AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಅಮರನಾಥ ಗುಹೆ ಬಳಿ ಮೇಘ ಸ್ಫೋಟ: ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಮೇಘ ಸ್ಫೋಟದಿಂದ ಹಲವು ಯಾತ್ರಿಕರು ಕೊಚ್ಚಿ ಹೋಗಿದ್ದಾರೆ. ಕರ್ನಾಟಕದ ಯಾತ್ರಿಕರ ಸಂಪರ್ಕಿಸಲು ರಾಜ್ಯ ಸರ್ಕಾರ ಹೆಲ್ಪ್‌ಲೈನ್ ನಂಬರ್ ಬಿಡುಗಡೆ ಮಾಡಿದೆ. 080-1070, 22340676 ಸಂಖ್ಯೆಗೆ ಫೋನ್‌ ಮಾಡಬಹುದು.

ಜಮ್ಮು-ಕಾಶ್ಮೀರದ ಅಮರನಾಥ ಗುಹೆ ಬಳಿ ಮೇಘ ಸ್ಫೋಟ: ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 09, 2022 | 11:52 AM

Share

ಬೆಂಗಳೂರು: ಜಮ್ಮು-ಕಾಶ್ಮೀರದ ಅಮರನಾಥ ಗುಹೆ (Amarnath shrine) ಬಳಿ ಮೇಘಸ್ಫೋಟ ಹಿನ್ನೆಲೆ ನಗರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸಾಮಾನ್ಯವಾಗಿ ಪ್ರತಿವರ್ಷ ಕನ್ನಡಿಗರು ಯಾತ್ರೆಗೆ ಹೋಗುತ್ತಾರೆ. ರಾಜ್ಯದ ನೂರಕ್ಕೂ ಹೆಚ್ಚು ಜನರು ಯಾತ್ರೆಗೆ ತೆರಳಿದ್ದಾರೆ. ಯಾತ್ರೆಗೆ ಹೋದ ಬಹುತೇಕ ಎಲ್ಲರೂ ಸುರಕ್ಷಿತವಾಗಿದ್ದಾರೆ. ಬೇರೆ ಯಾವುದೇ ರೀತಿ ಅಹಿತಕರ ಘಟನೆಗಳ ಸುದ್ದಿ ಇಲ್ಲ. ರಾಜ್ಯ ಸರ್ಕಾರದಿಂದ ಹೆಲ್ಪ್​​ಲೈನ್​ ಆರಂಭಿಸಲಾಗಿದೆ. ಹೆಲ್ಪ್‌ಲೈನ್​ಗೆ 15-20 ಜನ ಈಗಾಗಲೇ ಕರೆ ಮಾಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಕೇಂದ್ರದ ಜತೆ ಸಂಪರ್ಕ ಹೊಂದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಇನ್ನೂ ರಾಜ್ಯದ ಹಲವೆಡೆ ಭಾರೀ ಮಳೆಯಿಂದಾಗಿ ಅವಾಂತರ ಹಿನ್ನೆಲೆ ಪ್ರತಿಕ್ರಿಯಿಸಿದ್ದು, ಮಳೆ ಹಾನಿ ಬಗ್ಗೆ ನಿನ್ನೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ರಾಜ್ಯದ ಕೆಲವು ಭಾಗಗಳಲ್ಲಿ ಸ್ವಲ್ಪ ಮಳೆ ಕಡಿಮೆಯಾಗಿದೆ. ಇನ್ನೂ ಕೆಲವೆಡೆ 2-3 ದಿನ ಮಳೆಯಾಗುವ ಸಾಧ್ಯತೆ ಇದೆ. ಅದಕ್ಕೆ ಅನುಗುಣವಾಗಿ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಜಮ್ಮು-ಕಾಶ್ಮೀರದ ಅಮರನಾಥ ಗುಹೆ ಬಳಿ ಮೇಘ ಸ್ಫೋಟ: ಮೈಸೂರಿನ ಆರು ಪ್ರವಾಸಿಗರು ಸೇಫ್

ಹೆಲ್ಪ್‌ಲೈನ್ ನಂಬರ್ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರ:

ಮೇಘ ಸ್ಫೋಟದಿಂದ ಹಲವು ಯಾತ್ರಿಕರು ಕೊಚ್ಚಿ ಹೋಗಿದ್ದಾರೆ. ಕರ್ನಾಟಕದ ಯಾತ್ರಿಕರ ಸಂಪರ್ಕಿಸಲು ರಾಜ್ಯ ಸರ್ಕಾರ ಹೆಲ್ಪ್‌ಲೈನ್ ನಂಬರ್ ಬಿಡುಗಡೆ ಮಾಡಿದೆ. 080-1070, 22340676 ಸಂಖ್ಯೆಗೆ ಫೋನ್‌ ಮಾಡಬಹುದು. Email: revenuedmkar@gmail.comಗೆ ಸಂಪರ್ಕಿಸಬಹುದಾಗಿದೆ. ಕಾಶ್ಮೀರ ವಿಭಾಗದ ಹೆಲ್ಪ್‌ಲೈನ್ ಸಂಖ್ಯೆ-0194-2496240 ಅಮರನಾಥ ದೇಗುಲದ ಹೆಲ್ಪ್‌ಲೈನ್ ಸಂಖ್ಯೆ-0194-2313149 ಎನ್‌ಡಿಆರ್‌ಎಫ್‌-011-23438252, 011-23438253.

ಇದನ್ನೂ ಓದಿ: Amarnath shrine cloudburst ಅಮರನಾಥ ಗುಹೆ ಬಳಿ ಮೇಘ ಸ್ಫೋಟ; ಹಠಾತ್​​ ಪ್ರವಾಹದಲ್ಲಿ 15 ಸಾವು, ಕರ್ನಾಟಕದವರಿಗಾಗಿ ಹೆಲ್ಪ್​​ ಲೈನ್​

ಅಮರನಾಥ್ ಪ್ರವಾಸಕ್ಕೆ ಹೋದ ಕರ್ನಾಟಕ ಪ್ರವಾಸಿಗರು ಸೇಫ್: 

ಮೇಘಸ್ಫೋಟದಲ್ಲಿ ಮೈಸೂರು ಪ್ರವಾಸಿಗರು ಸಿಲುಕಿದ್ದು ಸದ್ಯ ಸೇಫ್​ ಆಗಿದ್ದಾರೆ. ಕಿರಣ್, ಪ್ರಸಾದ್, ವಿಠ್ಠಲ್ ರಾಜ್ ಸೇರಿದಂತೆ 6 ಜನ ಸುರಕ್ಷಿತವಾಗಿದ್ದಾರೆ.​ ಜೂ.2ರಂದು ಅಮರನಾಥ್ ಪ್ರವಾಸಕ್ಕೆ ಮೈಸೂರಿನ ಪ್ರವಾಸಿಗರು ತೆರಳಿದ್ದು, ಘಟನೆ ವೇಳೆ ಶೇಷನಾಗ್ ಬಳಿ ಇದ್ದರು. ಮೇಘ ಸ್ಫೋಟದಿಂದಾಗಿ ನದಿಯ ಪ್ರವಾಹದಿಂದಾಗಿ ಟೆಂಟ್​ಗಳು ಕೊಚ್ಚಿ ಹೋಗಿದ್ದು, ತಕ್ಷಣ ಆರಂಭವಾದ ರಕ್ಷಣಾ ಕಾರ್ಯಚರಣೆಯಿಂದಾಗಿ ಯಾವುದೇ ಅಪಾಯವಿಲ್ಲದೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ಮೇಘ ಸ್ಫೋಟದ ದೃಶ್ಯಗಳು ಅಲ್ಲಿನ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಮೈಸೂರಿಗೆ ವಾಪಸ್ಸಾಗಲು ಪ್ರವಾಸಿಗರು ಸಿದ್ದತೆ ನಡೆಸಿದ್ದು, ಸೇನಾ ಕ್ಯಾಂಪ್​ನಲ್ಲಿ ರಕ್ಷಣೆ ಪಡೆಯುತ್ತಿದ್ದಾರೆ.

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು