AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೆ ಪಠ್ಯಪರಿಷ್ಕರಣೆ ಗುದ್ದಾಟ: ವಿರೋಧಿಗಳಿಗೆ ಕೌಂಟರ್ ನೀಡಲು ಬುಕ್​ಲೆಟ್ ಸಿದ್ಧಪಡಿಸಿದ ಶಿಕ್ಷಣ ಇಲಾಖೆ

ಪಠ್ಯ ಪರಿಷ್ಕರಣೆಗೆ ಭಾರಿ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ತನ್ನ ನಿರ್ಧಾರವನ್ನು ಮರುಪರಿಶೀಲಿಸಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಕರ್ನಾಟಕದಲ್ಲಿ ಮತ್ತೆ ಪಠ್ಯಪರಿಷ್ಕರಣೆ ಗುದ್ದಾಟ: ವಿರೋಧಿಗಳಿಗೆ ಕೌಂಟರ್ ನೀಡಲು ಬುಕ್​ಲೆಟ್ ಸಿದ್ಧಪಡಿಸಿದ ಶಿಕ್ಷಣ ಇಲಾಖೆ
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 23, 2022 | 1:41 PM

Share

ಬೆಂಗಳೂರು: ಕರ್ನಾಟಕದಲ್ಲಿ ಪಠ್ಯಪರಿಷ್ಕರಣೆ ವಿವಾದ (Textbook Revision Controversy) ಮತ್ತೆ ಗರಿಗೆದರುವ ಎಲ್ಲ ಸಾಧ್ಯತೆಗಳು ಗೋಚರಿಸುತ್ತಿವೆ. ಪಠ್ಯ ಪರಿಷ್ಕರಣೆ ವಿರೋಧಿಸುತ್ತಿರುವವರು ಪ್ರಸ್ತಾಪಿಸುತ್ತಿರುವ ಅಂಶಗಳಿಗೆ ಸ್ಪಷ್ಟನೆ ನೀಡುವ ಕಿರುಪುಸ್ತಿಕೆಗಳನ್ನು (ಬುಕ್​ಲೆಟ್) ಶಿಕ್ಷಣ ಇಲಾಖೆ ಸಿದ್ಧಪಡಿಸಿದೆ. ಇದರಲ್ಲಿ ಬರಗೂರು ರಾಮಚಂದ್ರಪ್ಪ (Baraguru Ramachandrappa) ಸಮಿತಿಯಿಂದ ಆಗಿರುವ ಲೋಪಗಳನ್ನು ಮುಖ್ಯವಾಗಿ ಪ್ರಸ್ತಾಪಿಸಲಾಗಿದ್ದು, ಸಚಿವ ಆರ್.ಅಶೋಕ್ ಅವರು ಮಾಧ್ಯಮಗೋಷ್ಠಿಯಲ್ಲಿ ಕಿರುಪುಸ್ತಿಕೆಗಳನ್ನು ಬಿಡುಗಡೆ ಮಾಡಿದರು. ಇದರಲ್ಲಿ ಬರಗೂರು ಸಮಿತಿ ಮಾಡಿರುವ 150ಕ್ಕೂ ಹೆಚ್ಚು ತಪ್ಪುಗಳನ್ನು ಶಿಕ್ಷಣ ಇಲಾಖೆ ಗುರುತಿಸಿದೆ.

ಈ ನಡುವೆ ಪಠ್ಯ ಪರಿಷ್ಕರಣೆಗೆ ಭಾರಿ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ತನ್ನ ನಿರ್ಧಾರವನ್ನು ಮರುಪರಿಶೀಲಿಸಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ. ಹಳೆಯ ಪಠ್ಯ ಪುಸ್ತಕವನ್ನೇ ಮುಂದುವರಿಸಬೇಕೆಂದು ಹಲವು ಗಣ್ಯರು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗೆ ಎಚ್​.ಡಿ.ದೇವೇಗೌಡ ಸೇರಿದಂತೆ ಹಲವು ಸ್ವಾಮೀಜಿಗಳು ಪತ್ರ ಬರೆದಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಸಲಹೆ ಪಾಲಿಸುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯ ಸೂಚನೆ ಮೇರೆಗೆ ಶಿಕ್ಷಣ ಇಲಾಖೆಯು ಮತ್ತೊಮ್ಮೆ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ.

ಈ ಸಂಬಂಧ ಮುಖ್ಯಮಂತ್ರಿಗಳು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಇಲಾಖೆಯ ಇತರ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದರು. ಸಿಎಂ ಸೂಚನೆಯಂತೆ ತಜ್ಞ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಮಿತಿಯೊಂದಿಗೆ ಈ ಬಾರಿ ಶಿಕ್ಷಣ ಇಲಾಖೆಯೇ ತಪ್ಪುಗಳನ್ನು ಸರಿಪಡಿಸಲು ಮುಂದಾಗಿದೆ. ಇನ್ನೇರಡು ವಾರಗಳ ಒಳಗೆ ತಪ್ಪು ಸರಿ ಮಾಡಿ ಸಿಎಂರಿಂದ ಅನುಮತಿ ಪಡೆದು ಪಠ್ಯ ನೀಡಲು ಶಿಕ್ಷಣ ಇಲಾಖೆ ತಯಾರಿ ಮಾಡಿಕೊಳ್ಳುತ್ತಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ