AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡೇಟ್​ ಆಫ್ ಬರ್ತ್​ ವಿಚಾರಕ್ಕೆ ಸಿನಿಯರ್​, ಜೂನಿಯರ್ಸ್​ ನಡುವೆ ಗಲಾಟೆ; ದೂರು ದಾಖಲು ​

ಕ್ಷುಲ್ಲಕ ಕಾರಣಕ್ಕೆ ಸೀನಿಯರ್​ ಜೂನಿಯರ್​ಗಳ​ ನಡುವೆ ಗಲಾಟೆ ನಡೆದಿರುವ ಘಟನೆ ಬೆಂಗಳೂರಿನ ಜೆಪಿ ನಗರ ಠಾಣಾ ವ್ಯಾಪ್ತಿಯ ಪ್ರೆಸಿಡೆನ್ಸಿ ಕಾಂಪೋಸಿಟ್ ಪಿಯು ಕಾಲೇಜು ಬಳಿ ನಡೆದಿದೆ.

ಬೆಂಗಳೂರು: ಡೇಟ್​ ಆಫ್ ಬರ್ತ್​ ವಿಚಾರಕ್ಕೆ ಸಿನಿಯರ್​, ಜೂನಿಯರ್ಸ್​ ನಡುವೆ ಗಲಾಟೆ; ದೂರು ದಾಖಲು ​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 04, 2023 | 12:55 PM

Share

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಸೀನಿಯರ್ (Senior)​ ಜೂನಿಯರ್​ಗಳ (Junior)​ ನಡುವೆ ಗಲಾಟೆ ನಡೆದಿರುವ ಘಟನೆ ಬೆಂಗಳೂರಿನ ಜೆಪಿ ನಗರ ಠಾಣಾ ವ್ಯಾಪ್ತಿಯ ಪ್ರೆಸಿಡೆನ್ಸಿ ಕಾಂಪೋಸಿಟ್ ಪಿಯು ಕಾಲೇಜು ಬಳಿ ನಡೆದಿದೆ. ಮಹಮ್ಮದ್ ಅಜೀಮ್ ಪಾಷ ಹಲ್ಲೆಗೊಳಗಾದ ವ್ಯಕ್ತಿ. ಮಹಮ್ಮದ್ ಅಜೀಮ್ ಪಾಷ ಪ್ರೆಸಿಡೆನ್ಸಿ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ (2nd Puc) ಓದುತ್ತಿದ್ದಾರೆ. ಇವರಿಗೆ ಪರಿಚಯವಿದ್ದ ಮಹಮ್ಮದ್ ಉಬೇದ್ ಉಲಾ ಎಂಬುವರು ಅದೇ ಕಾಲೇಜಿಗೆ ಪ್ರಥಮ ಪಿಯುಸಿಗೆ ದಾಖಲಾಗಿದ್ದಾರೆ.

ಈ ಹಿನ್ನೆಲೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸನಿಯರ್ಸ್​​​ ಜು.22 ರಂದು ವೆಲ್ ಕಮ್ ಡೇ ಏರ್ಪಡಿಸಿದ್ದರು. ಈ ದಿನ ಮಹಮ್ಮದ್ ಅಜೀಮ್ ಪಾಷ ಅವರಿಗೆ ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ಓರ್ವ ವಿದ್ಯಾರ್ಥಿನಿ ಪರಿಚಯವಾಗಿದ್ದಾಳೆ.

ಇದನ್ನೂ ಓದಿ: ಬೆಂಗಳೂರು: ಕಸದಿಂದ ರಸ; ತ್ಯಾಜ್ಯದಿಂದ ವಿದ್ಯುತ್​ ಉತ್ಪಾದನೆ ಸ್ಥಾವರ ಅಕ್ಟೋಬರ್​ಗೆ ಕಾರ್ಯಾರಂಭ

ನಂತರ ಜು.24 ಆಕೆ ಮಹಮ್ಮದ್ ಅಜೀಮ್ ಪಾಷ ಅವರನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಿ, ನಿನಗೆ ಪರಿಚಯವಿರುವ ಮಹಮ್ಮದ್‌ ಉಬೇದ್ ಉಲಾ ಅವರ ಜನ್ಮ ದಿನಾಂಕವನ್ನು ಹೇಳು ಎಂದಿದ್ದಾಳೆ. ಆಗ ಮಹಮ್ಮದ್ ಅಜೀಮ್ ಪಾಷ ನನಗೆ ಗೊತ್ತಿಲ್ಲ ಎಂದು ಹೇಳಿ ಮನೆಗೆ ಹೋಗಿದ್ದಾರೆ. ಮರುದಿನ ಜು.25 ರಂದು ಮಧ್ಯಾಹ್ನ ವಿಶ್ರಾಂತಿ ಸಮಯದಲ್ಲಿ ವಿದ್ಯಾರ್ಥಿನಿ ನೀನು ಮಹಮ್ಮದ್ ಉಬೇದ್ ಉಲಾ ಜನ್ಮ ದಿನಾಂಕವನ್ನು ನೀಡಲಿಲ್ಲ ಅಲವೇ. ನಾನು ಯಾರೆಂದು ನಿನಗೆ ತೋರಿಸುತ್ತೇನೆಂದು ಮಹಮ್ಮದ್ ಅಜೀಮ್ ಪಾಷಗೆ ಎಚ್ಚರಿಕೆ ನೀಡಿದ್ದಾಳೆ.

ಬಳಿಕ ಝನ್ ಮತ್ತು ಶೇಕ್ ಎಂಬಾತನನ್ನು ಕರೆಸಿ ಮಹಮ್ಮದ್ ಅಜೀಮ್ ಪಾಷರನ್ನು ಕಾಲೇಜಿನಿಂದ ಬಲವಂತವಾಗಿ ಕಾಕ್ ಮ್ಯಾಜಿಕ್ ಬಳಿಗೆ ಕರೆದುಕೊಂಡು ಹೋಗಿ ಮೂರ್ನಾಲ್ಕು ಜನ ಸೇರಿ ಮಾರಕಾಸ್ತ್ರಗಳಿಂದ ಹೊಡೆದಿದ್ದಾರೆ. ಬಳಿಕ ಬಲವಂತವಾಗಿ ಜಯನಗರ 4ನೇ ಟಿ ಬಾಕಲಿರುವ ಬಿ.ಇ.ಎಸ್. ಕಾಲೇಜಿನ ಬಳಿಗೆ ಕರೆದುಕೊಂಡು ಹೋಗಿ ಮತ್ತಷ್ಟು ಥಳಿಸಿ ನಿನಗೆ ನಾವು ಹೊಡೆದಿರುವ ವಿಚಾರವನ್ನು ಯಾರಿಗೂ ಹೇಳಬೇಡ ಎಂದು ಬೆದರಿಕೆ ಹಾಕಿದ್ದಾರೆ ಎಂದು ಮಹಮ್ಮದ್ ಅಜೀಮ್ ಪಾಷ ದೂರಿನಲ್ಲಿ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ