AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7,500 ಹೊಸ NCC ಕೆಡೆಟ್ಸ್ ತೆಗೆದುಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ; ಓಬವ್ವ ಆತ್ಮ ರಕ್ಷಣಾ ಕಲಾ ಕೌಶಲ್ಯ ತರಬೇತಿ ಚಾಲನೆ ವೇಳೆ ಸಿಎಂ ಬೊಮ್ಮಾಯಿ ಮಾತು

7,500 ಹೊಸ ಕೆಡೆಟ್ಸ್ ತೆಗೆದುಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ. 44 ಸಾವಿರ ಶಾಲೆಗಳಲ್ಲಿ ಎನ್‌ಸಿಸಿ ಇದೆ. NCC ಕೆಡೆಟ್‌ಗಳ ಕಾರ್ಯಕ್ರಮ ಶೈಲಿ ಬದಲಾಯಿಸಿ. ಹೊಸ ಪರಿವರ್ತನೆಗೆ ರಕ್ಷಣಾ ಮಂತ್ರಿಗಳ ಅನುಮತಿ ಕೇಳಿದ್ದೇವೆ. -ಸಿಎಂ ಬೊಮ್ಮಾಯಿ

7,500 ಹೊಸ NCC ಕೆಡೆಟ್ಸ್ ತೆಗೆದುಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ; ಓಬವ್ವ ಆತ್ಮ ರಕ್ಷಣಾ ಕಲಾ ಕೌಶಲ್ಯ ತರಬೇತಿ ಚಾಲನೆ ವೇಳೆ ಸಿಎಂ ಬೊಮ್ಮಾಯಿ ಮಾತು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ಆಯೇಷಾ ಬಾನು|

Updated on:Feb 06, 2022 | 12:05 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನಸೌಧದಲ್ಲಿ ಓಬವ್ವ ಆತ್ಮ ರಕ್ಷಣಾ ಕಲಾ ಕೌಶಲ್ಯ ತರಬೇತಿ ಚಾಲನೆ ಕಾರ್ಯಕ್ರಮ ಉದ್ಘಾಟಿಸಿದರು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಹಾಗೂ ಕ್ರೈಸ್ತ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಹೆಣ್ಣು ಮಕ್ಕಳಿಗೆ ಆತ್ಮ ರಕ್ಷಣೆಯ ಕಲೆಯನ್ನು ತರಬೇತಿ ನೀಡುವ ಕಾರ್ಯಕ್ರಮ ಇದಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಆತ್ಮ ರಕ್ಷಣೆ ಕಲೆಗಳ ಪ್ರದರ್ಶನ ಮಾಡಿದರು.

ಸಿಎಂ ಎದೆ ಎತ್ತರಕ್ಕೆ ಕಾಲು ಬೀಸಿದ ವಿದ್ಯಾರ್ಥಿನಿ ಓಬವ್ವ ಆತ್ಮ‌ರಕ್ಷಣೆ ತರಬೇತಿ ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಮೊದಲು ಸಿಎಂ ಬೊಮ್ಮಾಯಿ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಸಿಎಂ ಎದೆ ಎತ್ತರಕ್ಕೆ ವಿದ್ಯಾರ್ಥಿನಿ ಕಾಲು ಬೀಸಿ ತಮ್ಮ ಕೌಶಲ್ಯ ಪ್ರದರ್ಶಿಸಿದಳು. ಆಗ ವಿದ್ಯಾರ್ಥಿನಿಗೆ ಸಿಎಂ ಶಬ್ಬಾಶ್ ಗಿರಿ ಕೊಟ್ಟರು. ತಮ್ಮ ಎದೆ ಎತ್ತರಕ್ಕೆ ಕೈ ಹಿಡಿದು ಕಿಕ್ ಮಾಡುವಂತೆ ವಿದ್ಯಾರ್ಥಿನಿಗೆ ಸೂಚಿಸಿ ವಿದ್ಯಾರ್ಥಿಯನ್ನು ಟೆಸ್ಟ್ ಮಾಡಿದರು.

ಇನ್ನು ಇದೇ ವೇಳೆ ಕಾರ್ಯಕ್ರಮ ಉದ್ಘಾಟನೆ ಬಳಿಕ ಸಿಎಂ ಬೊಮ್ಮಾಯಿ ಮಾತನಾಡಿದ್ದು ಸ್ವಾತಂತ್ರ್ಯ ಹೋರಾಟ ಮಾಡಿದ ಕಿತ್ತೂರು ಚೆನ್ನಮ್ಮ, ಕೆಳದಿ ಚೆನ್ನಮ್ಮ, ಬೆಳವಡಿ ಮ್ಮಲ್ಲಮ್ಮ, ಒನಕೆ ಓಬವ್ವ, ಇವರು ಪುರುಷರನ್ನೂ ಮೀರಿಸುವ ಪೌರುಷ ಹೊಂದಿದ್ದರು ಎಂದರು. ದೇಶ ಕಟ್ಟುವುದಕ್ಕೆ ಆರ್ಥಿಕ ಅಭಿವೃದ್ಧಿ ಎಷ್ಟು ಮುಖ್ಯವೋ ಸ್ಫೂರ್ತಿ ಕೂಡ ಅಷ್ಟೇ ಮುಖ್ಯವಾಗಿರುತ್ತೆ. ಒಳ್ಳೆಯ ಇತಿಹಾಸ ಇದ್ದರೆ ದೆಶದ ಭವಿಷ್ಯ ಚೆನ್ನಾಗಿರುತ್ತದೆ. ಕನ್ನಡಿಗರ ಇತಿಹಾಸ ಹೋರಾಟ ಮತ್ತೆ ಮರುಕಳಿಸಿ ವೈಭವೀಕರಿಸಿ ಸ್ಫೂರ್ತಿ ತುಂಬುವ ಕಾಲ ಈಗ ಮತ್ತೆ ಬಂದಿದೆ.

7,500 ಹೊಸ ಕೆಡೆಟ್ಸ್ ತೆಗೆದುಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ. 44 ಸಾವಿರ ಶಾಲೆಗಳಲ್ಲಿ ಎನ್‌ಸಿಸಿ ಇದೆ. NCC ಕೆಡೆಟ್‌ಗಳ ಕಾರ್ಯಕ್ರಮ ಶೈಲಿ ಬದಲಾಯಿಸಿ. ಹೊಸ ಪರಿವರ್ತನೆಗೆ ರಕ್ಷಣಾ ಮಂತ್ರಿಗಳ ಅನುಮತಿ ಕೇಳಿದ್ದೇವೆ. 50 ಸಾವಿರಕ್ಕೂ ಹೆಚ್ಚು ಕೆಡೆಟ್ಗಳಿಗೆ ರಾಜ್ಯದಿಂದ ಮಿಲಿಟ್ರಿ ಸಮಾನವಾದ ಶಿಕ್ಷಣ ನೀಡುವುದಕ್ಕೆ ತೀರ್ಮಾನ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಾದಯಾತ್ರೆ, ರೋಡ್ ಶೋಗಳಿಗೆ ನಿಷೇಧ ಮುಂದುವರಿಸಿದ ಚುನಾವಣಾ ಆಯೋಗ, ಸಭೆಗಳಿಗೆ ನಿರ್ಬಂಧ ಸಡಿಲಿಕೆ

‘ಬೆಳ್ಳನೆ ಬೆಳಗಾಯಿತು..’ ಎಂದು ಕನ್ನಡಿಗರ ಮನ ಗೆದ್ದಿದ್ದ ಲತಾ ಮಂಗೇಶ್ಕರ್​; ಇಲ್ಲಿದೆ ಅವರ ಕನ್ನಡ ಗೀತೆ ಬಗ್ಗೆ ವಿವರ

Published On - 11:58 am, Sun, 6 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ