AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಡಿಗಳ ತೆರವು; ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳಿಂದ ಬಿಬಿಎಂಪಿಗೆ ಮುತ್ತಿಗೆ

ಬಿಬಿಎಂಪಿ ತನ್ನ ವ್ಯಾಪ್ತಿಯ ಬೀದಿ ಬದಿಯ ಅಂಗಡಿಗಳನ್ನು ತೆರವು ಮಾಡುವ ಕಾರ್ಯ ಮಾಡುತ್ತಿದೆ. ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಬೀದಿಬದಿ ವ್ಯಾಪಾರಿಗಳು ಇಂದು ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಸ್ಥಳದಲ್ಲಿ ಬಂದೋ ಬಸ್ತ್ ಕೈಗೊಳ್ಳಲಾಗಿದ್ದು, ಕೆಎಸ್​ಆರ್‌ಪಿ ತುಕಡಿ ನಿಯೋಜಿಸಲಾಗಿದೆ.

ಅಂಗಡಿಗಳ ತೆರವು; ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳಿಂದ ಬಿಬಿಎಂಪಿಗೆ ಮುತ್ತಿಗೆ
ಬೀದಿ ಬದಿ ವ್ಯಾಪಾರಿಗಳಿಂದ ಬಿಬಿಎಂಪಿಗೆ ಮುತ್ತಿಗೆ (ಫೋಟೋ: ಬಿಬಿಎಂಪಿ)
Vinayak Hanamant Gurav
| Edited By: |

Updated on: Dec 19, 2023 | 12:54 PM

Share

ಬೆಂಗಳೂರು, ಡಿ.19: ನಗರದಲ್ಲಿರುವ ಬೀದಿ ಬದಿಯ ಅಂಗಡಿಗಳನ್ನು ತೆರವು ಮಾಡುವ ಕಾರ್ಯ ನಡೆಯುತ್ತಿದ್ದು, ಇದರಿಂದ ಆಕ್ರೋಶಗೊಂಡಿರುವ ಬೀದಿ ಬದಿ ವ್ಯಾಪಾರಿಗಳು ಬಿಬಿಎಂಪಿ (BBMP) ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದು, ನೂರಾರು ಸಂಖ್ಯೆಯಲ್ಲಿ ವ್ಯಾಪಾರಸ್ಥರು ಕಚೇರಿ ಮುಂದೆ ಜಮಾಯಿಸಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಅಡಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬೀದಿ ಬದಿ ಇರುವ ಅಂಗಡಿಗಳನ್ನು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪರವಾನಗಿ ನವೀಕರಣ ಹಾಗೂ ಹೊಸ ಪರವಾನಗಿಗೆ ಬೀದಿ ಬದಿ ವ್ಯಾಪಾರಿಗಳು ಸಾಮೂಹಿಕ ಅರ್ಜಿಸಲ್ಲಿದ್ದರೂ ಹೊಸ ಲೈಸೆನ್ಸ್ ಹಾಗೂ ಹಳೆ ಲೈಸೆನ್ಸ್ ರಿನೀವಲ್​ಗೆ ಪಾಲಿಕೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಸದ್ಯ, ಸ್ಥಳದಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಒಂದು ಕೆಎಸ್​ಆರ್‌ಪಿ ತುಕಡಿ ನಿಯೋಜಿಸಲಾಗಿದೆ.

ಇದನ್ನೂ ಓದಿ: ಬಿಬಿಎಂಪಿ ಕಾಮಗಾರಿ ತನಿಖೆಗೆ ರಚಿಸಿದ್ದ ಎಸ್​ಐಟಿ ಹಿಂಪಡೆದ ರಾಜ್ಯ ಸರ್ಕಾರ

ಬಿಬಿಎಂಪಿ ವ್ಯಾಪ್ತಿಯ ನಾಲ್ಕು ವಲಯಗಳಲ್ಲಿ ಇರುವ ಅನಧಿಕೃತ ಬೀದಿ ಬದಿ ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ. ಇದರ ವಿರುದ್ಧ ವ್ಯಾಪಾರಸ್ಥರು ಆಕ್ರೋಶ ಹೊರಹಾಕುತ್ತಿದ್ದು, ಹಲವು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ಇದೀಗ ದಿಢೀರ್​​ ಬಂದು ಅಂಗಡಿಗಳನ್ನ ತೆರವು ಮಾಡುತ್ತಿದ್ದಾರೆ. ಇದೇ ವ್ಯಾಪರವನ್ನ ನಂಬಿಕೊಂಡು ನಮ್ಮ ಜೀವನ ನಡೆಯುತ್ತಿದೆ. ದಿಢೀರ್​ ಅಂಗಡಿ ತೆರವು ಮಾಡಿದರೆ ಜೀವನ ನಡೆಯೋದು ಹೇಗೆ ಎಂದು ಪ್ರಶ್ನಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ