AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ; ನಾಡಿನ ಜನತೆಗೆ ಸಂವಿಧಾನ ದಿನದ ಶುಭಕಾಮನೆ ತಿಳಿಸಿದ ಸಿಎಂ ಬೊಮ್ಮಾಯಿ

Constitution Day 2021: ಸಂವಿಧಾನ ದಿನದ ಈ ಐತಿಹಾಸಿಕ ದಿನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(BS Yediyurappa) ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯ ತಿಳಿಸಿದ್ದಾರೆ.

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ; ನಾಡಿನ ಜನತೆಗೆ ಸಂವಿಧಾನ ದಿನದ ಶುಭಕಾಮನೆ ತಿಳಿಸಿದ ಸಿಎಂ ಬೊಮ್ಮಾಯಿ
ಸಂವಿಧಾನ ದಿನದ ಶುಭಾಶಯಗಳು
TV9 Web
| Edited By: |

Updated on:Nov 26, 2021 | 9:54 AM

Share

ಬೆಂಗಳೂರು: ಇಂದು ನಾಡಿನಲ್ಲಿ ಸಂವಿಧಾನ ದಿನವನ್ನು(Constitution Day) ಆಚರಿಸಲಾಗುತ್ತಿದೆ. 1949ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನೆಪಿಗಾಗಿ ದೇಶ ಈ ದಿನವನ್ನು ಆಚರಿಸುತ್ತೆ. 2015ರಿಂದ ಸಂವಿಧಾನ ದಿನ ಆಚರಣೆ ಆರಂಭವಾಯ್ತು. ಈ ಐತಿಹಾಸಿಕ ದಿನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(BS Yediyurappa) ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯ ತಿಳಿಸಿದ್ದಾರೆ.

ಟ್ವೀಟ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಸ್ತ ಭಾರತೀಯರಿಗೆ ಸಂವಿಧಾನ ದಿನದ ಶುಭಾಶಯ ತಿಳಿಸಿದ್ದಾರೆ. 1949ರ ನ.26ರಂದು ಭಾರತದ ಸಂವಿಧಾನ ಅಂಗೀಕಾರವಾಯ್ತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢ ನಿಶ್ಚಯದೊಂದಿಗೆ ಕರ್ತೃಗಳನ್ನು ಸ್ಮರಿಸೋಣ. ನಮ್ಮ ಎಲ್ಲ ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ. ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪ ಪುನರುಚ್ಛರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇನ್ನು ಮತ್ತೊಂದೆಡೆ ಟ್ವೀಟ್ ಮೂಲಕ ಯಡಿಯೂರಪ್ಪ ನಾಡಿನ ಜನತೆಗೆ ಸಂವಿಧಾನ ದಿನದ ಶುಭಕಾಮನೆಗಳನ್ನು ತಿಳಿಸಿದ್ದಾರೆ. ಸಂವಿಧಾನವೇ ನಮ್ಮ ರಾಷ್ಟ್ರಧರ್ಮ. ಪ್ರತಿಯೊಬ್ಬ ಭಾರತೀಯನ ಸ್ವಾತಂತ್ರ್ಯ, ಹಕ್ಕು, ಘನತೆಯನ್ನು ಸಂವಿಧಾನ ರಕ್ಷಿಸುತ್ತದೆ. ಸಮಾನತೆಯೊಂದಿಗೆ ನಮ್ಮ ವಿಚಾರ, ಅಭಿವ್ಯಕ್ತಿ, ಶ್ರದ್ಧೆ, ಉಪಾಸನೆಯ ಸ್ವಾತಂತ್ರ್ಯವೂ ಸಂವಿಧಾನದತ್ತವಾಗಿದ್ದು. ಸಂವಿಧಾನದ ಸದಾಶಯ ಸಂರಕ್ಷಿಸುವ ಕೆಲಸ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Constitution Day 2021: ನ.26 ಸಂವಿಧಾನ ದಿನ; ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್​

Published On - 7:49 am, Fri, 26 November 21

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ