AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್​ನಲ್ಲಿ ಕಂಡೆಕ್ಟರ್, ಪುರುಷ ಪ್ರಯಾಣಿಕರಿಂದ ವಿದ್ಯಾರ್ಥಿನಿಗೆ ಕಿರುಕುಳ

ಆಧಾರ್ ಕಾರ್ಡ್​ನಲ್ಲಿ ಕರ್ನಾಟಕದ ವಿಳಾವಿದ್ದರೂ ಹಿಂದಿಯಲ್ಲಿ ಇದೆ ಎಂಬ ಕಾರಣಕ್ಕೆ 9 ನೇ ತರಗತಿ ವಿದ್ಯಾರ್ಥಿನಿಗೆ ಬಿಎಂಟಿಸಿ ಬಸ್ ಕಂಡೆಕ್ಟರ್ ಮತ್ತು ಇಬ್ಬರು ಪುರುಷ ಪ್ರಯಾಣಿಕರು ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಲ್ಲದೆ, ಬಾಲಕಿಯನ್ನ ಕತ್ತು ಹಿಡಿದು, ಹೊರ ದಬ್ಬಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಎಂಟಿಸಿ ಬಸ್​ನಲ್ಲಿ ಕಂಡೆಕ್ಟರ್, ಪುರುಷ ಪ್ರಯಾಣಿಕರಿಂದ ವಿದ್ಯಾರ್ಥಿನಿಗೆ ಕಿರುಕುಳ
ಕಂಡೆಕ್ಟರ್ ಮತ್ತು ಇಬ್ಬರು ಪುರುಷ ಪ್ರಯಾಣಿಕರು ಬಿಎಂಟಿಸಿ ಬಸ್​ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪ
ಕಿರಣ್​ ಸೂರ್ಯ
| Edited By: Rakesh Nayak Manchi|

Updated on: Aug 13, 2023 | 6:17 PM

Share

ಬೆಂಗಳೂರು, ಆಗಸ್ಟ್ 13: ಹಾಡಹಗಲೇ ಬಿಎಂಟಿಸಿ (BMTC) ಬಸ್​ನಲ್ಲಿ ಕಂಡೆಕ್ಟರ್ ಹಾಗೂ ಇಬ್ಬರು ಪುರುಷ ಪ್ರಯಾಣಿಕರು 9 ನೇ ತರಗತಿಯ ವಿದ್ಯಾರ್ಥಿನಿಗೆ ಕಿರುಕುಳ (Harassment) ನೀಡಿದ ಆರೋಪ ಕೇಳಿಬಂದಿದೆ. ಆಧಾರ್ ಕಾರ್ಡ್​​ನಲ್ಲಿ ಕರ್ನಾಟಕದ ವಿಳಾಸ ಇದ್ದರೂ ಹಿಂದಿ ಅಕ್ಷರದಲ್ಲಿ ಬರೆಯಲಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿಗೆ ಮನಬಂದಂತೆ ನಿಂದಿಸಿದ್ದಲ್ಲದೆ, ಕತ್ತು ಹಿಡಿದು ಬಸ್​ನಿಂದ ಹೊರಹಾಕಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ವಿಳಾಸ ಕರ್ನಾಟಕದಲ್ಲಿದ್ದರೂ ಹಿಂದಿಯಲ್ಲಿ ಬರೆಯಲಾಗಿದೆ ಎಂಬ ಕಾರಣಕ್ಕೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದ ಕಂಡೆಕ್ಟರ್ ನಿಂದಿಸಿದ್ದಾರೆ. ಕಂಡೆಕ್ಟರ್ ಜೊತೆ ಸೇರಿದ ಇಬ್ಬರು ಪ್ರಯಾಣಿಕರೂ ವಿದ್ಯಾರ್ಥಿನಿಗೆ ನಿಂದಿಸಿದ್ದಾರೆ. ಈ ನಡುವೆ ವಿದ್ಯಾರ್ಥಿನಿ ಹಣ ನೀಡಿ ಟಿಕೆಟ್ ಪಡೆದಿದ್ದಾಳೆ.

ಇದನ್ನೂ ಓದಿ: ಟಿಕೆಟ್​ ರಹಿತ ಪ್ರಯಾಣ ಸೇರಿದಂತೆ ಪ್ರಮಾಣಿಕರಿಂದ ರೂ. 6 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಬಿಎಂಟಿಸಿ

ಆದರೆ ಆಕೆ ಇಳಿಯಬೇಕಿದ್ದ ನಿಲ್ದಾಣದಲ್ಲಿ ಇಳಿಸದೇ ಟಿಕೆಟ್ ವಾಪಸ್ ಪಡೆದು ಬೇರೊಂದು ಸ್ಥಳದಲ್ಲಿ ಇಳಿಸಿ ಹೋಗಿದ್ದಾರೆ. ಅಲ್ಲದೆ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿದ್ಯಾರ್ಥಿನಿ ತಾಯಿ ಮಂಜುಳಾ‌‌ ಅವರು ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಿದ್ಯಾರ್ಥಿನಿಯ ಆರೋಪವೇನು?

ಅಗಸ್ಟ್ 11ರಂದು ಬಿಎಂಟಿಸಿ ಬಸ್‌ನಲ್ಲಿ ದೊಮ್ಮಲೂರಿನಿಂದ ಹೋಗುತ್ತಿದ್ದಾಗ ಆಧಾರ್ ಕಾರ್ಡ್​​ನಲ್ಲಿ ಕನ್ನಡ ಇಲ್ಲ ಅಂತ ಕಂಡಕ್ಟರ್ ನಿಂದಿಸಿದ್ದಾರೆ. ಅಲ್ಲದೆ, ಹಿಂದಿಯಲ್ಲಿರುವುದರಿಂದ ಉಚಿತ ಟಿಕೆಟ್ ನೀಡಲ್ಲ ಬೈದಿದ್ದಾರೆ. ಹೀಗಾಗಿ ಹಣ ಕೊಟ್ಟು ಟಿಕೆಟ್ ಪಡೆದುಕೊಂಡಿದ್ದಾಳೆ. ಆದರೂ‌ ಕಂಡಕ್ಟರ್ ವಿದ್ಯಾರ್ಥಿನಿಯ ಆಧಾರ್ ‌ಕಾರ್ಡ್ ಕಿತ್ತುಕೊಂಡು ಎಲ್ಲಾ ಪ್ರಯಾಣಿಕರಿಗೆ ಆಧಾರ್‌ನಲ್ಲಿ ಕನ್ನಡಯಿಲ್ಲ ಅಂತ ತೋರಿಸಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿನಿಗೆ ಇತರೆ ಇಬ್ಬರು ಪ್ರಯಾಣಿಕರು ನಿಂದಿಸಿದ್ದಾರೆ. ಅಲ್ಲದೆ‌ ವಿದ್ಯಾರ್ಥಿನಿಯ ಟಿಕೆಟ್ ಕಿತ್ತುಕೊಂಡು ಅರ್ಧದಲ್ಲೇ ಬಸ್‌ನಿಂದ ಇಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ