AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟ ಸಾಲ ವಾಪಸ್ ನೀಡದಿದ್ದಕ್ಕೆ ಬಟ್ಟೆ ಬಿಚ್ಚಿ ಹಲ್ಲೆ: ಮನೆಗೆ ನುಗ್ಗಿ ಅಕ್ಕ-ತಂಗಿಯನ್ನು ಥಳಿಸಿದ್ದ ಆರೋಪಿಗಳ ಬಂಧನ

ಭಾನುವಾರ ಬೆಳಗ್ಗೆ ಏಕಾಏಕಿ ಶಾಂತಿಪ್ರಿಯ ಮನೆಗೆ ನುಗ್ಗಿದ್ದ ಸುನಿಲ್ ಕುಮಾರ್ ಹಾಗೂ ಮನೆಯವರು ಮನ ಬಂದಂತೆ ಥಳಿಸಿದ್ದಾರೆ. ಸದ್ಯ ರಾಮಕೃಷ್ಣರೆಡ್ಡಿ, ಸುನಿಲ್‌ ಕುಮಾರ್​ನನ್ನ ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.  

ಕೊಟ್ಟ ಸಾಲ ವಾಪಸ್ ನೀಡದಿದ್ದಕ್ಕೆ ಬಟ್ಟೆ ಬಿಚ್ಚಿ ಹಲ್ಲೆ: ಮನೆಗೆ ನುಗ್ಗಿ ಅಕ್ಕ-ತಂಗಿಯನ್ನು ಥಳಿಸಿದ್ದ ಆರೋಪಿಗಳ ಬಂಧನ
ಬಂಧಿತ ಆರೋಪಿಗಳು ಮತ್ತು ಹಲ್ಲೆಗೊಳಗಾದ ಮಹಿಳೆ
TV9 Web
| Edited By: |

Updated on: Jun 29, 2022 | 12:21 PM

Share

ಆನೇಕಲ್: ಸಾಲ ವಾಪಸ್ ನೀಡದ್ದಕ್ಕೆ ಮಹಿಳೆ ಬಟ್ಟೆ ಬಿಚ್ಚಿಸಿ ಹಲ್ಲೆ (Assaulted) ಮಾಡುವ ಮೂಲಕ ಅಮಾನವೀಯವಾಗಿ ನಡೆದುಕೊಂಡಿರುವಂತಹ ದಾರುಣ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ ವ್ಯಾಪ್ತಿಯ ದೊಮ್ಮಸಂದ್ರದಲ್ಲೊಂದು ನಡೆದಿದೆ. ಕೊಟ್ಟ ಸಾಲ ಹಿಂತಿರುಗಿಸಲು ವಿಳಂಬವಾದ ಹಿನ್ನೆಲೆ ಮಹಿಳೆ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿ ಕಿರಾತಕರು ಅವಮಾನಿಸಿದ್ದಾರೆ. ದೊಮ್ಮಸಂದ್ರ ವ್ಯಾಪ್ತಿಯ ನೆರಿಗಾ ಗ್ರಾಮದ ಶಾಂತಿಪ್ರಿಯ ಎಂಬುವವರು ಹಲ್ಲೆಗೊಳಲಾಗ ಮಹಿಳೆ. ಸುಬ್ಬಾರೆಡ್ಡಿ ಎಂಬುವವರ ಪುತ್ರಿಯರಾದ ಶಾಂತಿಪ್ರಿಯ ಮತ್ತು ಭಾನುಪ್ರಿಯ ಎಂಬುವವರ ಮೇಲೆ ದೌರ್ಜನ್ಯ ಆರೋಪ ಮಾಡಲಾಗಿದೆ. ರಾಮಕೃಷ್ಣ ರೆಡ್ಡಿ ಇಂದ್ರಮ್ಮ ಹಾಗೂ ಸುನೀಲ್ ಕುಮಾರ್ ಎಂಬುವವರಿಂದ ಹಲ್ಲೆ ಮಾಡಿರುವುದಾಗಿ ಆರೋಪ ಮಾಡಿದ್ದಾರೆ.

ಇದನ್ನೂ ಓದಿ; ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದ ಟೈಲರ್ ಅಂಗಡಿ ಮಾಲೀಕನ ಶಿರಚ್ಛೇದ ಪ್ರಕರಣ; ಕರ್ನಾಟಕದಾದ್ಯಂತ ಹೈ ಅಲರ್ಟ್

ರಾಮಕೃಷ್ಣ ರೆಡ್ಡಿಯವರ ಬಳಿ ಶಾಂತಿಪ್ರಿಯ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವರ್ಷದ ಹಿಂದೆ ಒಂದು ಲಕ್ಷ ರೂ. ಸಾಲ ಪಡೆದಿದ್ದರು. ಕಾಲ ಕಾಲಕ್ಕೆ ಸರಿಯಾಗಿ ಬಡ್ಡಿ ಕಟ್ಟುತ್ತಾ ಬಂದಿದ್ರು. ಇತ್ತೀಚಿಗೆ ಅಸಲು ನೀಡುವಂತೆ ಸುನಿಲ್ ಕುಮಾರ್ ಕುಟುಂಬದಿಂದ ಒತ್ತಡ ಹೇರಲಾಗಿದೆ. ಆದರೆ ಹಣ ಇಲ್ಲದಿದ್ದರಿಂದ ಗ್ರಾಮಸ್ಥರ ಮುಂದೆ ರಾಜಿ ನಡೆದಿತ್ತು. ಭಾನುವಾರ ಬೆಳಗ್ಗೆ ಏಕಾಏಕಿ ಶಾಂತಿಪ್ರಿಯ ಮನೆಗೆ ನುಗ್ಗಿದ್ದ ಸುನಿಲ್ ಕುಮಾರ್ ಹಾಗೂ ಮನೆಯವರು ಮನ ಬಂದಂತೆ ಥಳಿಸಿದ್ದಾರೆ. ಪ್ರಕರಣ ಕುರಿತು ಸರ್ಜಾಪುರ ಪೊಲೀಸರು ದೂರು ದಾಖಲಿಸಿಕೊಂಡು, ಸದ್ಯ ರಾಮಕೃಷ್ಣರೆಡ್ಡಿ, ಸುನಿಲ್‌ ಕುಮಾರ್​ನನ್ನ ಬಂಧಿಸಲಾಗಿದೆ.

ಮಲ್ಲೇಣು ಗ್ರಾಮದಲ್ಲಿ ರಾತ್ರಿ ವೇಳೆ ಮತಾಂತರ‌‌ ಯತ್ನ ಆರೋಪ

ಚಿತ್ರದುರ್ಗ: ಹಿರಿಯೂರು ತಾಲೂಕಿನ ಮಲ್ಲೇಣು ಗ್ರಾಮದಲ್ಲಿ ಹಿಂದುಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನ ಆರೋಪಿಸಿ ಪ್ರಾರ್ಥನೆ ವೇಳೆ ಹಿಂದುಪರ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿರುವಂತಹ ಘಟನೆ ನಡೆದಿದೆ. ಬೈಬಲ್ ಗ್ರಂಥದ ಪ್ರತಿ ಸುಟ್ಟು ಹಾಕಿ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜರಂಗದಳ ಕಾರ್ಯಕರ್ತರು, ಕ್ರಿಶ್ಚಿಯನ್ ಮಹಿಳೆ‌ ಮಧ್ಯೆ ವಾಗ್ವಾದ ಉಂಟಾಗಿದ್ದು, ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಫಸ್ಟ್​ ಕ್ಲಾಸ್​​ನಲ್ಲಿ ದ್ವಿತೀಯ ಪಿಯುಸಿ ಪಾಸಾದ ಹೈದರಾಬಾದ್​ನ ಸಯಾಮಿ ಅವಳಿಗಳು

Follow Us
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ