AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2022 – ಈ ಬಾರಿ ಮೈಸೂರಿನಲ್ಲಿ ದಸರಾ ವೈಭವ ಜೋರು: ಸಿಎಂ ಬೊಮ್ಮಾಯಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು?

Mysuru Dasara 2022 - ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ನಿರ್ಧರಿಸಿದ್ದೇವೆ. ಈ ಬಾರಿ ದಸರಾ ಬಗ್ಗೆ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ. -ಸಿಎಂ ಬೊಮ್ಮಾಯಿ

Mysore Dasara 2022 - ಈ ಬಾರಿ ಮೈಸೂರಿನಲ್ಲಿ ದಸರಾ ವೈಭವ ಜೋರು: ಸಿಎಂ ಬೊಮ್ಮಾಯಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jul 20, 2022 | 7:48 AM

Share

ಬೆಂಗಳೂರು: ಕೊರೊನಾ(Coronavirus) ಕಾಟದಿಂದ ಮುಕ್ತವಾಗಿರುವ ನಾಡಿನಲ್ಲಿ ಈ ಬಾರಿ ಮೈಸೂರು ದಸರಾ ಆಚರಣೆ ಕಳೆಕಟ್ಟಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಇಂದು ಸಂಜೆ ಸಭೆ ನಡೆಸಿದ್ದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022(Mysuru Dasara 2022) ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ.

ನಾಡಹಬ್ಬ ದಸರಾ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೈರಾಗಿದದ್ದು ಎದ್ದು ಕಾಣುತ್ತಿತ್ತು. ಇನ್ನು ಸಭೆಯಲ್ಲಿ ಮೈಸೂರು, ಮಂಡ್ಯ ಭಾಗದ ಜನಪ್ರತಿನಿಧಿಗಳು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಶಾಸಕ ಜಿಟಿ ದೇವೇಗೌಡ, ಪ್ರತಾಪ್ ಸಿಂಹ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತನ್ವೀರ್ ಸೇಠ್, ಸಾರಾ ಮಹೇಶ್, ಹರ್ಷವರ್ಧನ್, ರಾಮ್ ದಾಸ್, ಪರಿಷತ್ ಸದಸ್ಯ ವಿಶ್ವನಾಥ್, ಮೈಸೂರು ಜಿಲ್ಲಾಧಿಕಾರಿ ಗೌತಮ್‌ ಬಗಾದಿ, ಮೈಸೂರು ಪೊಲೀಸ್ ಕಮಿಷನರ್, ಮಂಡ್ಯ ಜಿಲ್ಲಾಧಿಕಾರಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ರು.

ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭ

ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ನಿರ್ಧರಿಸಿದ್ದೇವೆ. ಈ ಬಾರಿ ದಸರಾ ಬಗ್ಗೆ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ. ದಸರಾ ಬ್ರ್ಯಾಂಡ್ ನೇಮ್ ಆಗಬೇಕು, ವಿಶ್ವದಾದ್ಯಂತ ಪ್ರಚಾರ ಮಾಡಲಾಗುತ್ತೆ. ಸೆಪ್ಟೆಂಬರ್ 26ರಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ. ಅಕ್ಟೋಬರ್ 5ರಂದು ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯಲಿದೆ ಎಂದರು.

ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸಲು ವ್ಯವಸ್ಥೆ ಮಾಡಬೇಕಿದೆ. ಗಜಪಯಣ ಮಾವುತರಿಗೆ ಗೌರವ ಕಾಣಿಕೆ ಕೊಟ್ಟು ಕಾರ್ಯಕ್ರಮ ಮಾಡಬೇಕು. ವಸ್ತು ಪ್ರದರ್ಶನ 15 ದಿನ ಮೊದಲೇ ಪ್ರಾರಂಭಕ್ಕೆ ಸೂಚಿಸಲಾಗಿದೆ. ಸ್ಥಳೀಯ ಕಲಾಕಾರರಿಗೆ ಹೆಚ್ಚಿನ ಒತ್ತು ಕೊಡಬೇಕು. ದಿವಸಕ್ಕೆ ಒಬ್ಬರಾದರೂ ಕೂಡ ರಾಷ್ಟ್ರೀಯ ಕಲಾಕಾರರನ್ನು ಮುಖ್ಯ ಆಕರ್ಷಣೆಯಾಗಿ ಕರೆಯುವ ಉದ್ದೇಶವಿದೆ. ಶ್ರೀರಂಗಪಟ್ಟಣ ಚಾಮರಾಜನಗರದಲ್ಲೂ ವೈಭವದ ದಸರಾ ಆಯೋಜಿಸಲಾಗುತ್ತೆ. ಮುಂದಿನ ಒಂದು ವಾರದ ಒಳಗಡೆ ಟೂರಿಸ್ಟ್ ಸರ್ಕ್ಯೂಟ್ ಅಂತ ಆದೇಶ ಮಾಡ್ತಿದ್ದೇವೆ. ಮೈಸೂರು ಹಾಗೂ ಹಂಪಿ ಟೂರಿಸ್ಟ್ ಸರ್ಕ್ಯೂಟ್ ಚಾಲನೆ ನೀಡ್ತೇವೆ ಎಂದು ತಿಳಿಸಿದ್ದಾರೆ.

ಮಳೆ, ಬೆಳೆ ಚೆನ್ನಾಗಿ ಆಗಿರುವುದರಿಂದ ವೈಭವದ ದಸರಾ ಮಾಡಲಾಗುತ್ತೆ

ಇನ್ನು ಮೈಸೂರು ದಸರಾ ಹೈಪವರ್ ಕಮಿಟಿ ಮೀಟಿಂಗ್ ಅಂತ್ಯದ ಬಳಿಕ ಎಸ್ಟಿ ಸೋಮಶೇಖರ್ ಮಾಹಿತಿ ನೀಡಿದ್ದಾರೆ. ಈ ಬಾರಿ ವೈಭವದಿಂದ ದಸರಾ ಮಾಡಬೇಕು ಅಂತ ಜನಪ್ರತಿನಿಧಿಗಳು ಹೇಳಿದ್ದಾರೆ. ಮೈಸೂರು ದಸರಾ ಆಕರ್ಷಕವಾಗಿ, ಸಾಂಪ್ರದಾಯಿಕವಾಗಿ ಮಾಡುವುದಕ್ಕೆ ಹೇಳಿದ್ದಾರೆ. ಮಳೆ, ಬೆಳೆ ಚೆನ್ನಾಗಿ ಆಗಿರುವುದರಿಂದ ವೈಭವದ ದಸರಾ ಮಾಡಲಾಗುತ್ತೆ ಎಂದರು.

ದಸರಾ ನೆಪದಲ್ಲಿ ಅಧಿಕಾರಿಗಳು ಸಾರ್ವಜನಕರಿಂದ ದೂರ ಆಗಬಾರದು. ದಿನನಿತ್ಯದ ಜನರ ಕೆಲಸಗಳಿಗೆ ತೊಂದರೆ ಆಗದಂತೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಪ್ರತಿವರ್ಷ ಲೈಟಿಂಗ್ ಅರೇಂಜಮೆಂಟ್ ಆಯಾ ಇಲಾಖೆಗೆ ನೀಡಲಾಗಿದೆ. ಮೂಡಾದಿಂದ(MUDA) 10 ಕೋಟಿ ನೀಡಲಾಗುತ್ತಿದ್ದು ಉಳಿದ ವೆಚ್ಚಕ್ಕೆ ಸರ್ಕಾರ ಹಣ ನೀಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಅದ್ದೂರಿ ದಸರಾ ಆಚರಣೆ ಬೆನ್ನಲ್ಲೇ ಮಾವುತರ ಹಾಗೂ ಕಾವಾಡಿಗರ ವಾರ್ನಿಂಗ್

ದಸರಾ ಮುಂಚಿತವಾಗಿ ವೇತನ ಹೆಚ್ಚಳಕ್ಕೆ ಮಾವುತರು ಹಾಗೂ ಕಾವಾಡಿಗರ ಸಂಘಟನೆ ಒತ್ತಡ ಹಾಕಿದೆ. ವೇತನ ಹೆಚ್ಚಳ‌‌ ಮಾಡದಿದ್ದರೆ ಗಜಪಯಣ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗ, ಚಾಮರಾಜನಗರ ಹಾಗೂ ಮೈಸೂರಿನ ಮಾವುತರು ಎಚ್ಚರಿಕೆ ನೀಡಿದ್ದಾರೆ. ಕುಶಾಲನಗರ ದುಬಾರೆ ಆನೆ ಶಿಬಿರದಲ್ಲಿ ಸಭೆ ಸೇರಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.

Published On - 6:12 pm, Tue, 19 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್