AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ನೇಮಕಾತಿ ವಿಭಾಗದ ಅಧಿಕಾರಿಗಳ ವಿಚಾರಣೆ ತೀವ್ರಗೊಳಿಸಿದ ಸಿಐಡಿ

ಬಂಧಿತ ಆರೋಪಿಗಳಿಗೂ ಅಭ್ಯರ್ಥಿಗಳಿಗೂ ಸಂಬಂಧ ಇರುವ ಬಗ್ಗೆ ಸಿಐಡಿ ಮಾಹಿತಿ ಸಂಗ್ರಹಿಸುತ್ತಿದೆ

PSI Recruitment Scam: ನೇಮಕಾತಿ ವಿಭಾಗದ ಅಧಿಕಾರಿಗಳ ವಿಚಾರಣೆ ತೀವ್ರಗೊಳಿಸಿದ ಸಿಐಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 11, 2022 | 7:22 AM

Share

ಬೆಂಗಳೂರು: ನೇಮಕಾತಿ ವಿಭಾಗದ ನಾಲ್ವರು ಹಿರಿಯ ಅಧಿಕಾರಿಗಳ ವಿಚಾರಣೆಯನ್ನು ಸಿಐಡಿ ತೀವ್ರಗೊಳಿಸಿದೆ. ಈ ಕುರಿತು ಮಹತ್ವದ ಮಾಹಿತಿ ಕಲೆಹಾಕಿರುವ ಸಿಐಡಿ, ಬಂಧಿತ ಆರೋಪಿಗಳಿಗೂ ಅಭ್ಯರ್ಥಿಗಳಿಗೂ ಸಂಬಂಧ ಇರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ. ಪಿಎಸ್​ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ಈ ಸಂಬಂಧವೇ ಮಹತ್ವದ ಪಾತ್ರ ನಿರ್ವಹಿಸಿದೆ ಎಂದು ಶಂಕಿಸಲಾಗಿದೆ. ಯಾವೆಲ್ಲಾ ಅಧಿಕಾರಿಗಳ ಅಣತಿಯಂತೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರು? ನೇಮಕಾತಿ ವಿಭಾಗದ ಅಧಿಕಾರಿಗಳ ಪಾತ್ರವೇನು? ಯಾವೆಲ್ಲಾ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಸಿಐಡಿ ಯತ್ನಿಸುತ್ತಿದೆ. ಬಂಧಿತ ಆರೋಪಿಗಳ ಮೊಬೈಲ್ ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಲಾಗಿದೆ.

ಪಿಎಸ್​ಐ ನೇಮಕಾತಿ ಹಗರಣದ ಬಗ್ಗೆ ಮತ್ತಷ್ಟು ಮಾಹಿತಿಗೆ ಲಿಂಕ್ ಕ್ಲಿಕ್ ಮಾಡಿ

ಅವ್ಯವಹಾರದ ಮೂಲ ನೇಮಕಾತಿ ವಿಭಾಗವೇ ಆಗಿರಬಹುದು ಎಂದು ಸಿಐಡಿ ಶಂಕಿಸಿದೆ. ಈಗಾಗಲೇ ಬಂಧನದಲ್ಲಿರುವ ನಾಲ್ವರು ನೇಮಕಾತಿ ಸಿಬ್ಬಂದಿ ಮೇಲೆ ಸಿಐಡಿ ಸಂಶಯ ವ್ಯಕ್ತಪಡಿಸಿದೆ. ನೇಮಕಾತಿ ವಿಭಾಗದ ಒಬ್ಬೊಬ್ಬರನ್ನೇ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ನೇಮಕಾತಿ ವಿಭಾಗದ ಕರ್ಮಕಾಂಡ ಕುರಿತು ಟಿವಿ9 ಎಳೆಎಳೆಯಾಗಿ ವಿವರಗಳನ್ನು ಬಹಿರಂಗಪಡಿಸಿತ್ತು. ಕಿಂಗ್ ಪಿನ್​ಗಳ ಜೊತೆಗೆ ಸಂಪರ್ಕ ಹೊಂದಿದ್ದ ನೇಮಕಾತಿ ವಿಭಾಗದ ಅಧಿಕಾರಿಗಳಿಂದಲೇ ಅವ್ಯವಹಾರ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಪ್ರತಿ ನೇಮಕಾತಿಗೂ ತಲಾ ₹ 35ರಿಂದ 40 ಲಕ್ಷ ರೂಪಾಯಿವರೆಗೆ ಹಣ ಪಡೆದಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಇನ್ನೂ ಕೆಲವರನ್ನು ಸಿಐಡಿ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ನೇಮಕಾತಿ ವಿಭಾಗದ ಸಿಬ್ಬಂದಿ ಶ್ರೀಧರ್, ಹರ್ಷಾ, ಶ್ರೀನಿವಾಸ್, ಲೋಕೇಶ್ ಈಗಾಗಲೇ ಸಿಐಡಿ ಬಂಧನದಲ್ಲಿದ್ದಾರೆ. ಮಧ್ಯವರ್ತಿಗಳಾದ ಮಂಜುನಾಥ್ ಮತ್ತು ಶರತ್ ಅವರನ್ನು ಬಂಧಿಸಿರುವ ಸಿಐಡಿ ವಿಚಾರಣೆ ತೀವ್ರಗೊಳಿಸಿದೆ.

ಈ ಪೈಕಿ ಹರ್ಷಾ ಎಫ್​ಡಿಎ ಅಧಿಕಾರಿ, ಶ್ರೀಧರ್ ನೇಮಕಾತಿ ವಿಭಾಗದ ಇನ್​ಸ್ಪೆಕ್ಟರ್ ಆಗಿದ್ದಾರೆ. ಮಂಜುನಾಥ್ ಮತ್ತು ಶರತ್ ಅಭ್ಯರ್ಥಿಗಳೊಂದಿಗೆ ವ್ಯವಹಾರ ಕುದುರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಸಿಐಡಿ ವಿಚಾರಣೆ ವೇಳೆ ಆರೋಪಿಗಳು ಹಲವು ಮಹತ್ವದ ಮಾಹಿತಿಯನ್ನು ಬಾಯಿಬಿಟ್ಟಿದ್ದಾರೆ. ಕೆಲ ಹಿರಿಯ ಅಧಿಕಾರಿಗಳೂ ಈ ಹಗರಣದಲ್ಲಿ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ. ಡಿವೈಎಸ್​ಪಿ ಶಾಂತಕುಮಾರ್ ಕಳೆದ 10 ವರ್ಷಗಳಿಂದ ನೇಮಕಾತಿ ವಿಭಾಗದಲ್ಲೇ ಬೀಡುಬಿಟ್ಟಿದ್ದರು. ಡಿವೈಎಸ್​ಪಿ ಶಾಂತಕುಮಾರ್ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ: Divya Hagaragi: ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ ಇತರೆ ಆರೋಪಿಗಳು!

ಇದನ್ನೂ ಓದಿ: PSI Recruitment Scam: ಮೊದಲ ಪತ್ರಿಕೆಯಲ್ಲೂ ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಬಳಕೆ; ಸಿಐಡಿ ವಿಚಾರಣೆಯಲ್ಲಿ ಮಾಹಿತಿ ಲಭ್ಯ

Published On - 7:22 am, Wed, 11 May 22

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ