AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಸಂಚಾರಕ್ಕೆ ಪ್ರತ್ಯೇಕ ಮಾರ್ಗ ವ್ಯವಸ್ಥೆ; ಸಿಎಂ ಗೃಹ ಕಚೇರಿ ಹಾಗೂ ಖಾಸಗಿ ನಿವಾಸದ ಅಂತರ ಕಡಿತ

ಸಿಎಂ ಗೃಹ ಕಚೇರಿ ಕೃಷ್ಣಾದಿಂದ ಬರಲು ವಿಂಡ್ಸನ್ ಮ್ಯಾನರ್ ಬ್ರಿಡ್ಜ್, ಬಿಡಿಎ ಜಂಕ್ಷನ್, ಕಾವೇರಿ ಜಂಕ್ಷನ್, ಮೇಖ್ರಿ ಸರ್ಕಲ್‌ ಮಾರ್ಗವಾಗಿ ಬರುವ ಮುಖ್ಯಮಂತ್ರಿಗೆ, ಮೇಖ್ರಿ ಸರ್ಕಲ್ ಅಂಡರ್‌ಪಾಸ್ ಆದ ಬಳಿಕ ಹೊಸ ಮಾರ್ಗ ವ್ಯವಸ್ಥೆ ಕಲ್ಪಿಸಲಾಗಿದೆ.

ಮುಖ್ಯಮಂತ್ರಿ ಸಂಚಾರಕ್ಕೆ ಪ್ರತ್ಯೇಕ ಮಾರ್ಗ ವ್ಯವಸ್ಥೆ; ಸಿಎಂ ಗೃಹ ಕಚೇರಿ ಹಾಗೂ ಖಾಸಗಿ ನಿವಾಸದ ಅಂತರ ಕಡಿತ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 06, 2021 | 11:07 PM

Share

ಬೆಂಗಳೂರು: ಮುಖ್ಯಮಂತ್ರಿ ಸಂಚಾರಕ್ಕೆ ರಾತ್ರೋರಾತ್ರಿ ಪ್ರತ್ಯೇಕ ಮಾರ್ಗ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಆರ್​​.ಟಿ.ನಗರ ನಿವಾಸದಿಂದ ತೆರಳಲು ವ್ಯವಸ್ಥೆ ಮಾಡಿಕೊಡಲಾಗಿದೆ. ಮೇಖ್ರಿ ಸರ್ಕಲ್ ಬಳಿ ಡಿವೈಡರ್ ಒಡೆದು ಪ್ರತ್ಯೇಕ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಿಂದ ಬರಲು ವಿಂಡ್ಸನ್ ಮ್ಯಾನರ್ ಬ್ರಿಡ್ಜ್, ಬಿಡಿಎ ಜಂಕ್ಷನ್, ಕಾವೇರಿ ಜಂಕ್ಷನ್, ಮೇಖ್ರಿ ಸರ್ಕಲ್‌ ಮಾರ್ಗವಾಗಿ ಬರುವ ಮುಖ್ಯಮಂತ್ರಿಗೆ, ಮೇಖ್ರಿ ಸರ್ಕಲ್ ಅಂಡರ್‌ಪಾಸ್ ಆದ ಬಳಿಕ ಹೊಸ ಮಾರ್ಗ ವ್ಯವಸ್ಥೆ ಕಲ್ಪಿಸಲಾಗಿದೆ. ಆರ್‌ಟಿನಗರದ ತಮ್ಮ ನಿವಾಸಕ್ಕೆ ತೆರಳಲು ಡಿವೈಡರ್ ಒಡೆದು ಸಂಚಾರಿ ಪೊಲೀಸರು ಪ್ರತ್ಯೇಕ ಮಾರ್ಗದ ವ್ಯವಸ್ಥೆಯನ್ನು ಮಾಡಿದ್ದಾರೆ. ಇದರಿಂದ, ಸಿಎಂ ಗೃಹ ಕಚೇರಿ, ಖಾಸಗಿ ನಿವಾಸಕ್ಕೆ ಇದ್ದ ಅಂತರ ಕಡಿಮೆ ಆಗಿದೆ. ಗೃಹ ಕಚೇರಿ ಹಾಗೂ ಖಾಸಗಿ ನಿವಾಸಕ್ಕೆ ಮುಕ್ಕಾಲು ಕಿಲೋ ಮೀಟರ್ ದೂರ ಕಡಿಮೆ ಆಗಿದೆ.

ಸಿಎಂ ರಾಜಕೀಯ ಕಾರ್ಯದರ್ಶಿಗಳ ನೇಮಕ ರದ್ದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳ ನೇಮಕ ರದ್ದಾಗಿದೆ. ಈ ಬಗ್ಗೆ, ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಹೇಳಿಕೆ ನೀಡಿದೆ. ವಕೀಲ ಎಸ್. ಉಮಾಪತಿ ಸಲ್ಲಿಸಿದ್ದ ಪಿಐಎಲ್ ಇತ್ಯರ್ಥವಾಗಿದೆ. ಸಿಎಂ ರಾಜಕೀಯ ಕಾರ್ಯದರ್ಶಿಗಳ ನೇಮಕವನ್ನು ಪಿಐಎಲ್ ಮೂಲಕ ಪ್ರಶ್ನಿಸಲಾಗಿತ್ತು. ಈ ಸಂಬಂಧ ಹೈಕೋರ್ಟ್, ರಾಜಕೀಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಿತ್ತು. ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿಗಳ ನೇಮಕ ರದ್ದುಗೊಂಡಿದೆ.

ಸಿಎಂ ಸಚಿವಾಲಯಕ್ಕೆ ಇಬ್ಬರು ಅಧಿಕಾರಿಗಳ ನೇಮಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವಾಲಯಕ್ಕೆ ಇಬ್ಬರು ಅಧಿಕಾರಗಳನ್ನು ನೇಮಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಇಬ್ಬರು ಅಧಿಕಾರಿಗಳ ನೇಮಕ ಆಗಿದೆ. ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಹಾಗೂ ವಿಶೇಷ ಕರ್ತವ್ಯಾಧಿಕಾರಿಯಾಗಿ ಎನ್. ರಂಗರಾಜು ನೇಮಕಗೊಂಡಿದ್ದಾರೆ.

ಇದನ್ನೂ ಓದಿ: ಖಾತೆ ಹಂಚಿಕೆಗೂ ಮುನ್ನ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ – ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಭೇಟಿ; ನದಿ ನೀರು ಹಂಚಿಕೆ ಕುರಿತು ಮಾತುಕತೆ

(CM Basavaraj Bommai House to Office distance shortened by preparing new route road)

Published On - 11:01 pm, Fri, 6 August 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!