AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಭಗ್ನ ಪ್ರೇಮಿಯಿಂದ ಚರ್ಚ್​ನಲ್ಲಿ ದಾಂಧಲೆ: ಅನೇಕ‌ ವಸ್ತುಗಳು ಧ್ವಂಸ

ಪ್ರೇಮ ವೈಫಲ್ಯದಿಂದ ಮಾನಸಿಕವಾಗಿ ನೊಂದಿದ್ದ ಯುವಕನೊಬ್ಬ, ಇಂದು(ಜೂ.21) ನಸುಕಿನ ಜಾವ 4 ಗಂಟೆಯ ಸುಮಾರಿಗೆ ಕಮ್ಮನಹಳ್ಳಿಯ ಚರ್ಚ್​ನ ಪಾಟ್​ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಒಡೆದು ದಾಂಧಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

Bengaluru News: ಭಗ್ನ ಪ್ರೇಮಿಯಿಂದ ಚರ್ಚ್​ನಲ್ಲಿ ದಾಂಧಲೆ: ಅನೇಕ‌ ವಸ್ತುಗಳು ಧ್ವಂಸ
ಕೃತ್ಯ ಎಸಗಿದ ವ್ಯಕ್ತಿ
ಕಿರಣ್ ಹನುಮಂತ್​ ಮಾದಾರ್
|

Updated on: Jun 21, 2023 | 1:45 PM

Share

ಬೆಂಗಳೂರು: ಪ್ರೀತಿ ಎಂತಹವರನ್ನು ಬದುಕಿಸುವ ಜೊತೆಗೆ ಹೆಚ್ಚು ಕಮ್ಮಿಯಾದರೇ ಜೀವವನ್ನೇ ತೆಗೆಯುತ್ತದೆ. ಹೌದು ನಾವು ತುಂಬಾ ಪ್ರೀತಿಸುತ್ತಿರುವವರು ಸಡನ್​ ನಮ್ಮನ್ನ ಬಿಟ್ಟು ಹೋದರೇ ಆಗುವಂತಹ ನೋವು ಹೇಳತೀರದು. ಅದರಂತೆ ಇಲ್ಲೊಬ್ಬ ಯುವಕ ಪ್ರೇಮ ವೈಫಲ್ಯ(Love Failure)ದಿಂದ ಮಾನಸಿಕವಾಗಿ ನೊಂದು, ಇಂದು(ಜೂ.21) ನಸುಕಿನ ಜಾವ 4 ಗಂಟೆಯ ಸುಮಾರಿಗೆ ಕಮ್ಮನಹಳ್ಳಿ(Kammanahalli)ಯ ಚರ್ಚ್​ನ ಪಾಟ್​ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಒಡೆದು ದಾಂಧಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮ್ಯಾಥ್ಯೂ ಎಂಬಾತನೇ ಕೃತ್ಯ ಎಸಗಿದ ಯುವಕ. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿ ಯುವಕನನ್ನ ಬಾಣಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ವೇಳೆ ಪೊಲೀಸರಿಗೆ ತಲೆನೋವಾದ ಯುವಕ

ಮಾನಸಿಕವಾಗಿ ವರ್ತಿಸುತ್ತಿದ್ದ ಇತನನ್ನ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಹುಚ್ಚನಂತೆ ಹೇಳಿಕೆ ನೀಡಿದ್ದಾನೆ. ಹೌದು ಯಾರು ನೀನು ಎಂದು ಕೇಳಿದಾಗ, ನಾನು ದೇವರು. ನನ್ನ ತಂದೆ ಕೂಡ ದೇವರು ಎಂದಿದ್ದಾನೆ. ಏನು ಕೆಲಸ ಮಾಡುತ್ತಿಯಾ ಎಂದರೇ ‘ದೇವರು ಏನು ಕೆಲಸ ಮಾಡುತ್ತಾನೆ ಎಂದು ತಿರುಗಿ ಪೊಲೀಸರಿಗೆ ಪ್ರಶ್ನಿಸಿದ್ದಾನೆ. ಇನ್ನು ಈ ಕುರಿತು ತಲೆ ಕೆಡಿಸಿಕೊಂಡು ಘಟನಾ ಸ್ಥಳದಲ್ಲಿ ಪರಿಶೀಲನೆ ಮಾಡುತ್ತಿದ್ದ ವೇಳೆ ಯುವಕನ ತಾಯಿ ಬಂದಿದ್ದು, ಬಳಿಕ ಯುವಕನ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

ಇದನ್ನೂ ಓದಿ:Goondagiri: ಬೆಂಗಳೂರಿನ ಅವೆನ್ಯೂ ರಸ್ತೆ ಬಳಿ ಹೋಟೆಲ್​ನಲ್ಲಿ 30 ದುಷ್ಕರ್ಮಿಗಳಿಂದ ದಾಂಧಲೆ

ಕೆಲಸಕ್ಕೆ ಹೋಗದ ಮ್ಯಾಥ್ಯೂಗೆ ಪ್ರೇಮ ವೈಫಲ್ಯ

ಕೇರಳ ಮೂಲದ ಇತ 30 ವರ್ಷವಾದರೂ ಕೆಲಸಕ್ಕೆ ಹೊಗುತ್ತಿರಲಿಲ್ಲ. ವಿದೇಶಗಳಲ್ಲಿಯು ಸಹ ಸಾಕಷ್ಟು ಓಡಾಟ ಮಾಡಿರುವ ಮ್ಯಾಥ್ಯೂವ್​ಗೆ ಈ ಹಿಂದೆ ಪ್ರೇಮ ವೈಫಲ್ಯವಾಗಿದೆಯಂತೆ. ಆದರಿಂದಲೇ ಮಾನಸಿಕವಾಗಿ ನೊಂದಿದ್ದ ಆತ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಹೌದು ತಾಯಿಯನ್ನ ವಿಚಾರಣೆ ವೇಳೆ ‘ಮನೆಯಲ್ಲಿ ದೇವರನ್ನು ಇಟ್ಟುಕೊಂಡು ಚರ್ಚ್ಗೆ ಯಾಕೆ ಹೋಗ್ತೀಯಾ ಎಂದು ತನ್ನ ತಾಯಿಗೆ ಅವಾಜ್ ಹಾಕುತ್ತಿದ್ದಾನೆ. ಇನ್ನು ಈ ಕುರಿತು ಬಾಣಸವಾಡಿ ಪೊಲೀಸರಿಂದ ವಿಚಾರಣೆ ನಡೆಯುತ್ತಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?