AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಕ್ಲೌಡ್ ಕಿಚನ್​ಗಳು: ಇಲ್ಲಿ ಸಿದ್ಧವಾಗುವ ಆಹಾರ ಎಷ್ಟು ಸುರಕ್ಷಿತ?

ಕಾಟನ್ ಕ್ಯಾಂಡಿ ಬ್ಯಾನ್ ಆಯ್ತು, ಕಬಾಬ್​ಗೆ ರಾಸಾಯನಿಕ ಕೃತಕ ಬಣ್ಣ ಮಿಶ್ರ ಮಾಡುತ್ತಾರೆ ಎಂದು ಅದಕ್ಕೂ ನಿರ್ಬಂಧ ಹೇರಿ ಆಯ್ತು. ಬಣ್ಣ ಬಣ್ಣದ ಕೇಕ್, ಸಾಸ್ ಸುರಕ್ಷಿತ ಅಲ್ಲ ಎಂಬುದೂ ಸಾಬೀತಾಯಿತು. ಈಗ ಬೆಂಗಳೂರಿನ ಕ್ಲೌಡ್ ಕಿಚನ್​​ಗಳಿಂದ ಬರುತ್ತಿರುವ ಆಹಾರ ಎಷ್ಟು ಸುರಕ್ಷಿತ ಎಂಬ ಅನುಮಾನ ಹುಟ್ಟಿಕೊಂಡಿದೆ.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಕ್ಲೌಡ್ ಕಿಚನ್​ಗಳು: ಇಲ್ಲಿ ಸಿದ್ಧವಾಗುವ ಆಹಾರ ಎಷ್ಟು ಸುರಕ್ಷಿತ?
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on: Oct 10, 2024 | 9:27 AM

Share

ಬೆಂಗಳೂರು, ಅಕ್ಟೋಬರ್ 10: ಕಳೆದ ಮೂರು ತಿಂಗಳುಗಳಿಂದ ಆಹಾರ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು ವ್ಯಸ್ತವಾಗಿವೆ. ಜನರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸಿವೆ. ಅಸುರಕ್ಷಿತರ ಆಹಾರಗಳ ಮೇಲೆ ಸಮರ ಸಾರಿರುವ ಆಹಾರ ಮತ್ತು ಗುಣಮಟ್ಟ ಸುರಕ್ಷತಾ ಇಲಾಖೆ, ಜನರ ಆರೋಗ್ಯಕ್ಕೆ ಕುತ್ತು ತರುತ್ತಿರುವ ಅಪಾಯಕರ ಆಹಾರಗಳನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಕ್ರಮವಹಿಸುತ್ತಿದೆ. ಇದರ ಮಧ್ಯೆ ಇದೀಗ ಆನ್​​ಲೈನ್ ಮೂಲಕ ಜನರ ಮನೆ ಮನೆ ತಲುಪುತ್ತಿರುವ ಆಹಾರ ಎಷ್ಟು ಸುರಕ್ಷಿತ ಎಂಬ ಚರ್ಚೆ ಶುರುವಾಗಿದೆ. ಆನ್​ಲೈನ್ ಮೂಲಕ ಆಹಾರ ಪೂರೈಸುವ ಕ್ಲೌಡ್ ಕಿಚನ್​ಗಳಿಗೆ ಮಾರ್ಗಸೂಚಿಗಳನ್ನ ನೀಡುವಂತೆ ಆಹಾರ ಇಲಾಖೆಗೆ ಒತ್ತಾಯ ಕೇಳಿ ಬರುತ್ತಿದೆ.

ಇತ್ತಿಚ್ಚಿಗೆ ಎಫ್‌ಎಸ್‌ಎಸ್‌ಎಐ ಪರವಾನಗಿ ಇದ್ದರೆ ಯಾರೂ ಬೇಕಾದರೂ ಈ ಕ್ಲೌಡ್ ಕಿಚನ್ ಶುರು ಮಾಡಬಹುದಾಗಿದೆ. ಎಲ್ಲಿ ಬೇಕೋ ಅಲ್ಲಿ ಈ ಕ್ಲೌಡ್ ಕಿಚನ್​​ಗಳನ್ನ ಶುರು ಮಾಡಬಹುದಾಗಿದೆ. ಇದಕ್ಕೆ ಆಹಾರ ಇಲಾಖೆ ಪರವನಾಗಿಯನ್ನ ಕೂಡಾ ನೀಡುತ್ತಿದೆ. ಬಹುತೇಕ ಕ್ಲೌಡ್ ಕಿಚನ್​ಗಳ ಬಗ್ಗೆ ಯಾವುದೇ ಮಾಹಿತಿ ಗ್ರಾಹಕರಿಗೆ ಇರುವುದಿಲ್ಲ. ಅವುಗಳ ಆಹಾರ ತಯಾರಿಕೆ ಹೈಜೀನ್ ಬಗ್ಗೆ ಗ್ರಾಹಕರಿಗೆ ಮಾಹಿತಿಯೇ ಇಲ್ಲದಾಗಿದೆ. ಯಾಕಂದರೆ ಎಲ್ಲಿ ಬೇಕೋ ಅಲ್ಲಿ ಈ ಕ್ಲೌಡ್ ಕಿಚನ್ ತೆರೆಯಲು ಸುಲಭವಾಗಿ ಅವಕಾಶ ಸಿಗುತ್ತಿದೆ. ಇದರಿಂದ ಆಹಾರದ ಗುಣಮಟ್ಟದ ಬಗ್ಗೆ ಚರ್ಚೆ ಶುರುವಾಗಿದೆ. ಹೀಗಾಗಿ ಆನ್ಲೈನ್ ಆ್ಯಪ್​​ಗಳಲ್ಲಿ ಆಹಾರ ಆಡರ್ ಮಾಡುವಾಗ ಇದು ಎಲ್ಲಿಂದ ಬರ್ತಿದೆ? ಹೋಟೆಲ್ ಅಥವಾ ಕ್ಲೌಡ್ ಕಿಚನ್ ಅಥವಾ ಬೇಕರಿ ಹೀಗೆ ವಿಭಾಗಿಸಿ ಗ್ರಾಹಕರಿಗೆ ನೀಡುವಂತೆ ಹಾಗೂ ಇದರ ಗುಣಮಟ್ಟದ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಿಯೇ ಆಹಾರ ನೀಡುವ ವಿಧಾನದ ಬಗ್ಗೆ ಒತ್ತಾಯ ಕೇಳಿ ಬರ್ತಿದೆ.

ಕ್ಲೌಡ್ ಕಿಚನ್​​ಗಳ ಸ್ವಚ್ಛತೆ ಹಾಗೂ ಗುಣಮಟ್ಟದ ಬಗ್ಗೆ ಆಹಾರ ಹಾಗೂ ಗಣಮಟ್ಟ ಇಲಾಖೆ ಪರಿಷ್ಕತವಾದ ಮಾರ್ಗಸೂಚಿಗಳನ್ನು ನೀಡುವಂತೆ ಒತ್ತಾಯ ಕೇಳಿಬಂದಿದೆ. ಆಹಾರ ತಜ್ಞರು ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸೈಟ್​ನಲ್ಲಿದ್ದ ಕಸ ಸ್ವಚ್ಚಗೊಳಿಸದೇ ಇದ್ದರೆ ದಂಡ ಹಾಕಿ: ಬಿಡಿಎಗೆ ನಿರ್ದೇಶನ

ಆಹಾರ ತಯಾರಿಸುವ ವಿಧಾನ, ತಯಾರಿ ಮಾಡುವವ ಆರೋಗ್ಯ, ಗಣಮಟ್ಟ ಹಾಗೂ ಶುಚಿತ್ವ ಎಲ್ಲವೂ ಮುಖ್ಯವಾಗುತ್ತದೆ. ಇಲ್ಲವಾದರೆ ಆರೋಗ್ಯಕ್ಕೆ ಅಪಾಯ ಖಂಡಿತ ಎಂದು ಆಹಾರ ತಜ್ಞ ಕೀರ್ತಿ ಹಿರಿಸಾವೆ ಅಭಿಪ್ರಾಯಪಟ್ಟಿದ್ದಾರೆ.

ಇನ್ಮುಂದೆ ಜನರು ಬಾಯಿ ರುಚಿಗಿಂತ ಆರೋಗ್ಯದ ಬಗ್ಗೆ ಕೊಂಚ ಗಮನ ಕೊಡಬೇಕಿದೆ. ಆನ್​​ಲೈನ್ ಮೂಲಕ ಬರು ಆಹಾರ ಎಲ್ಲಿಂದ ಬರುತ್ತಿದೆ? ಹೇಗೆ ತಯಾರಾಗುತ್ತದೆ ಎಂಬ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು