AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನುಗಳು ಸಾಯುವ, ವಲಸೆ ಹಕ್ಕಿಗಳು ಮುಖ ತಿರುಗಿಸುವ ಮೊದಲು ಕೆರೆ ಸ್ವಚ್ಛಗೊಳಿಸಿ: ಹರೀಶ್ ಬಿಜ್ಜೂರ್

ಕೆರೆಯನ್ನು ರಕ್ಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿಗೆ ಮನವಿ ಮಾಡಿದ್ದಾರೆ.

ಮೀನುಗಳು ಸಾಯುವ, ವಲಸೆ ಹಕ್ಕಿಗಳು ಮುಖ ತಿರುಗಿಸುವ ಮೊದಲು ಕೆರೆ ಸ್ವಚ್ಛಗೊಳಿಸಿ: ಹರೀಶ್ ಬಿಜ್ಜೂರ್
ಹರೀಸ್ ಬಿಜೂರ್ ಹಂಚಿಕೊಂಡಿರುವ ವಿಡಿಯೊದ ಸ್ಕ್ರೀನ್​ಗ್ರಾಬ್
TV9 Web
| Edited By: |

Updated on:Jun 28, 2022 | 10:14 AM

Share

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಾಯು ಮಾಲಿನ್ಯ, ಜಲ ಮಾಲಿನ್ಯ ಪರಿಸರದ ಅಂದವನ್ನು ಹದಗೆಡಿಸುತ್ತಿದೆ. ಸುಂದವಾದ ಕೆಲೆಗಳು ಮಲಿನಗೊಳ್ಳುತ್ತಿವೆ. ಈ ನಡುವೆ ಖ್ಯಾತ ಅಂಕಣಕಾರ ಹಾಗು ಬ್ರ್ಯಾಂಡ್ ಸ್ಟ್ರಾಟೆಜಿಸ್ಟ್ ಹರೀಶ್ ಬಿಜ್ಜೂರ್ ಅವರು ಕಾಡುಗೊಂಡನಹಳ್ಳಿ ಕೆರೆ ಮಲಿನಗೊಳ್ಳುತ್ತಿರುವ ಕುರಿತು ಕೂ ಮಾಡಿದ್ದಾರೆ. ಕೆರೆಗಳ ನಗರ ಎಂದೇ ಪ್ರಸಿದ್ಧಿ ಗಳಿಸಿದ್ದ ಉದ್ಯಾನನಗರಿ ಕೆರೆಗಳು ಈಗ ಒತ್ತುವರಿ, ಸರ್ಕಾರ ಹಾಗೂ ಸಾರ್ವಜನಿಕರ ನಿರ್ಲಕ್ಷ್ಯದಿಂದಾಗಿ ಅವಸಾನದ ಹಂತ ತಲುಪುತ್ತಿವೆ. ಕೆಲವು ಕೆರೆಗಳಂತೂ ರಾಸಾಯನಿಕಗಳ ಆಗರವಾದ ಪರಿಣಾಮ ಜಲಚರಗಳಿಗೂ ವಾಸಯೋಗ್ಯವಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ತೂರು, ಬೆಳ್ಳಂದೂರಿನಂತಹ ಕೆರೆಗಳು ಆ್ಯಸಿಡ್‌ ಕೆರೆಗಳಾಗಿ ಬೆಂಕಿ ಉಗುಳುವ ಮಟ್ಟಕ್ಕೆ ರಸಾಯನ ತ್ಯಾಜ್ಯದಿಂದ ತುಂಬಿಕೊಂಡಿವೆ.

ಸುಂದರವಾದ ಕಾಡುಗೊಂಡನಹಳ್ಳಿ ಕೆರೆಗೆ ಒಳಚರಂಡಿ ನೀರು ಹರಿಯುತ್ತಿರುವ ಬಗ್ಗೆ ಹರೀಶ್ ಬಿಜ್ಜೂರ್ ವಿಡಿಯೋ ಹಂಚಿಕೊಂಡಿದ್ದು ಕೆರೆಯನ್ನು ರಕ್ಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಕೂ ಮಾಡಿರುವ ಹರೀಶ್ ಬಿಜ್ಜೂರ್, ಒಳಚರಂಡಿ ನೀರು ಕೆರೆ ಸೇರುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದು, ‘ಈ ಕೊಳಕು ಚರಂಡಿ ನೀರು ಸುಂದರವಾದ ಕಾಡುಗೊಂಡನಹಳ್ಳಿ ಕೆರೆಗೆ ಹರಿಯುತ್ತದೆ! ಮೀನು ಸಾಯುವ ಮತ್ತು ವಲಸೆ ಹಕ್ಕಿಗಳು ಬರುವುದನ್ನು ನಿಲ್ಲಿಸುವ ಮೊದಲು ಇದರ ಸ್ವಚ್ಛತೆ ಕಾಪಾಡಿ’ ಎಂದು ಬರೆದುಕೊಂಡಿದ್ದಾರೆ. ಇದಲ್ಲದೆ ನಾಗರಿಕ ಸಮಸ್ಯೆಗಳ ಕುರಿತು ಸಾಕಷ್ಟು ವಿಷಯಗಳನ್ನು ಇವರು ತಮ್ಮ ಕೂ ಖಾತೆಯಲ್ಲಿ ಹಂಚಿಕೊಂಡಿದ್ದು, ಇತ್ತೀಚಿಗೆ ಸರ್ಕಾರ ಕಬ್ಬನ್ ಉದ್ಯಾನದಲ್ಲಿ ಸಾಕು ಪ್ರಾಣಿಗಳ ನಿಷೇಧಿಸುವ ನಿರ್ಧಾರದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು.

Published On - 9:58 am, Tue, 28 June 22

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​