AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE-Advanced Results 2022: ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಶಿಶಿರ್​ಗೆ ಸಿಎಂ ಬೊಮ್ಮಾಯಿ ಅಭಿನಂದನೆ

ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಶಿಶಿರ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅಭಿನಂದನೆ ಸಲ್ಲಿಸಿದ್ದಾರೆ.

JEE-Advanced Results 2022: ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಶಿಶಿರ್​ಗೆ ಸಿಎಂ ಬೊಮ್ಮಾಯಿ ಅಭಿನಂದನೆ
TV9 Web
| Updated By: ಆಯೇಷಾ ಬಾನು|

Updated on:Sep 11, 2022 | 8:10 PM

Share

ಬೆಂಗಳೂರು: ಜೆಇಇ ಅಡ್ವಾನ್ಸ್ಡ್‌ 2022 ಪರೀಕ್ಷೆಯ ಫಲಿತಾಂಶ(JEE-Advanced Results 2022) ಸೆ.11ರಂದು ಪ್ರಕಟವಾಗಿದ್ದು, ಬೆಂಗಳೂರಿನ ವಿದ್ಯಾರ್ಥಿ, ಕರ್ನಾಟಕ ಮೂಲದ ಕೆ ಶಿಶಿರ್ ಪ್ರಥಮ ಸ್ಥಾನ ಪಡೆದಿದ್ದಾರೆ. ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಶಿಶಿರ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅಭಿನಂದನೆ ಸಲ್ಲಿಸಿದ್ದಾರೆ.

ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕರುನಾಡಿನ ಕೀರ್ತಿ ಹೆಚ್ಚಿಸಿದ ಶಿಶಿರ್ ಆರ್. ಕೆ‌. ಅವರಿಗೆ ಹಾರ್ದಿಕ ಅಭಿನಂದನೆಗಳು. ಭವಿಷ್ಯದಲ್ಲಿ ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ.

ಜೆಇಇ ಅಡ್ವಾನ್ಸ್ಡ್‌ 2022 ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬೆಂಗಳೂರಿನ ವಿದ್ಯಾರ್ಥಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಕರ್ನಾಟಕ ಮೂಲದ ಕೆ ಶಿಶಿರ್ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಐಐಟಿ ಝೋನ್ನಿಂದ ಪರೀಕ್ಷೆ ಬರೆದವರು. ಹಾಗೆಯೇ ಪೋಲು ಲಕ್ಷ್ಮೀ ಸಾಯಿ ಲೋಹಿತ್ ರೆಡ್ಡಿ ಎರಡನೇ ಮತ್ತು ಥಾಮಸ್ ಬಿಜು ಚೀರಂವೇಲಿಲ್ ಮೂರನೇ ಶ್ರೇಯಾಂಕ ಪಡೆದಿದ್ದಾರೆ. ಆಗಸ್ಟ್ 28ರಂದು ಪರೀಕ್ಷೆ ನಡೆದಿತ್ತು, ಜೆಇಇ ಅಡ್ವಾನ್ಸ್ಡ್‌ 2022 ಫಲಿತಾಂಶ – jeeadv.ac.in – ಜೆಇಇ ಅಡ್ವಾನ್ಸ್ಡ್‌ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಇದನ್ನೂ ಓದಿ: JEE-Advanced Results 2022 : ಜೆಇಇ ಅಡ್ವಾನ್ಸ್ಡ್​ ಪರೀಕ್ಷೆಯ ಫಲಿತಾಂಶ ಪ್ರಕಟ, ಬೆಂಗಳೂರಿನ ವಿದ್ಯಾರ್ಥಿ ಶಿಶಿರ್ ಟಾಪರ್

ಈ ಬಾರಿ ಟಾಪ್ 10ರಲ್ಲಿ ಹುಡುಗರೇ ಇರುವುದು ವಿಶೇಷ. ಹುಡುಗಿಯರಲ್ಲಿ 16ನೇ ರ್ಯಾಂಕ್ ನ್ನು ಐಐಟಿ ದೆಹಲಿ ಝೋನ್ನ ತನಿಷ್ಕಾ ಕಾಬ್ರಾ ಮೊದಲ ಸ್ಥಾನ ಪಡೆದಿದ್ದಾರೆ. ವಂಗಪಲ್ಲಿ ಸಾಯಿ ಸಿದ್ಧಾರ್ಥ್ 4ನೇ ಸ್ಥಾನ, ಮಯಾಂಕ್ ಮೋಟ್ವಾನಿ 5ನೇ ಸ್ಥಾನ, ಪೋಲಿಸೆಟ್ಟಿ ಕಾರ್ತಿಕೇಯ 6ನೇ ಸ್ಥಾನ, ಪ್ರತೀಕ್ ಸಾಹೂ 7ನೇ ಸ್ಥಾನ, ಧೀರಜ್ ಕುರುಕುಂದಾ 8ನೇ ಸ್ಥಾನ, ಮಹಿತ್ 9ನೇ ಸ್ಥಾನ ಹಾಗೂ ಮಹೇಶ್ 10ನೇ ಸ್ಥಾನ ಪಡೆದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:07 pm, Sun, 11 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?