AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7,500 ಹೊಸ NCC ಕೆಡೆಟ್ಸ್ ತೆಗೆದುಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ; ಓಬವ್ವ ಆತ್ಮ ರಕ್ಷಣಾ ಕಲಾ ಕೌಶಲ್ಯ ತರಬೇತಿ ಚಾಲನೆ ವೇಳೆ ಸಿಎಂ ಬೊಮ್ಮಾಯಿ ಮಾತು

7,500 ಹೊಸ ಕೆಡೆಟ್ಸ್ ತೆಗೆದುಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ. 44 ಸಾವಿರ ಶಾಲೆಗಳಲ್ಲಿ ಎನ್‌ಸಿಸಿ ಇದೆ. NCC ಕೆಡೆಟ್‌ಗಳ ಕಾರ್ಯಕ್ರಮ ಶೈಲಿ ಬದಲಾಯಿಸಿ. ಹೊಸ ಪರಿವರ್ತನೆಗೆ ರಕ್ಷಣಾ ಮಂತ್ರಿಗಳ ಅನುಮತಿ ಕೇಳಿದ್ದೇವೆ. -ಸಿಎಂ ಬೊಮ್ಮಾಯಿ

7,500 ಹೊಸ NCC ಕೆಡೆಟ್ಸ್ ತೆಗೆದುಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ; ಓಬವ್ವ ಆತ್ಮ ರಕ್ಷಣಾ ಕಲಾ ಕೌಶಲ್ಯ ತರಬೇತಿ ಚಾಲನೆ ವೇಳೆ ಸಿಎಂ ಬೊಮ್ಮಾಯಿ ಮಾತು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: ಆಯೇಷಾ ಬಾನು|

Updated on:Feb 06, 2022 | 12:05 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನಸೌಧದಲ್ಲಿ ಓಬವ್ವ ಆತ್ಮ ರಕ್ಷಣಾ ಕಲಾ ಕೌಶಲ್ಯ ತರಬೇತಿ ಚಾಲನೆ ಕಾರ್ಯಕ್ರಮ ಉದ್ಘಾಟಿಸಿದರು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಹಾಗೂ ಕ್ರೈಸ್ತ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಹೆಣ್ಣು ಮಕ್ಕಳಿಗೆ ಆತ್ಮ ರಕ್ಷಣೆಯ ಕಲೆಯನ್ನು ತರಬೇತಿ ನೀಡುವ ಕಾರ್ಯಕ್ರಮ ಇದಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಆತ್ಮ ರಕ್ಷಣೆ ಕಲೆಗಳ ಪ್ರದರ್ಶನ ಮಾಡಿದರು.

ಸಿಎಂ ಎದೆ ಎತ್ತರಕ್ಕೆ ಕಾಲು ಬೀಸಿದ ವಿದ್ಯಾರ್ಥಿನಿ ಓಬವ್ವ ಆತ್ಮ‌ರಕ್ಷಣೆ ತರಬೇತಿ ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಮೊದಲು ಸಿಎಂ ಬೊಮ್ಮಾಯಿ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಸಿಎಂ ಎದೆ ಎತ್ತರಕ್ಕೆ ವಿದ್ಯಾರ್ಥಿನಿ ಕಾಲು ಬೀಸಿ ತಮ್ಮ ಕೌಶಲ್ಯ ಪ್ರದರ್ಶಿಸಿದಳು. ಆಗ ವಿದ್ಯಾರ್ಥಿನಿಗೆ ಸಿಎಂ ಶಬ್ಬಾಶ್ ಗಿರಿ ಕೊಟ್ಟರು. ತಮ್ಮ ಎದೆ ಎತ್ತರಕ್ಕೆ ಕೈ ಹಿಡಿದು ಕಿಕ್ ಮಾಡುವಂತೆ ವಿದ್ಯಾರ್ಥಿನಿಗೆ ಸೂಚಿಸಿ ವಿದ್ಯಾರ್ಥಿಯನ್ನು ಟೆಸ್ಟ್ ಮಾಡಿದರು.

ಇನ್ನು ಇದೇ ವೇಳೆ ಕಾರ್ಯಕ್ರಮ ಉದ್ಘಾಟನೆ ಬಳಿಕ ಸಿಎಂ ಬೊಮ್ಮಾಯಿ ಮಾತನಾಡಿದ್ದು ಸ್ವಾತಂತ್ರ್ಯ ಹೋರಾಟ ಮಾಡಿದ ಕಿತ್ತೂರು ಚೆನ್ನಮ್ಮ, ಕೆಳದಿ ಚೆನ್ನಮ್ಮ, ಬೆಳವಡಿ ಮ್ಮಲ್ಲಮ್ಮ, ಒನಕೆ ಓಬವ್ವ, ಇವರು ಪುರುಷರನ್ನೂ ಮೀರಿಸುವ ಪೌರುಷ ಹೊಂದಿದ್ದರು ಎಂದರು. ದೇಶ ಕಟ್ಟುವುದಕ್ಕೆ ಆರ್ಥಿಕ ಅಭಿವೃದ್ಧಿ ಎಷ್ಟು ಮುಖ್ಯವೋ ಸ್ಫೂರ್ತಿ ಕೂಡ ಅಷ್ಟೇ ಮುಖ್ಯವಾಗಿರುತ್ತೆ. ಒಳ್ಳೆಯ ಇತಿಹಾಸ ಇದ್ದರೆ ದೆಶದ ಭವಿಷ್ಯ ಚೆನ್ನಾಗಿರುತ್ತದೆ. ಕನ್ನಡಿಗರ ಇತಿಹಾಸ ಹೋರಾಟ ಮತ್ತೆ ಮರುಕಳಿಸಿ ವೈಭವೀಕರಿಸಿ ಸ್ಫೂರ್ತಿ ತುಂಬುವ ಕಾಲ ಈಗ ಮತ್ತೆ ಬಂದಿದೆ.

7,500 ಹೊಸ ಕೆಡೆಟ್ಸ್ ತೆಗೆದುಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ. 44 ಸಾವಿರ ಶಾಲೆಗಳಲ್ಲಿ ಎನ್‌ಸಿಸಿ ಇದೆ. NCC ಕೆಡೆಟ್‌ಗಳ ಕಾರ್ಯಕ್ರಮ ಶೈಲಿ ಬದಲಾಯಿಸಿ. ಹೊಸ ಪರಿವರ್ತನೆಗೆ ರಕ್ಷಣಾ ಮಂತ್ರಿಗಳ ಅನುಮತಿ ಕೇಳಿದ್ದೇವೆ. 50 ಸಾವಿರಕ್ಕೂ ಹೆಚ್ಚು ಕೆಡೆಟ್ಗಳಿಗೆ ರಾಜ್ಯದಿಂದ ಮಿಲಿಟ್ರಿ ಸಮಾನವಾದ ಶಿಕ್ಷಣ ನೀಡುವುದಕ್ಕೆ ತೀರ್ಮಾನ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಾದಯಾತ್ರೆ, ರೋಡ್ ಶೋಗಳಿಗೆ ನಿಷೇಧ ಮುಂದುವರಿಸಿದ ಚುನಾವಣಾ ಆಯೋಗ, ಸಭೆಗಳಿಗೆ ನಿರ್ಬಂಧ ಸಡಿಲಿಕೆ

‘ಬೆಳ್ಳನೆ ಬೆಳಗಾಯಿತು..’ ಎಂದು ಕನ್ನಡಿಗರ ಮನ ಗೆದ್ದಿದ್ದ ಲತಾ ಮಂಗೇಶ್ಕರ್​; ಇಲ್ಲಿದೆ ಅವರ ಕನ್ನಡ ಗೀತೆ ಬಗ್ಗೆ ವಿವರ

Published On - 11:58 am, Sun, 6 February 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ