AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಡಿಗಳ ತೆರವು; ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳಿಂದ ಬಿಬಿಎಂಪಿಗೆ ಮುತ್ತಿಗೆ

ಬಿಬಿಎಂಪಿ ತನ್ನ ವ್ಯಾಪ್ತಿಯ ಬೀದಿ ಬದಿಯ ಅಂಗಡಿಗಳನ್ನು ತೆರವು ಮಾಡುವ ಕಾರ್ಯ ಮಾಡುತ್ತಿದೆ. ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಬೀದಿಬದಿ ವ್ಯಾಪಾರಿಗಳು ಇಂದು ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಸ್ಥಳದಲ್ಲಿ ಬಂದೋ ಬಸ್ತ್ ಕೈಗೊಳ್ಳಲಾಗಿದ್ದು, ಕೆಎಸ್​ಆರ್‌ಪಿ ತುಕಡಿ ನಿಯೋಜಿಸಲಾಗಿದೆ.

ಅಂಗಡಿಗಳ ತೆರವು; ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳಿಂದ ಬಿಬಿಎಂಪಿಗೆ ಮುತ್ತಿಗೆ
ಬೀದಿ ಬದಿ ವ್ಯಾಪಾರಿಗಳಿಂದ ಬಿಬಿಎಂಪಿಗೆ ಮುತ್ತಿಗೆ (ಫೋಟೋ: ಬಿಬಿಎಂಪಿ)
Vinayak Hanamant Gurav
| Edited By: |

Updated on: Dec 19, 2023 | 12:54 PM

Share

ಬೆಂಗಳೂರು, ಡಿ.19: ನಗರದಲ್ಲಿರುವ ಬೀದಿ ಬದಿಯ ಅಂಗಡಿಗಳನ್ನು ತೆರವು ಮಾಡುವ ಕಾರ್ಯ ನಡೆಯುತ್ತಿದ್ದು, ಇದರಿಂದ ಆಕ್ರೋಶಗೊಂಡಿರುವ ಬೀದಿ ಬದಿ ವ್ಯಾಪಾರಿಗಳು ಬಿಬಿಎಂಪಿ (BBMP) ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದು, ನೂರಾರು ಸಂಖ್ಯೆಯಲ್ಲಿ ವ್ಯಾಪಾರಸ್ಥರು ಕಚೇರಿ ಮುಂದೆ ಜಮಾಯಿಸಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಅಡಿಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬೀದಿ ಬದಿ ಇರುವ ಅಂಗಡಿಗಳನ್ನು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪರವಾನಗಿ ನವೀಕರಣ ಹಾಗೂ ಹೊಸ ಪರವಾನಗಿಗೆ ಬೀದಿ ಬದಿ ವ್ಯಾಪಾರಿಗಳು ಸಾಮೂಹಿಕ ಅರ್ಜಿಸಲ್ಲಿದ್ದರೂ ಹೊಸ ಲೈಸೆನ್ಸ್ ಹಾಗೂ ಹಳೆ ಲೈಸೆನ್ಸ್ ರಿನೀವಲ್​ಗೆ ಪಾಲಿಕೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಸದ್ಯ, ಸ್ಥಳದಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಒಂದು ಕೆಎಸ್​ಆರ್‌ಪಿ ತುಕಡಿ ನಿಯೋಜಿಸಲಾಗಿದೆ.

ಇದನ್ನೂ ಓದಿ: ಬಿಬಿಎಂಪಿ ಕಾಮಗಾರಿ ತನಿಖೆಗೆ ರಚಿಸಿದ್ದ ಎಸ್​ಐಟಿ ಹಿಂಪಡೆದ ರಾಜ್ಯ ಸರ್ಕಾರ

ಬಿಬಿಎಂಪಿ ವ್ಯಾಪ್ತಿಯ ನಾಲ್ಕು ವಲಯಗಳಲ್ಲಿ ಇರುವ ಅನಧಿಕೃತ ಬೀದಿ ಬದಿ ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ. ಇದರ ವಿರುದ್ಧ ವ್ಯಾಪಾರಸ್ಥರು ಆಕ್ರೋಶ ಹೊರಹಾಕುತ್ತಿದ್ದು, ಹಲವು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ಇದೀಗ ದಿಢೀರ್​​ ಬಂದು ಅಂಗಡಿಗಳನ್ನ ತೆರವು ಮಾಡುತ್ತಿದ್ದಾರೆ. ಇದೇ ವ್ಯಾಪರವನ್ನ ನಂಬಿಕೊಂಡು ನಮ್ಮ ಜೀವನ ನಡೆಯುತ್ತಿದೆ. ದಿಢೀರ್​ ಅಂಗಡಿ ತೆರವು ಮಾಡಿದರೆ ಜೀವನ ನಡೆಯೋದು ಹೇಗೆ ಎಂದು ಪ್ರಶ್ನಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!