AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಭಗ್ನ ಪ್ರೇಮಿಯಿಂದ ಚರ್ಚ್​ನಲ್ಲಿ ದಾಂಧಲೆ: ಅನೇಕ‌ ವಸ್ತುಗಳು ಧ್ವಂಸ

ಪ್ರೇಮ ವೈಫಲ್ಯದಿಂದ ಮಾನಸಿಕವಾಗಿ ನೊಂದಿದ್ದ ಯುವಕನೊಬ್ಬ, ಇಂದು(ಜೂ.21) ನಸುಕಿನ ಜಾವ 4 ಗಂಟೆಯ ಸುಮಾರಿಗೆ ಕಮ್ಮನಹಳ್ಳಿಯ ಚರ್ಚ್​ನ ಪಾಟ್​ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಒಡೆದು ದಾಂಧಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

Bengaluru News: ಭಗ್ನ ಪ್ರೇಮಿಯಿಂದ ಚರ್ಚ್​ನಲ್ಲಿ ದಾಂಧಲೆ: ಅನೇಕ‌ ವಸ್ತುಗಳು ಧ್ವಂಸ
ಕೃತ್ಯ ಎಸಗಿದ ವ್ಯಕ್ತಿ
ಕಿರಣ್ ಹನುಮಂತ್​ ಮಾದಾರ್
|

Updated on: Jun 21, 2023 | 1:45 PM

Share

ಬೆಂಗಳೂರು: ಪ್ರೀತಿ ಎಂತಹವರನ್ನು ಬದುಕಿಸುವ ಜೊತೆಗೆ ಹೆಚ್ಚು ಕಮ್ಮಿಯಾದರೇ ಜೀವವನ್ನೇ ತೆಗೆಯುತ್ತದೆ. ಹೌದು ನಾವು ತುಂಬಾ ಪ್ರೀತಿಸುತ್ತಿರುವವರು ಸಡನ್​ ನಮ್ಮನ್ನ ಬಿಟ್ಟು ಹೋದರೇ ಆಗುವಂತಹ ನೋವು ಹೇಳತೀರದು. ಅದರಂತೆ ಇಲ್ಲೊಬ್ಬ ಯುವಕ ಪ್ರೇಮ ವೈಫಲ್ಯ(Love Failure)ದಿಂದ ಮಾನಸಿಕವಾಗಿ ನೊಂದು, ಇಂದು(ಜೂ.21) ನಸುಕಿನ ಜಾವ 4 ಗಂಟೆಯ ಸುಮಾರಿಗೆ ಕಮ್ಮನಹಳ್ಳಿ(Kammanahalli)ಯ ಚರ್ಚ್​ನ ಪಾಟ್​ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಒಡೆದು ದಾಂಧಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮ್ಯಾಥ್ಯೂ ಎಂಬಾತನೇ ಕೃತ್ಯ ಎಸಗಿದ ಯುವಕ. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿ ಯುವಕನನ್ನ ಬಾಣಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ವೇಳೆ ಪೊಲೀಸರಿಗೆ ತಲೆನೋವಾದ ಯುವಕ

ಮಾನಸಿಕವಾಗಿ ವರ್ತಿಸುತ್ತಿದ್ದ ಇತನನ್ನ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಹುಚ್ಚನಂತೆ ಹೇಳಿಕೆ ನೀಡಿದ್ದಾನೆ. ಹೌದು ಯಾರು ನೀನು ಎಂದು ಕೇಳಿದಾಗ, ನಾನು ದೇವರು. ನನ್ನ ತಂದೆ ಕೂಡ ದೇವರು ಎಂದಿದ್ದಾನೆ. ಏನು ಕೆಲಸ ಮಾಡುತ್ತಿಯಾ ಎಂದರೇ ‘ದೇವರು ಏನು ಕೆಲಸ ಮಾಡುತ್ತಾನೆ ಎಂದು ತಿರುಗಿ ಪೊಲೀಸರಿಗೆ ಪ್ರಶ್ನಿಸಿದ್ದಾನೆ. ಇನ್ನು ಈ ಕುರಿತು ತಲೆ ಕೆಡಿಸಿಕೊಂಡು ಘಟನಾ ಸ್ಥಳದಲ್ಲಿ ಪರಿಶೀಲನೆ ಮಾಡುತ್ತಿದ್ದ ವೇಳೆ ಯುವಕನ ತಾಯಿ ಬಂದಿದ್ದು, ಬಳಿಕ ಯುವಕನ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

ಇದನ್ನೂ ಓದಿ:Goondagiri: ಬೆಂಗಳೂರಿನ ಅವೆನ್ಯೂ ರಸ್ತೆ ಬಳಿ ಹೋಟೆಲ್​ನಲ್ಲಿ 30 ದುಷ್ಕರ್ಮಿಗಳಿಂದ ದಾಂಧಲೆ

ಕೆಲಸಕ್ಕೆ ಹೋಗದ ಮ್ಯಾಥ್ಯೂಗೆ ಪ್ರೇಮ ವೈಫಲ್ಯ

ಕೇರಳ ಮೂಲದ ಇತ 30 ವರ್ಷವಾದರೂ ಕೆಲಸಕ್ಕೆ ಹೊಗುತ್ತಿರಲಿಲ್ಲ. ವಿದೇಶಗಳಲ್ಲಿಯು ಸಹ ಸಾಕಷ್ಟು ಓಡಾಟ ಮಾಡಿರುವ ಮ್ಯಾಥ್ಯೂವ್​ಗೆ ಈ ಹಿಂದೆ ಪ್ರೇಮ ವೈಫಲ್ಯವಾಗಿದೆಯಂತೆ. ಆದರಿಂದಲೇ ಮಾನಸಿಕವಾಗಿ ನೊಂದಿದ್ದ ಆತ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಹೌದು ತಾಯಿಯನ್ನ ವಿಚಾರಣೆ ವೇಳೆ ‘ಮನೆಯಲ್ಲಿ ದೇವರನ್ನು ಇಟ್ಟುಕೊಂಡು ಚರ್ಚ್ಗೆ ಯಾಕೆ ಹೋಗ್ತೀಯಾ ಎಂದು ತನ್ನ ತಾಯಿಗೆ ಅವಾಜ್ ಹಾಕುತ್ತಿದ್ದಾನೆ. ಇನ್ನು ಈ ಕುರಿತು ಬಾಣಸವಾಡಿ ಪೊಲೀಸರಿಂದ ವಿಚಾರಣೆ ನಡೆಯುತ್ತಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ