AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರು ರಾಜಕಾಲುವೆ ನಿರ್ಮಾಣಕ್ಕೆ 1500 ಕೋಟಿ ಬಿಡುಗಡೆ; ಸಿಎಂ ಬಸವರಾಜ ಬೊಮ್ಮಾಯಿ

CM Basavaraj Bommai: ನಗರದ ಹಲವೆಡೆ ಮುಖ್ಯ ಕಾಲುವೆಗಳು ಮುಚ್ಚಿಕೊಂಡಿವೆ. ಕೆಲವೆಡೆ ಕಾಲುವೆಗಳ ಅಗಲ ಕಡಿಮೆಯಿರುವುದರಿಂದ ತೊಂದರೆಯಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Bengaluru Rain: ಬೆಂಗಳೂರು ರಾಜಕಾಲುವೆ ನಿರ್ಮಾಣಕ್ಕೆ 1500 ಕೋಟಿ ಬಿಡುಗಡೆ; ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 01, 2022 | 7:15 AM

Share

ಬೆಂಗಳೂರು: ಮಳೆಯಿಂದಾಗಿ ಬೆಂಗಳೂರಿನಲ್ಲಿ (Bengaluru Rain) ಅಪಾರ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು. ಗೃಹ ಕಚೇರಿ ಕೃಷ್ಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಗರದ ವಿವಿಧ ಬಡಾವಣೆಗಳಲ್ಲಿ 122ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆಯಾಗಿದೆ. ಕಂದಾಯ ಸಚಿವರು ಪರಿಶೀಲಿಸಿ, ಸಂತ್ರಸ್ತರಿಗೆ ಪರಿಹಾರ ನೀಡಲಿದ್ದಾರೆ. ಮಹದೇವಪುರ, ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಹಾನಿಯ ಪ್ರಮಾಣ ಹೆಚ್ಚು ಎಂದು ಹೇಳಿದರು.

ಮಹದೇವಪುರದ 9, ಬೊಮ್ಮನಹಳ್ಳಿಯ 11 ಕಡೆ ಹಾನಿ ಆಗಿದೆ. ಮಳೆ ಹಾನಿಗೆ ಸಂಬಂಧಿಸಿದಂತೆ ನಾನು ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಸವಳೆ ಕೆರೆಯ ನೀರು ಹರಿದು ಹಲವೆಡೆ ಸಮಸ್ಯೆಯಾಗಿದೆ. ನೀರು ಹರಿಯಲು ಸಮಸ್ಯೆಯಿರುವ ಮುಖ್ಯ ಕಾಲುವೆಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ. ನಗರದ ವಿವಿಧ ಪ್ರದೇಶಗಳಿಗೆ ನಾಳೆ (ಸೆಪ್ಟೆಂಬರ್ 1) ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ರಾಜಕಾಲುವೆಗಳ ನಿರ್ಮಾಣಕ್ಕೆ ಈಗಾಗಲೇ ₹ 1,500 ಕೋಟಿ ನೀಡಲಾಗಿದೆ ಎಂದು ತಿಳಿಸಿದರು.

ನಗರದ ಹಲವೆಡೆ ಮುಖ್ಯ ಕಾಲುವೆಗಳು ಮುಚ್ಚಿಕೊಂಡಿವೆ. ಕೆಲವೆಡೆ ಕಾಲುವೆಗಳ ಅಗಲ ಕಡಿಮೆಯಿರುವುದರಿಂದ ತೊಂದರೆಯಾಗುತ್ತಿದೆ. ನೀರು ಹರಿಯಲು ಇರುವ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಸೂಚನೆ ನೀಡಿದ್ದೇನೆ. ಹೊರ ವರ್ತುಲ ರಸ್ತೆಯಲ್ಲಿ ನಿಂತಿರುವ ನೀರನ್ನು ಸಮರ್ಪಕವಾಗಿ ಹರಿಸಲು ಸೂಚನೆ ನೀಡಿದ್ದೇನೆ. ಮಳೆ ನೀರು ಸಾಗಿಸುವ ಚರಂಡಿಗಳನ್ನು ಪರಸ್ಪರ ಸಂಬಂಧ ಕಲ್ಪಿಸದಿರುವ ಕಾರಣ ಲೇಔಟ್​ಗಳಲ್ಲಿ ನೀರು ನಿಂತಿದೆ ಎಂದು ಹೇಳಿದರು.

ರಾಜಕಾಲುವೆಯ ಜೊತೆಗೆ ನೀರು ಹರಿಯುವ ನೀರು ಹರಿವಿನ ಇತರ ಚರಂಡಿ, ಕಾಲುವೆಗಳನ್ನೂ ಸರಿಯಾಗಿ ನಿರ್ವಹಿಸಬೇಕು. ಆಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಮಳೆ ಹೆಚ್ಚಾಗಿದೆ. ಕಳೆದ ಬಾರಿ ಮಲ್ಲೇಶ್ವರಂ ಹಾಗೂ ಯಶವಂತಪುರ ಭಾಗದಲ್ಲಿ ತೊಂದರೆಯಾಗಿತ್ತು. ಈ ಬಾರಿ ಅಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದರಿಂದ ಯಾವುದೇ ತೊಂದರೆಯಾಗಲಿಲ್ಲ. ನಗರ ವ್ಯಾಪ್ತಿಯಲ್ಲಿ ಚರಂಡಿ ಹಾಗೂ ರಾಜಕಾಲುವೆ ನಿರ್ವಹಣೆ ಹೆಚ್ಚುವರಿ ಹಣ ಒದಗಿಸಲು ಸರ್ಕಾರ ಸಿದ್ಧವಿದೆ ಎಂದರು.

ಕಳೆದ ಬಾರಿಯೂ ಬೆಂಗಳೂರಿನಲ್ಲಿ ಮಳೆ ಅನಾಹುತ ಹೆಚ್ಚಾದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರ ಸಂಚಾರ ನಡೆಸಿ, ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದರು. ಆ ಕೆಲಸಗಳು ಆಗಿಲ್ಲವೇ ಎಂದು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ, ‘ಯಲಹಂಕದಲ್ಲಿ ಕೆಲಸ ಮಾಡಿದ್ದರಿಂದ ಈ ಬಾರಿ ಹೆಚ್ಚಿನ ಅನಾಹುತ ಆಗಿಲ್ಲ. ಹೊಸಕೆರೆಹಳ್ಳಿಯಲ್ಲಿ ಕೆಲಸ ಪ್ರಾರಂಭವಾಗಿದೆ. ಮಳೆ ಕಡಿಮೆಯಾದ ನಂತರ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತೇವೆ’ ಎಂದು ಭರವಸೆ ನೀಡಿದರು.

Published On - 10:15 pm, Wed, 31 August 22

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ