AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCCC: ಸೆಂಟ್ರಲ್ ಕ್ಲಿನಿಕಲ್ ಕಮ್ಯಾಂಡ್ ಸೆಂಟರ್ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಸೆಂಟ್ರಲ್ ಕ್ಲಿನಿಕಲ್ ಕಮ್ಯಾಂಡ್ ಸೆಂಟರ್​ನ್ನು ಸದಾಶಿವನಗರದಲ್ಲಿ ಇಂದು (ಮಾ. 11) ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

CCCC: ಸೆಂಟ್ರಲ್ ಕ್ಲಿನಿಕಲ್ ಕಮ್ಯಾಂಡ್ ಸೆಂಟರ್ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಸೆಂಟ್ರಲ್ ಕ್ಲಿನಿಕಲ್ ಕಮ್ಯಾಂಡ್​ ಸೆಂಟರ್ (ಸಂಗ್ರಹ ಚಿತ್ರ)Image Credit source: thehindu.com
ಗಂಗಾಧರ​ ಬ. ಸಾಬೋಜಿ
|

Updated on:Mar 11, 2023 | 5:07 PM

Share

ಬೆಂಗಳೂರು: ಸೆಂಟ್ರಲ್ ಕ್ಲಿನಿಕಲ್ ಕಮ್ಯಾಂಡ್ ಸೆಂಟರ್​ನ್ನು (Central Clinical Command Centre) ಸದಾಶಿವನಗರದಲ್ಲಿ ಇಂದು (ಮಾ. 11) ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಸುಮಾರು 21 ಕೋಟಿ ರೂ. ವೆಚ್ಚದಲ್ಲಿ ಈ ಸೆಂಟ್ರಲ್ ಕ್ಲಿನಿಕಲ್ ಕಮ್ಯಾಂಡ್ ಸೆಂಟರ್​ನ್ನು ನಿರ್ಮಿಸಲಾಗಿದೆ. ಸೆಂಟ್ರಲ್ ಕ್ಲಿನಿಕಲ್ ಕಮ್ಯಾಂಡ್ ಸೆಂಟರ್ ಉದ್ಘಾಟಿಸಿ​ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರತಿಯೊಬ್ಬ ರೋಗಿಗೂ ಸಮಯಕ್ಕೆ‌ ಸರಿಯಾಗಿ ಚಿಕಿತ್ಸೆ ಸಿಗಬೇಕು. ಗೋಲ್ಡನ್ ಟೈಮ್​​ನಲ್ಲಿ ಚಿಕಿತ್ಸೆ ಸಿಕ್ಕರೆ ರೋಗಿ ಬೇಗನೇ ಗುಣಮುಖರಾಗುತ್ತಾರೆ. ಈ‌ ನಿಟ್ಟಿನಲ್ಲಿ ಈ ರೀತಿಯ ಸ್ಮಾರ್ಟ್ ಕ್ಲಿನಿಕ್​ಗಳನ್ನ ಓಪನ್ ಮಾಡಲಾಗಿದೆ. ಒಬ್ಬ ಮಂತ್ರಿ‌ ವೈದ್ಯಾಧಿಕಾರಿಯಾಗಿದ್ದರೆ ಜನರಿಗೆ ಆರೋಗ್ಯ ಸೇವೆ ನೀಡಲು ಸಹಕಾರಿಯಾಗಲಿದೆ. ಜೊತೆಗೆ ಅಶ್ವಥ್ ನಾರಾಯಣ ಅವರು ಲೇಟೆಸ್ಟ್ ಟೆಕ್ನಾಲಜಿ ಅಳವಡಿಸಿರುವುದು ಅವರ ಮತ್ತೊಂದು ವಿಶೇಷ ಎಂದರು.

ಔಷಧಿ‌ ಫ್ರೀ,‌ ಲ್ಯಾಬ್ ಫ್ರೀ ಇರಲಿದೆ. ಎಲ್ಲವೂ ಒಂದೇ ಕಡೆ ಸಿಗುವಂತೆ ಮಾಡಲಾಗಿದೆ. ಇದೆಲ್ಲದಕ್ಕೂ ಟೆಕ್ನಾಲಜಿ ಬಹಳ ಸಹಾಯಕವಾಗಿದೆ. ಇನ್ನು ಹೆಚ್ಚಿನ ಪಿಹೆಚ್​ಸಿ ಸೆಂಟರ್​ಗಳನ್ನ ಬೆಂಗಳೂರಿನಲ್ಲಿ ತೆರೆಯುತ್ತೇವೆ. ಈ ವಿನೂತನ ಕಾರ್ಯಕ್ರಮ ಖಂಡಿತ ಯಶಸ್ವಿಯಾಗಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನ ಕೆರೆಗಳ ಕಲ್ಮಶ ಸಂಖ್ಯೆ ಏರಿಕೆ: BWSSB ನಿರ್ಲಕ್ಷ್ಯವೇ ಕಾರಣ?

ಹಾಗಾದರೆ ಸೆಂಟ್ರಲ್ ಕ್ಲಿನಿಕಲ್ ಕಮ್ಯಾಂಡ್ ಸೆಂಟರ್​ ಎಂದರೆ ಏನು? 

ಬೆಂಗಳೂರಿನಲ್ಲಿ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ದೊರಕಿಸುವ ಉದ್ದೇಶದಿಂದ 243 ವಾರ್ಡ್​ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್​ ವರ್ಚುವಲ್ ಕ್ಲಿನಿಕ್​ಗಳನ್ನ ರಾಜ್ಯ ಸರ್ಕಾರ ಬಜೆಟ್​ನಲ್ಲಿ ಅನುಮೋದಿಸಲಾಗಿತ್ತು. ಈ ಹಿನ್ನೆಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ಸ್ಮಾರ್ಟ್​ ಸಿಟಿ ಯೋಜನೆಯಡಿ ಡಿಜಿಟಲ್​​ ರೂಪದಲ್ಲಿ ವೈದ್ಯರ ಜೊತೆ ಸಂಪರ್ಕ ಸಾಧಿಸುವ ವ್ಯವಸ್ಥೆಯೇ ಈ ಸ್ಮಾರ್ಟ್​ ವರ್ಚುವಲ್ ಕ್ಲಿನಿಕ್. ಇಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳೊಂದಿಗೆ ಕಮ್ಯಾಂಡ್ ಸೆಂಟರ್​​ನಿಂದ ತಜ್ಞ ವೈದ್ಯರು ವರ್ಚುವಲ್ ಸಮಾಲೋಚನೆ‌ ನಡೆಸುತ್ತಾರೆ.

ಪ್ರಾಥಮಿಕ ಆರೋಗ್ಯ ಸೌಲಭ್ಯವನ್ನು ಸದೃಢಗೊಳಿಸಿ, ಸಮಾಜದ ಪ್ರತಿ ಸಮುದಾಯಕ್ಕೂ ಒದಗಿಸಬೇಕು ಎಂಬ ಉದ್ದೇಶವನ್ನು ಸ್ಮಾರ್ಟ್​ ವರ್ಚುವಲ್ ಕ್ಲಿನಿಕ್​ ಹೊಂದಿದೆ. ಸಣ್ಣಪುಟ್ಟ ಚಿಕಿತ್ಸೆಗೆ ಆಸ್ಪತ್ರೆಗೆ ಹೋಗಬೇಕಾದ ಅಗತ್ಯ ಇರುವುದಿಲ್ಲ. ಸ್ಮಾರ್ಟ್​ ವರ್ಚುವಲ್ ಕ್ಲಿನಿಕ್​ಗೆ ಬರುವ ರೋಗಿಯ ಎಲ್ಲ ವಿವರಗಳನ್ನು ಮೊಬೈಲ್​ ಆ್ಯಪ್​ ಮೂಲಕ ದಾಖಲಿಸಲಾಗುತ್ತದೆ. ಇಲ್ಲಿರುವ ವೈದ್ಯ ಸಿಬ್ಬಂದಿ ಒಟ್ಟು 16 ಬಗೆಯ ತಪಾಸಣೆ ಮಾಡುವ ವ್ಯವಸ್ಥೆ ಹೊಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಅಭಿವೃದ್ಧಿಯ ಪಥಕ್ಕೆ ಕೊಡುಗೆ: ಪ್ರಧಾನಿ ಮೋದಿ

ಸ್ಮಾರ್ಟ್​ ವರ್ಚುವಲ್ ಕ್ಲಿನಿಕ್​ನಿಂದಲೇ ವಿಡಿಯೋ ಕಾನ್ಫರೆನ್ಸ್​​​ ಮೂಲಕ ಸೆಂಟ್ರಲ್ ಕ್ಲಿನಿಕಲ್ ಕಮ್ಯಾಂಡ್ ಸೆಂಟರ್​ಗೆ​ ಸಂಪರ್ಕಿಸಲಾಗುತ್ತದೆ. ಇಲ್ಲಿ 20 ತಜ್ಞ ವೈದ್ಯರಿರುತ್ತಾರೆ. ರೋಗಿಯ ಅಗತ್ಯಕ್ಕಸುಸಾರವಾಗಿ ತಪಾಸಣೆ ನಡೆಸಲು ವೈದ್ಯರು ಸಿಬ್ಬಂದಿಗೆ ಸೂಚಿಸುತ್ತಾರೆ. ಸಲಹೆ ಹಾಗೂ ಚಿಕಿತ್ಸೆಯನ್ನು ಸಹ ನೀಡಲಾಗುತ್ತದೆ. ಬಳಿಕ ರೋಗಿಯ ವಿವರಗಳನ್ನು ಸಿಬ್ಬಂದಿ ಡಿಜಟಲೀಕರಣವನ್ನು ಮಾಡುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:50 pm, Sat, 11 March 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು