AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನುಗಳು ಸಾಯುವ, ವಲಸೆ ಹಕ್ಕಿಗಳು ಮುಖ ತಿರುಗಿಸುವ ಮೊದಲು ಕೆರೆ ಸ್ವಚ್ಛಗೊಳಿಸಿ: ಹರೀಶ್ ಬಿಜ್ಜೂರ್

ಕೆರೆಯನ್ನು ರಕ್ಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿಗೆ ಮನವಿ ಮಾಡಿದ್ದಾರೆ.

ಮೀನುಗಳು ಸಾಯುವ, ವಲಸೆ ಹಕ್ಕಿಗಳು ಮುಖ ತಿರುಗಿಸುವ ಮೊದಲು ಕೆರೆ ಸ್ವಚ್ಛಗೊಳಿಸಿ: ಹರೀಶ್ ಬಿಜ್ಜೂರ್
ಹರೀಸ್ ಬಿಜೂರ್ ಹಂಚಿಕೊಂಡಿರುವ ವಿಡಿಯೊದ ಸ್ಕ್ರೀನ್​ಗ್ರಾಬ್
TV9 Web
| Edited By: |

Updated on:Jun 28, 2022 | 10:14 AM

Share

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಾಯು ಮಾಲಿನ್ಯ, ಜಲ ಮಾಲಿನ್ಯ ಪರಿಸರದ ಅಂದವನ್ನು ಹದಗೆಡಿಸುತ್ತಿದೆ. ಸುಂದವಾದ ಕೆಲೆಗಳು ಮಲಿನಗೊಳ್ಳುತ್ತಿವೆ. ಈ ನಡುವೆ ಖ್ಯಾತ ಅಂಕಣಕಾರ ಹಾಗು ಬ್ರ್ಯಾಂಡ್ ಸ್ಟ್ರಾಟೆಜಿಸ್ಟ್ ಹರೀಶ್ ಬಿಜ್ಜೂರ್ ಅವರು ಕಾಡುಗೊಂಡನಹಳ್ಳಿ ಕೆರೆ ಮಲಿನಗೊಳ್ಳುತ್ತಿರುವ ಕುರಿತು ಕೂ ಮಾಡಿದ್ದಾರೆ. ಕೆರೆಗಳ ನಗರ ಎಂದೇ ಪ್ರಸಿದ್ಧಿ ಗಳಿಸಿದ್ದ ಉದ್ಯಾನನಗರಿ ಕೆರೆಗಳು ಈಗ ಒತ್ತುವರಿ, ಸರ್ಕಾರ ಹಾಗೂ ಸಾರ್ವಜನಿಕರ ನಿರ್ಲಕ್ಷ್ಯದಿಂದಾಗಿ ಅವಸಾನದ ಹಂತ ತಲುಪುತ್ತಿವೆ. ಕೆಲವು ಕೆರೆಗಳಂತೂ ರಾಸಾಯನಿಕಗಳ ಆಗರವಾದ ಪರಿಣಾಮ ಜಲಚರಗಳಿಗೂ ವಾಸಯೋಗ್ಯವಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ತೂರು, ಬೆಳ್ಳಂದೂರಿನಂತಹ ಕೆರೆಗಳು ಆ್ಯಸಿಡ್‌ ಕೆರೆಗಳಾಗಿ ಬೆಂಕಿ ಉಗುಳುವ ಮಟ್ಟಕ್ಕೆ ರಸಾಯನ ತ್ಯಾಜ್ಯದಿಂದ ತುಂಬಿಕೊಂಡಿವೆ.

ಸುಂದರವಾದ ಕಾಡುಗೊಂಡನಹಳ್ಳಿ ಕೆರೆಗೆ ಒಳಚರಂಡಿ ನೀರು ಹರಿಯುತ್ತಿರುವ ಬಗ್ಗೆ ಹರೀಶ್ ಬಿಜ್ಜೂರ್ ವಿಡಿಯೋ ಹಂಚಿಕೊಂಡಿದ್ದು ಕೆರೆಯನ್ನು ರಕ್ಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಕೂ ಮಾಡಿರುವ ಹರೀಶ್ ಬಿಜ್ಜೂರ್, ಒಳಚರಂಡಿ ನೀರು ಕೆರೆ ಸೇರುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದು, ‘ಈ ಕೊಳಕು ಚರಂಡಿ ನೀರು ಸುಂದರವಾದ ಕಾಡುಗೊಂಡನಹಳ್ಳಿ ಕೆರೆಗೆ ಹರಿಯುತ್ತದೆ! ಮೀನು ಸಾಯುವ ಮತ್ತು ವಲಸೆ ಹಕ್ಕಿಗಳು ಬರುವುದನ್ನು ನಿಲ್ಲಿಸುವ ಮೊದಲು ಇದರ ಸ್ವಚ್ಛತೆ ಕಾಪಾಡಿ’ ಎಂದು ಬರೆದುಕೊಂಡಿದ್ದಾರೆ. ಇದಲ್ಲದೆ ನಾಗರಿಕ ಸಮಸ್ಯೆಗಳ ಕುರಿತು ಸಾಕಷ್ಟು ವಿಷಯಗಳನ್ನು ಇವರು ತಮ್ಮ ಕೂ ಖಾತೆಯಲ್ಲಿ ಹಂಚಿಕೊಂಡಿದ್ದು, ಇತ್ತೀಚಿಗೆ ಸರ್ಕಾರ ಕಬ್ಬನ್ ಉದ್ಯಾನದಲ್ಲಿ ಸಾಕು ಪ್ರಾಣಿಗಳ ನಿಷೇಧಿಸುವ ನಿರ್ಧಾರದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು.

Published On - 9:58 am, Tue, 28 June 22

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ