Bengaluru: ಬಿಜೆಪಿ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: ಗೋವಿಂದರಾಜನಗರ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣ ದಾಖಲು

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬ್ಯಾನರ್ ಕಟ್ಟೋ ವಿಚಾರಕ್ಕೆ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್​ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್​ಐಆರ್ ದಾಖಲಾಗಿದೆ.

Bengaluru: ಬಿಜೆಪಿ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: ಗೋವಿಂದರಾಜನಗರ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣ ದಾಖಲು
ಗೋವಿಂದರಾಜನಗರ ಪೊಲೀಸ್​ ಠಾಣೆ (ಎಡಚಿತ್ರ) ಕೈ-ಕಮಲ ಗಲಾಟೆ (ಬಲಚಿತ್ರ)
Follow us
|

Updated on:Mar 18, 2023 | 9:27 AM

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬ್ಯಾನರ್ (Baner) ಕಟ್ಟೋ ವಿಚಾರಕ್ಕೆ ಕಾಂಗ್ರೆಸ್​ (Congress) ಮತ್ತು ಬಿಜೆಪಿ (BJP) ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್​ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ನಿನ್ನೆ (ಮಾ.17) ಸಂಜೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಘಟನೆಯಲ್ಲಿ ಇಬ್ಬರು ಪೊಲೀಸ್​​ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಗೊಂಡ ಹೆಡ್ ​​ಕಾನ್ಸ್ ಟೇಬಲ್​ ಹೆಚ್ ಸಿ ವರದರಾಜು ದೂರು ನೀಡಿದ್ದಾರೆ. ವರದರಾಜು ದೂರಿನ ಹಿನ್ನಲೆ 36 ಮಂದಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ದ ಎಫ್​ಐಆರ್ ದಾಖಲಾಗಿದೆ. ಹಾಗೆ ಕಾಂಗ್ರೆಸ್ ಕಾರ್ಯಕರ್ತೆ ಪ್ರೇಮಲತಾ ಹಾಗೂ ಬಿಜೆಪಿಯ ರಮ್ಯ ಎಂಬುವವರು ಕೂಡ ದೂರು ನೀಡಿದ್ದಾರೆ.

ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ನಿನ್ನೆ (ಮಾ.17) ರಂದು ಬ್ಯಾನರ್​ ಕಟ್ಟುವ ವಿಚಾರಕ್ಕೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿಜಯನಗರದ ಎಂ.ಸಿ.ಲೇಔಟ್‌ನ ಬಿಜಿಎಸ್ ಆಟದ ಮೈದಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿತ್ತು. ಕಾಂಗ್ರೆಸ್‌ನ ಮಾಜಿ ಶಾಸಕ ಪ್ರಿಯಾಕೃಷ್ಣ ಬೆಂಬಲಿಗರಿಂದ ಸಚಿವ ಸೋಮಣ್ಣ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪ ಮಾಡಲಾಗಿತ್ತು.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯ ವೈದ್ಯರ ಮಾಹಿತಿ ಪಡೆದು ಕಿರುಕುಳ ನೀಡುತ್ತಿದ್ದ ಆರ್​ಟಿಐ ಕಾರ್ಯಕರ್ತನ ಬಂಧನ

ಮಾರಾಮಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ವಿಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರ್ಚ್ 19ರಂದು ಕಾಂಗ್ರೆಸ್ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಕಾಂಗ್ರೆಸ್​, ಪಕ್ಷದ ಕಾರ್ಯಕ್ರಮವನ್ನು ಹೊರತುಪಡಿಸಿ, ಬೇರೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 am, Sat, 18 March 23

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್