AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜ 5ರಂದು 22ನೇ ಚಿತ್ರಸಂತೆ: ಈ ಬಾರಿ ಹೆಣ್ಣು ಮಗುವಿಗೆ ಸಮರ್ಪಣೆ

ಜನವರಿ 5 ರಂದು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ 22ನೇ ವಾರ್ಷಿಕ ಚಿತ್ರಸಂತೆಯನ್ನು ಕರ್ನಾಟಕ ಚಿತ್ರಕಲಾ ಪರಿಷತ್​​ ಆಯೋಜನೆ ಮಾಡಿದೆ. ಮುಖ್ಯಮಂತ್ರಿಗಳು ಉದ್ಘಾಟಿಸಲಿರುವ ಈ ಕಾರ್ಯಕ್ರಮದಲ್ಲಿ 20 ರಾಜ್ಯಗಳಿಂದ 3,177 ಕಲಾವಿದರು ಭಾಗವಹಿಸಲಿದ್ದಾರೆ. ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣು ಮಕ್ಕಳಿಗೆ ಸಮರ್ಪಿಸಲಾಗಿದೆ. ಬಿಎಂಟಿಸಿ ಬಸ್ ಸೌಲಭ್ಯವೂ ಲಭ್ಯವಿರುತ್ತದೆ.

ಬೆಂಗಳೂರಿನಲ್ಲಿ ಜ 5ರಂದು 22ನೇ ಚಿತ್ರಸಂತೆ: ಈ ಬಾರಿ ಹೆಣ್ಣು ಮಗುವಿಗೆ ಸಮರ್ಪಣೆ
ಬೆಂಗಳೂರಿನಲ್ಲಿ ಜ 5ರಂದು 22ನೇ ಚಿತ್ರಸಂತೆ: ಈ ಬಾರಿ ಹೆಣ್ಣು ಮಗುವಿಗೆ ಸಮರ್ಪಣೆ
Anil Kalkere
| Edited By: |

Updated on: Dec 28, 2024 | 3:37 PM

Share

ಬೆಂಗಳೂರು, ಡಿಸೆಂಬರ್​ 28: ನಗರದ ಕುಮಾರಕೃಪಾ ರಸ್ತೆಯಲ್ಲಿ ಜನವರಿ 5ರಂದು ಕರ್ನಾಟಕ ಚಿತ್ರಕಲಾ ಪರಿಷತ್​​ನಿಂದ 22ನೇ ಚಿತ್ರಸಂತೆ (Chitrasante) ಆಯೋಜನೆ ಮಾಡಲಾಗಿದೆ. ಜ.5ರಂದು ಸಿಎಂ ಸಿದ್ದರಾಮಯ್ಯ ಚಿತ್ರಸಂತೆ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 9ರವರೆಗೆ ನಡೆಯಲಿರುವ ಚಿತ್ರಸಂತೆಯಲ್ಲಿ 20 ರಾಜ್ಯಗಳ ಕಲಾವಿದರ ಕಲಾಕೃತಿಗಳ ಅನಾವರಣಗೊಳ್ಳಲಿದೆ. ಚಿತ್ರಸಂತೆಯಲ್ಲಿ ಭಾಗವಹಿಸಲು 3,177 ಕಲಾವಿದರಿಂದ ಅರ್ಜಿ ಸಲ್ಲಿಸಿದ್ದಾರೆ. ಈ ಬಾರಿ ಹೆಣ್ಣು ಮಗುವಿಗೆ ಚಿತ್ರ ಸಂತೆ ಸಮರ್ಪಣೆ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ ಚಿತ್ರಸಂತೆ ಈಗಾಗಲೇ ಸಾಕಷ್ಟು ಜನಪ್ರಿಯ ಗಳಿಸಿದೆ. ಸಾಕಷ್ಟು ಕಲಾವಿದರು ಈ ಚಿತ್ರಸಂತೆಗಾಗಿ ಕಾಯುತ್ತಿರುತ್ತಾರೆ. ಇನ್ನು ಪ್ರತಿವರ್ಷ ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ನಡೆಯುವುದರಿಂದ ಜನವರಿ 5ರಂದು ಅದಕ್ಕೆ ಮೀಸಲಾಗಿರುತ್ತದೆ. ಪರ್ಯಾಯ ಮಾರ್ಗಗಳನ್ನು ಸಂಚಾರಿ ಪೊಲೀಸರು ಸೂಚಿಸುತ್ತಾರೆ.

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್​​ ಶಂಕರ್ ಹೇಳಿದ್ದಿಷ್ಟು

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್​​ ಶಂಕರ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, 22ನೇ ವರ್ಷದ ಚಿತ್ರಸಂತೆ ಕಾರ್ಯಕ್ರಮ ಜ. 5ರಂದು ನಡೆಯಲಿದೆ. ಹೆಣ್ಣು ಮಗು ಶೋಷಣೆ ಆಗುತ್ತಿರುವ ಹಿನ್ನೆಲೆ ಈ ಬಾರಿಯ ಚಿತ್ರಸಂತೆಯನ್ನ ಹೆಣ್ಣು ಮಗುವಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: New Year: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ​, ವಾಹನ ನಿಲುಗಡೆ ನಿಷೇಧ

ಹೆಣ್ಣು ಗಂಡುಗೆ ಸಮಾನವಾದ ಹಕ್ಕು ಇದೆ. ಈ ಚಿತ್ರಸಂತೆ ಕಾರ್ಯಕ್ರಮದಲ್ಲಿ ಜನವರಿ 4 ರಂದು ಪ್ರಶಸ್ತಿ ನೀಡಲಾಗುತ್ತದೆ. 5 ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತದೆ. ಸಚಿವ ಹೆಚ್.ಕೆ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನವೆಂಬರ್​​ನಲ್ಲೇ ಕರ್ನಾಟಕ ಚಿತ್ರಕಲಾ ಪರಿಷತ್ತು 2025ರ ಚಿತ್ರಸಂತೆಗೆ ಕಲಾವಿದರಿಂದ ಅರ್ಜಿಗಳಿಗೆ ಆಹ್ವಾನಿಸಲಾಗಿತ್ತು. ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ, ಪಂಜಾಬ್, ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಚಿತ್ರಸಂತೆಯಲ್ಲಿ ಭಾಗಿಯಾಗಲು ನೋಂದಣಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಗುಡ್ ನ್ಯೂಸ್: ಹೊಸ ವರ್ಷದ ಸಂಭ್ರಮಾಚರಣೆಗೆ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ

ಇನ್ನು ಚಿತ್ರಸಂತೆ ಹಿನ್ನೆಲೆ ಜನವರಿ 5 ರಂದು ಕಲಾಭಿಮಾನಿಗಳು ಮತ್ತು ಪ್ರಯಾಣಿಕರು ಸುಲಭವಾಗಿ ಸ್ಥಳವನ್ನು ತಲುಪುವ ನಿಟ್ಟಿನಲ್ಲಿ ಕುಮಾರ ಕೃಪಾ ರಸ್ತೆಗೆ ಬಿಎಂಟಿಸಿ ಬಸ್​ಗಳು ಕೂಡ ಸಂಚರಿಸಲಿವೆ. ಪ್ರತಿ 10 ನಿಮಿಷಗಳಿಗೊಮ್ಮೆ ಬಸ್​​ಗಳಿದ್ದು, ಆ ದಿನದಂದು ಬೆಳಿಗ್ಗೆ 5 ರಿಂದ ರಾತ್ರಿ 9 ರವರೆಗೆ ಕಾರ್ಯನಿರ್ವಹಿಸಲಿವೆ. 15 ರೂ. ಟಿಕೆಟ್​ ದರದಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು