿತ್ರಕಲಾ ಪರಿಷತ್​​ ಆಯೋಜನೆ ಮಾಡಿದೆ. ಮುಖ್ಯಮಂತ್ರಿಗಳು ಉದ್ಘಾಟಿಸಲಿರುವ ಈ ಕಾರ್ಯಕ್ರಮದಲ್ಲಿ 20 ರಾಜ್ಯಗಳಿಂದ 3,177 ಕಲಾವಿದರು ಭಾಗವಹಿಸಲಿದ್ದಾರೆ. ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣು ಮಕ್ಕಳಿಗೆ ಸಮರ್ಪಿಸಲಾಗಿದೆ. ಬಿಎಂಟಿಸಿ ಬಸ್ ಸೌಲಭ್ಯವೂ ಲಭ್ಯವಿರುತ್ತದೆ.

ಬೆಂಗಳೂರಿನಲ್ಲಿ ಜ 5ರಂದು 22ನೇ ಚಿತ್ರಸಂತೆ: ಈ ಬಾರಿ ಹೆಣ್ಣು ಮಗುವಿಗೆ ಸಮರ್ಪಣೆ
ಬೆಂಗಳೂರಿನಲ್ಲಿ ಜ 5ರಂದು 22ನೇ ಚಿತ್ರಸಂತೆ: ಈ ಬಾರಿ ಹೆಣ್ಣು ಮಗುವಿಗೆ ಸಮರ್ಪಣೆ
Anil Kalkere
| Edited By: |

Updated on: Dec 28, 2024 | 3:37 PM

Share

ಬೆಂಗಳೂರು, ಡಿಸೆಂಬರ್​ 28: ನಗರದ ಕುಮಾರಕೃಪಾ ರಸ್ತೆಯಲ್ಲಿ ಜನವರಿ 5ರಂದು ಕರ್ನಾಟಕ ಚಿತ್ರಕಲಾ ಪರಿಷತ್​​ನಿಂದ 22ನೇ ಚಿತ್ರಸಂತೆ (Chitrasante) ಆಯೋಜನೆ ಮಾಡಲಾಗಿದೆ. ಜ.5ರಂದು ಸಿಎಂ ಸಿದ್ದರಾಮಯ್ಯ ಚಿತ್ರಸಂತೆ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 9ರವರೆಗೆ ನಡೆಯಲಿರುವ ಚಿತ್ರಸಂತೆಯಲ್ಲಿ 20 ರಾಜ್ಯಗಳ ಕಲಾವಿದರ ಕಲಾಕೃತಿಗಳ ಅನಾವರಣಗೊಳ್ಳಲಿದೆ. ಚಿತ್ರಸಂತೆಯಲ್ಲಿ ಭಾಗವಹಿಸಲು 3,177 ಕಲಾವಿದರಿಂದ ಅರ್ಜಿ ಸಲ್ಲಿಸಿದ್ದಾರೆ. ಈ ಬಾರಿ ಹೆಣ್ಣು ಮಗುವಿಗೆ ಚಿತ್ರ ಸಂತೆ ಸಮರ್ಪಣೆ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ ಚಿತ್ರಸಂತೆ ಈಗಾಗಲೇ ಸಾಕಷ್ಟು ಜನಪ್ರಿಯ ಗಳಿಸಿದೆ. ಸಾಕಷ್ಟು ಕಲಾವಿದರು ಈ ಚಿತ್ರಸಂತೆಗಾಗಿ ಕಾಯುತ್ತಿರುತ್ತಾರೆ. ಇನ್ನು ಪ್ರತಿವರ್ಷ ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ನಡೆಯುವುದರಿಂದ ಜನವರಿ 5ರಂದು ಅದಕ್ಕೆ ಮೀಸಲಾಗಿರುತ್ತದೆ. ಪರ್ಯಾಯ ಮಾರ್ಗಗಳನ್ನು ಸಂಚಾರಿ ಪೊಲೀಸರು ಸೂಚಿಸುತ್ತಾರೆ.

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್​​ ಶಂಕರ್ ಹೇಳಿದ್ದಿಷ್ಟು

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್​​ ಶಂಕರ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, 22ನೇ ವರ್ಷದ ಚಿತ್ರಸಂತೆ ಕಾರ್ಯಕ್ರಮ ಜ. 5ರಂದು ನಡೆಯಲಿದೆ. ಹೆಣ್ಣು ಮಗು ಶೋಷಣೆ ಆಗುತ್ತಿರುವ ಹಿನ್ನೆಲೆ ಈ ಬಾರಿಯ ಚಿತ್ರಸಂತೆಯನ್ನ ಹೆಣ್ಣು ಮಗುವಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: New Year: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ​, ವಾಹನ ನಿಲುಗಡೆ ನಿಷೇಧ

ಹೆಣ್ಣು ಗಂಡುಗೆ ಸಮಾನವಾದ ಹಕ್ಕು ಇದೆ. ಈ ಚಿತ್ರಸಂತೆ ಕಾರ್ಯಕ್ರಮದಲ್ಲಿ ಜನವರಿ 4 ರಂದು ಪ್ರಶಸ್ತಿ ನೀಡಲಾಗುತ್ತದೆ. 5 ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತದೆ. ಸಚಿವ ಹೆಚ್.ಕೆ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನವೆಂಬರ್​​ನಲ್ಲೇ ಕರ್ನಾಟಕ ಚಿತ್ರಕಲಾ ಪರಿಷತ್ತು 2025ರ ಚಿತ್ರಸಂತೆಗೆ ಕಲಾವಿದರಿಂದ ಅರ್ಜಿಗಳಿಗೆ ಆಹ್ವಾನಿಸಲಾಗಿತ್ತು. ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ, ಪಂಜಾಬ್, ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಚಿತ್ರಸಂತೆಯಲ್ಲಿ ಭಾಗಿಯಾಗಲು ನೋಂದಣಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಗುಡ್ ನ್ಯೂಸ್: ಹೊಸ ವರ್ಷದ ಸಂಭ್ರಮಾಚರಣೆಗೆ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ

ಇನ್ನು ಚಿತ್ರಸಂತೆ ಹಿನ್ನೆಲೆ ಜನವರಿ 5 ರಂದು ಕಲಾಭಿಮಾನಿಗಳು ಮತ್ತು ಪ್ರಯಾಣಿಕರು ಸುಲಭವಾಗಿ ಸ್ಥಳವನ್ನು ತಲುಪುವ ನಿಟ್ಟಿನಲ್ಲಿ ಕುಮಾರ ಕೃಪಾ ರಸ್ತೆಗೆ ಬಿಎಂಟಿಸಿ ಬಸ್​ಗಳು ಕೂಡ ಸಂಚರಿಸಲಿವೆ. ಪ್ರತಿ 10 ನಿಮಿಷಗಳಿಗೊಮ್ಮೆ ಬಸ್​​ಗಳಿದ್ದು, ಆ ದಿನದಂದು ಬೆಳಿಗ್ಗೆ 5 ರಿಂದ ರಾತ್ರಿ 9 ರವರೆಗೆ ಕಾರ್ಯನಿರ್ವಹಿಸಲಿವೆ. 15 ರೂ. ಟಿಕೆಟ್​ ದರದಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್