AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ, ಟ್ರಾಫಿಕ್ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಸಭೆ: ಬೆಂಗಳೂರು ಸುತ್ತಮುತ್ತಲಿನ ರಸ್ತೆ ಬಗ್ಗೆ ಅಥಾರಿಟಿ ರಚಿಸಲು ತೀರ್ಮಾನ

ರೋಪ್ ವೇ ಮೂಲಕ ಸಂಚರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ. ಶಿರಾಡಿಘಾಟ್ ಸೇರಿ ಅನೇಕ ಅನೇಕ ಹೆದ್ದಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಬೆಂಗಳೂರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಸ್ತೆ, ಟ್ರಾಫಿಕ್ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಸಭೆ: ಬೆಂಗಳೂರು ಸುತ್ತಮುತ್ತಲಿನ ರಸ್ತೆ ಬಗ್ಗೆ ಅಥಾರಿಟಿ ರಚಿಸಲು ತೀರ್ಮಾನ
ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಸಭೆ
TV9 Web
| Edited By: |

Updated on:Sep 09, 2022 | 4:01 PM

Share

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ಜೊತೆ ಬೆಂಗಳೂರಿನ ರಸ್ತೆ, ಟ್ರಾಫಿಕ್ ಬಗ್ಗೆ ಚರ್ಚೆ ನಡೆಸಿದ್ದಾರೆ. ನಿತಿನ್ ಗಡ್ಕರಿ ಜೊತೆ ಸಭೆ ಬಳಿಕ ಸಿಎಂ ಬೊಮ್ಮಾಯಿ, ಬೆಂಗಳೂರು ಸುತ್ತಮುತ್ತಲಿನ ರಸ್ತೆ ಬಗ್ಗೆ ಅಥಾರಿಟಿ ರಚಿಸಲು ತೀರ್ಮಾನ ಮಾಡಿದ್ದೇವೆ ಎಂದು ಸೂಚಿಸಿದ್ದಾರೆ.

ನಗರದ ಖಾಸಗಿ ತಾರಾ ಹೋಟೆಲ್​ನಲ್ಲಿ ನಿತಿನ್ ಗಡ್ಕರಿ ಜೊತೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಹೊಸ ಟೆಕ್ನಾಲಜಿ ಬಳಸಿ ಟ್ರಾಫಿಕ್ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರು-ಮೈಸೂರು ರಸ್ತೆ ಕಾಮಗಾರಿ ಬಗ್ಗೆಯೂ ಚರ್ಚಿಸಿದ್ದೇವೆ. ಡ್ರೈನೇಜ್ ಸಿಸ್ಟಮ್​ ಮಾಡಿ ಮಳೆ ನೀರು ಹರಿದು ಹೋಗಲು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುತ್ತೆ. ಕೂಡಲೇ ರಸ್ತೆ ದುರಸ್ತಿಗೆ ಅಧಿಕಾರಿಗಳಿಗೆ ನಿತಿನ್ ಗಡ್ಕರಿ ಸೂಚಿಸಿದ್ದಾರೆ. ಎಲಿವೇಟೆಡ್​ ಟ್ರಾನ್ಸ್​ಪೋರ್ಟ್​ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ರೋಪ್ ವೇ ಮೂಲಕ ಸಂಚರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ. ಶಿರಾಡಿಘಾಟ್ ಸೇರಿ ಅನೇಕ ಅನೇಕ ಹೆದ್ದಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಬೆಂಗಳೂರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಬಳಿಕ ಸಭೆಯಲ್ಲಿ ನಡೆದ ಮಾತುಕತೆ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

ಎಲ್ಲೆಲ್ಲಿ ರಸ್ತೆ ಮಾಡಲು ಸಾಧ್ಯವಿಲ್ಲವೊ ಅಲ್ಲೆಲ್ಲ ಎಲಿವೇಟೆಡ್ ಟ್ರಾನ್ಸ್‌ಪೋರ್ಟ್ ಮಾಡಲು ಚಿಂತನೆ ನಡೆಸಿದ್ದೇವೆ. ಈಗಾಗಲೇ ಅದರ ತಂತ್ರಜ್ಞಾನ ಇದೆ. ಅದನ್ನು ಬೆಂಗಳೂರಿಗೆ ಯಾವ ರೀತಿ ಬಳಸಿಕೊಳ್ಳಬಹುದು ಅಂತ ಚರ್ಚೆ ನಡೆಸಿದ್ದೇವೆ. ಬೆಂಗಳೂರು ಮೈಸೂರು ಹೆದ್ದಾರಿ ಉದ್ಘಾಟನೆಗೆ ಯಾವುದೇ ದಿನಾಂಕ‌ ನಿಗದಿ ಮಾಡಿಲ್ಲ. ಅಲ್ಲಿ ಇನ್ನೂ ಸ್ವಲ್ಪ ಕೆಲಸ ಬಾಕಿ ಉಳಿದಿದೆ. ಭೂ ಒತ್ತುವರಿ ಸಮಸ್ಯೆ ಇದೆ. ಅದೆಲ್ಲ ಪೂರ್ಣವಾದ ನಂತರ ಉದ್ಘಾಟನೆಯ ದಿನಾಂಕ‌ ತಿಳಿಸಲಾಗುವುದು ಎಂದರು.

ಸಭೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಸಂಸದರಾದ ಪಿ ಸಿ ಮೋಹನ್, ತೇಜಸ್ವಿ ಸೂರ್ಯ ಭಾಗಿಯಾಗಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:04 pm, Thu, 8 September 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು