AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್ ಹಬ್ಬ: ಬೆಂಗಳೂರಿನ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

ಕ್ರಿಸ್​​ಮಸ್​ ಹಬ್ಬ ಆಚರಣೆ ಹಿನ್ನೆಯಲ್ಲಿ ಬೆಂಗಳೂರಿನ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕ್ರಿಸ್​ಮಸ್ ಹಬ್ಬ: ಬೆಂಗಳೂರಿನ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ
ಸೇಂಟ್ ಮೇರಿ ಬೆಸಿಲಿಕಾ ಚರ್ಚ್
TV9 Web
| Edited By: ವಿವೇಕ ಬಿರಾದಾರ|

Updated on: Dec 25, 2023 | 7:22 AM

Share

ಬೆಂಗಳೂರು, ಡಿಸೆಂಬರ್​ 25: ಕ್ರಿಸ್​ಮಸ್ ಹಬ್ಬ (Christmas festival) ಹಿನ್ನೆಲೆಯಲ್ಲಿ ನಗರದ ಚರ್ಚ್​​​ಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ನಗರದ ಎಲ್ಲಾ ಚರ್ಚ್​ಗಳಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವಂತೆ ಬೆಂಗಳೂರು (Bengaluru) ನಗರ ಆಯುಕ್ತರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಾದ್ಯಂತ ಪೊಲೀಸ್ ಭದ್ರತೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚರ್ಚ್​ಗಳ ಬಳಿ ಕೆಎಸ್​ಆರ್​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಇಂದು 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ಚರ್ಚ್ ಆವರಣದಲ್ಲಿ ಬಾಲ ಏಸುವಿ‌ನ ಗೊಂಬೆಯ ಮೆರವಣಿಗೆ

ಮೈಸೂರು: ಸಂತ ಫಿಲೋಮಿನಾ ಚರ್ಚ್‌ನಲ್ಲಿ ಕ್ರಿಸ್​ಮಸ್‌ ಹಬ್ಬ ಆಚರಣೆ ವಿಜೃಂಭಣೆಯಿಂದ ನಡೆಯುತ್ತಿದೆ. ಚರ್ಚ್ ಆವರಣದಲ್ಲಿ ಬಾಲ ಏಸುವಿ‌ನ ಗೊಂಬೆಯ ಮೆರವಣಿಗೆ ನಡೆಯಿತು. ಕೃತಕವಾದ ಕೊಟ್ಟಿಗೆ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಬಾಲ ಏಸುವಿನ ಗೊಂಬೆ ಇರಿಸಲಾಗಿದೆ.

ಗದಗನ ಬೆಟಗೇರಿ ಚರ್ಚ್​ನಲ್ಲಿ ಕ್ರೈಸ್ತ ಸಮುದಾಯದವರು ಮಧ್ಯರಾತ್ರಿ ಪ್ರಾರ್ಥನೆ ಸಲ್ಲಿಸಿದರು. ಇನ್ನು ಹುಬ್ಬಳ್ಳಿಯ ಕೇಶ್ವಾಪುರ ರಸ್ತೆಯಲ್ಲಿರುವ ಶಾಂತಿನಗರದ ಚರ್ಚ್​ನಲ್ಲಿ ಕ್ರೈಸ್ತ ಸಮುದಾಯದವರು ಪ್ರಾರ್ಥನೆ ಸಲ್ಲಿಸಿ ಶುಭಾಶಯ ತಿಳಿಸಿದರು.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ