AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್ ಹಬ್ಬ: ಬೆಂಗಳೂರಿನ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

ಕ್ರಿಸ್​​ಮಸ್​ ಹಬ್ಬ ಆಚರಣೆ ಹಿನ್ನೆಯಲ್ಲಿ ಬೆಂಗಳೂರಿನ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕ್ರಿಸ್​ಮಸ್ ಹಬ್ಬ: ಬೆಂಗಳೂರಿನ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ
ಸೇಂಟ್ ಮೇರಿ ಬೆಸಿಲಿಕಾ ಚರ್ಚ್
TV9 Web
| Edited By: |

Updated on: Dec 25, 2023 | 7:22 AM

Share

ಬೆಂಗಳೂರು, ಡಿಸೆಂಬರ್​ 25: ಕ್ರಿಸ್​ಮಸ್ ಹಬ್ಬ (Christmas festival) ಹಿನ್ನೆಲೆಯಲ್ಲಿ ನಗರದ ಚರ್ಚ್​​​ಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ನಗರದ ಎಲ್ಲಾ ಚರ್ಚ್​ಗಳಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವಂತೆ ಬೆಂಗಳೂರು (Bengaluru) ನಗರ ಆಯುಕ್ತರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಾದ್ಯಂತ ಪೊಲೀಸ್ ಭದ್ರತೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚರ್ಚ್​ಗಳ ಬಳಿ ಕೆಎಸ್​ಆರ್​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಇಂದು 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ಚರ್ಚ್ ಆವರಣದಲ್ಲಿ ಬಾಲ ಏಸುವಿ‌ನ ಗೊಂಬೆಯ ಮೆರವಣಿಗೆ

ಮೈಸೂರು: ಸಂತ ಫಿಲೋಮಿನಾ ಚರ್ಚ್‌ನಲ್ಲಿ ಕ್ರಿಸ್​ಮಸ್‌ ಹಬ್ಬ ಆಚರಣೆ ವಿಜೃಂಭಣೆಯಿಂದ ನಡೆಯುತ್ತಿದೆ. ಚರ್ಚ್ ಆವರಣದಲ್ಲಿ ಬಾಲ ಏಸುವಿ‌ನ ಗೊಂಬೆಯ ಮೆರವಣಿಗೆ ನಡೆಯಿತು. ಕೃತಕವಾದ ಕೊಟ್ಟಿಗೆ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಬಾಲ ಏಸುವಿನ ಗೊಂಬೆ ಇರಿಸಲಾಗಿದೆ.

ಗದಗನ ಬೆಟಗೇರಿ ಚರ್ಚ್​ನಲ್ಲಿ ಕ್ರೈಸ್ತ ಸಮುದಾಯದವರು ಮಧ್ಯರಾತ್ರಿ ಪ್ರಾರ್ಥನೆ ಸಲ್ಲಿಸಿದರು. ಇನ್ನು ಹುಬ್ಬಳ್ಳಿಯ ಕೇಶ್ವಾಪುರ ರಸ್ತೆಯಲ್ಲಿರುವ ಶಾಂತಿನಗರದ ಚರ್ಚ್​ನಲ್ಲಿ ಕ್ರೈಸ್ತ ಸಮುದಾಯದವರು ಪ್ರಾರ್ಥನೆ ಸಲ್ಲಿಸಿ ಶುಭಾಶಯ ತಿಳಿಸಿದರು.

Follow Us
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!