AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್​ನಲ್ಲಿ ಕಂಡೆಕ್ಟರ್, ಪುರುಷ ಪ್ರಯಾಣಿಕರಿಂದ ವಿದ್ಯಾರ್ಥಿನಿಗೆ ಕಿರುಕುಳ

ಆಧಾರ್ ಕಾರ್ಡ್​ನಲ್ಲಿ ಕರ್ನಾಟಕದ ವಿಳಾವಿದ್ದರೂ ಹಿಂದಿಯಲ್ಲಿ ಇದೆ ಎಂಬ ಕಾರಣಕ್ಕೆ 9 ನೇ ತರಗತಿ ವಿದ್ಯಾರ್ಥಿನಿಗೆ ಬಿಎಂಟಿಸಿ ಬಸ್ ಕಂಡೆಕ್ಟರ್ ಮತ್ತು ಇಬ್ಬರು ಪುರುಷ ಪ್ರಯಾಣಿಕರು ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಲ್ಲದೆ, ಬಾಲಕಿಯನ್ನ ಕತ್ತು ಹಿಡಿದು, ಹೊರ ದಬ್ಬಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಎಂಟಿಸಿ ಬಸ್​ನಲ್ಲಿ ಕಂಡೆಕ್ಟರ್, ಪುರುಷ ಪ್ರಯಾಣಿಕರಿಂದ ವಿದ್ಯಾರ್ಥಿನಿಗೆ ಕಿರುಕುಳ
ಕಂಡೆಕ್ಟರ್ ಮತ್ತು ಇಬ್ಬರು ಪುರುಷ ಪ್ರಯಾಣಿಕರು ಬಿಎಂಟಿಸಿ ಬಸ್​ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪ
Kiran Surya
| Edited By: |

Updated on: Aug 13, 2023 | 6:17 PM

Share

ಬೆಂಗಳೂರು, ಆಗಸ್ಟ್ 13: ಹಾಡಹಗಲೇ ಬಿಎಂಟಿಸಿ (BMTC) ಬಸ್​ನಲ್ಲಿ ಕಂಡೆಕ್ಟರ್ ಹಾಗೂ ಇಬ್ಬರು ಪುರುಷ ಪ್ರಯಾಣಿಕರು 9 ನೇ ತರಗತಿಯ ವಿದ್ಯಾರ್ಥಿನಿಗೆ ಕಿರುಕುಳ (Harassment) ನೀಡಿದ ಆರೋಪ ಕೇಳಿಬಂದಿದೆ. ಆಧಾರ್ ಕಾರ್ಡ್​​ನಲ್ಲಿ ಕರ್ನಾಟಕದ ವಿಳಾಸ ಇದ್ದರೂ ಹಿಂದಿ ಅಕ್ಷರದಲ್ಲಿ ಬರೆಯಲಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿಗೆ ಮನಬಂದಂತೆ ನಿಂದಿಸಿದ್ದಲ್ಲದೆ, ಕತ್ತು ಹಿಡಿದು ಬಸ್​ನಿಂದ ಹೊರಹಾಕಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ವಿಳಾಸ ಕರ್ನಾಟಕದಲ್ಲಿದ್ದರೂ ಹಿಂದಿಯಲ್ಲಿ ಬರೆಯಲಾಗಿದೆ ಎಂಬ ಕಾರಣಕ್ಕೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದ ಕಂಡೆಕ್ಟರ್ ನಿಂದಿಸಿದ್ದಾರೆ. ಕಂಡೆಕ್ಟರ್ ಜೊತೆ ಸೇರಿದ ಇಬ್ಬರು ಪ್ರಯಾಣಿಕರೂ ವಿದ್ಯಾರ್ಥಿನಿಗೆ ನಿಂದಿಸಿದ್ದಾರೆ. ಈ ನಡುವೆ ವಿದ್ಯಾರ್ಥಿನಿ ಹಣ ನೀಡಿ ಟಿಕೆಟ್ ಪಡೆದಿದ್ದಾಳೆ.

ಇದನ್ನೂ ಓದಿ: ಟಿಕೆಟ್​ ರಹಿತ ಪ್ರಯಾಣ ಸೇರಿದಂತೆ ಪ್ರಮಾಣಿಕರಿಂದ ರೂ. 6 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಬಿಎಂಟಿಸಿ

ಆದರೆ ಆಕೆ ಇಳಿಯಬೇಕಿದ್ದ ನಿಲ್ದಾಣದಲ್ಲಿ ಇಳಿಸದೇ ಟಿಕೆಟ್ ವಾಪಸ್ ಪಡೆದು ಬೇರೊಂದು ಸ್ಥಳದಲ್ಲಿ ಇಳಿಸಿ ಹೋಗಿದ್ದಾರೆ. ಅಲ್ಲದೆ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿದ್ಯಾರ್ಥಿನಿ ತಾಯಿ ಮಂಜುಳಾ‌‌ ಅವರು ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಿದ್ಯಾರ್ಥಿನಿಯ ಆರೋಪವೇನು?

ಅಗಸ್ಟ್ 11ರಂದು ಬಿಎಂಟಿಸಿ ಬಸ್‌ನಲ್ಲಿ ದೊಮ್ಮಲೂರಿನಿಂದ ಹೋಗುತ್ತಿದ್ದಾಗ ಆಧಾರ್ ಕಾರ್ಡ್​​ನಲ್ಲಿ ಕನ್ನಡ ಇಲ್ಲ ಅಂತ ಕಂಡಕ್ಟರ್ ನಿಂದಿಸಿದ್ದಾರೆ. ಅಲ್ಲದೆ, ಹಿಂದಿಯಲ್ಲಿರುವುದರಿಂದ ಉಚಿತ ಟಿಕೆಟ್ ನೀಡಲ್ಲ ಬೈದಿದ್ದಾರೆ. ಹೀಗಾಗಿ ಹಣ ಕೊಟ್ಟು ಟಿಕೆಟ್ ಪಡೆದುಕೊಂಡಿದ್ದಾಳೆ. ಆದರೂ‌ ಕಂಡಕ್ಟರ್ ವಿದ್ಯಾರ್ಥಿನಿಯ ಆಧಾರ್ ‌ಕಾರ್ಡ್ ಕಿತ್ತುಕೊಂಡು ಎಲ್ಲಾ ಪ್ರಯಾಣಿಕರಿಗೆ ಆಧಾರ್‌ನಲ್ಲಿ ಕನ್ನಡಯಿಲ್ಲ ಅಂತ ತೋರಿಸಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿನಿಗೆ ಇತರೆ ಇಬ್ಬರು ಪ್ರಯಾಣಿಕರು ನಿಂದಿಸಿದ್ದಾರೆ. ಅಲ್ಲದೆ‌ ವಿದ್ಯಾರ್ಥಿನಿಯ ಟಿಕೆಟ್ ಕಿತ್ತುಕೊಂಡು ಅರ್ಧದಲ್ಲೇ ಬಸ್‌ನಿಂದ ಇಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು